<p><strong>ವಿರಾಜಪೇಟೆ:</strong> ಪಟ್ಟಣದ ತೆಲುಗರ ಬೀದಿಯ ಅಂಗಾಳ ಪರಮೇಶ್ವರಿ ದೇವಾಲಯದ ವಾರ್ಷಿಕ ಉತ್ಸವವು ಸೋಮವಾರ ಶ್ರದ್ಧಾಭಕ್ತಿಯಿಂದ ಸಂಪನ್ನಗೊಂಡಿತ್ತು.</p>.<p>13ರಂದು ದೇವಾಲಯದ ವಾರ್ಷಿಕ ಉತ್ಸವಕ್ಕೆ ಚಾಲನೆ ನೀಡಲಾಗಿತ್ತು. ಉತ್ಸವದ 2ನೇ ದಿನದಂದು ದೇವಾಲಯದ ರಕ್ಷಕ ದೈವಗಳಿಗೆ ಪೂಜೆ ಸಮರ್ಪಿಸಲಾಯಿತು. ಉತ್ಸವ ಪ್ರಮುಖ ದಿನವಾದ 3ನೇ ದಿನದಂದು ದೇವಿಗೆ 4 ಕಾಲಗಳ ಮಹಾಪೂಜೆ ನೆರವೇರಿಸಲಾಯಿತು. ಈ ಸಂದರ್ಭ ಸುಗಂಧ ದ್ರವ್ಯ, ಪುಷ್ಪರ್ಚನೆ ಹಾಗೂ ವಿವಿಧ ಅಭಿಷೇಕ ಸೇರಿದಂತೆ ಧಾರ್ಮಿಕ ವಿಧಿವಿಧಾನ ನೆರವೇರಿಸಲಾಯಿತು.</p>.<p>ಉತ್ಸವದ ಕೊನೆಯ ದಿನದಂದು ಮಹಾಪೂಜೆಯ ಬಳಿಕ ಪಟ್ಟಣದ ಮುಖ್ಯರಸ್ತೆಯಲ್ಲಿ ದೇವಿಯ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿರಿಸಿ ಮೆರವಣಿಗೆ ನಡೆಸಲಾಯಿತು.</p>.<p>ಮೆರವಣಿಗೆಯು ಪಟ್ಟಣದ ಮಲಬಾರ್ ರಸ್ತೆಯಲ್ಲಿನ ಕಂಚಿ ಕಾಮಾಕ್ಷಿ ದೇವಾಲದಲ್ಲಿ ಪೂಜೆ ಸಲ್ಲಿಸಿ ದೇವಾಲಯಕ್ಕೆ ಹಿಂದಿರುಗಿತು. ಮೆರವಣಿಗೆಯಲ್ಲಿ ವಿವಿಧ ದೇವರ ಪ್ರತಿರೂಪಗಳೊಂದಿಗೆ, ಚಂಡೆಮೇಳ, ವಿವಿಧ ಧಾನ್ಯಗಳ ಸಸಿ ಹೊತ್ತ ಮಹಿಳೆಯರು ಮೆರವಣಿಗೆಯಲ್ಲಿ ಗಮನಸೆಳೆದರು. ಉತ್ಸವದ ಅಂಗವಾಗಿ ದೇವಾಲಯದಲ್ಲಿ ಅನ್ನ ಸಂತರ್ಪಣೆ ನಡೆಸಲಾಯಿತು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿರಾಜಪೇಟೆ:</strong> ಪಟ್ಟಣದ ತೆಲುಗರ ಬೀದಿಯ ಅಂಗಾಳ ಪರಮೇಶ್ವರಿ ದೇವಾಲಯದ ವಾರ್ಷಿಕ ಉತ್ಸವವು ಸೋಮವಾರ ಶ್ರದ್ಧಾಭಕ್ತಿಯಿಂದ ಸಂಪನ್ನಗೊಂಡಿತ್ತು.</p>.<p>13ರಂದು ದೇವಾಲಯದ ವಾರ್ಷಿಕ ಉತ್ಸವಕ್ಕೆ ಚಾಲನೆ ನೀಡಲಾಗಿತ್ತು. ಉತ್ಸವದ 2ನೇ ದಿನದಂದು ದೇವಾಲಯದ ರಕ್ಷಕ ದೈವಗಳಿಗೆ ಪೂಜೆ ಸಮರ್ಪಿಸಲಾಯಿತು. ಉತ್ಸವ ಪ್ರಮುಖ ದಿನವಾದ 3ನೇ ದಿನದಂದು ದೇವಿಗೆ 4 ಕಾಲಗಳ ಮಹಾಪೂಜೆ ನೆರವೇರಿಸಲಾಯಿತು. ಈ ಸಂದರ್ಭ ಸುಗಂಧ ದ್ರವ್ಯ, ಪುಷ್ಪರ್ಚನೆ ಹಾಗೂ ವಿವಿಧ ಅಭಿಷೇಕ ಸೇರಿದಂತೆ ಧಾರ್ಮಿಕ ವಿಧಿವಿಧಾನ ನೆರವೇರಿಸಲಾಯಿತು.</p>.<p>ಉತ್ಸವದ ಕೊನೆಯ ದಿನದಂದು ಮಹಾಪೂಜೆಯ ಬಳಿಕ ಪಟ್ಟಣದ ಮುಖ್ಯರಸ್ತೆಯಲ್ಲಿ ದೇವಿಯ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿರಿಸಿ ಮೆರವಣಿಗೆ ನಡೆಸಲಾಯಿತು.</p>.<p>ಮೆರವಣಿಗೆಯು ಪಟ್ಟಣದ ಮಲಬಾರ್ ರಸ್ತೆಯಲ್ಲಿನ ಕಂಚಿ ಕಾಮಾಕ್ಷಿ ದೇವಾಲದಲ್ಲಿ ಪೂಜೆ ಸಲ್ಲಿಸಿ ದೇವಾಲಯಕ್ಕೆ ಹಿಂದಿರುಗಿತು. ಮೆರವಣಿಗೆಯಲ್ಲಿ ವಿವಿಧ ದೇವರ ಪ್ರತಿರೂಪಗಳೊಂದಿಗೆ, ಚಂಡೆಮೇಳ, ವಿವಿಧ ಧಾನ್ಯಗಳ ಸಸಿ ಹೊತ್ತ ಮಹಿಳೆಯರು ಮೆರವಣಿಗೆಯಲ್ಲಿ ಗಮನಸೆಳೆದರು. ಉತ್ಸವದ ಅಂಗವಾಗಿ ದೇವಾಲಯದಲ್ಲಿ ಅನ್ನ ಸಂತರ್ಪಣೆ ನಡೆಸಲಾಯಿತು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>