<p><strong>ವಿರಾಜಪೇಟೆ</strong>: ಸಮೀಪದ ಪೆರುಂಬಾಡಿ ಗ್ರಾಮದ ಯೂತ್ ಫ್ರೆಂಡ್ಸ್ ಸಂಘದ ವತಿಯಿಂದ ಈಚೆಗೆ ನಡೆದ 5 ನೇ ವರ್ಷದ ಹೊನಲು ಬೆಳಕಿನ ಪ್ರೋ ಮ್ಯಾಟ್ ಕಬಡ್ಡಿ ಲೀಗ್ನಲ್ಲಿ ಬ್ಲ್ಯಾಕ್ ಪ್ಯಾಂಥರ್ಸ್ ತಂಡ ಪ್ರಶಸ್ತಿ ಪಡೆಯಿತು.</p>.<p>ಗ್ರಾಮದ ಅಯ್ಯಪ್ಪ ಭಜನಾ ಮಂದಿರದ ಆವರಣದಲ್ಲಿ ನಡೆದ ಲೀಗ್ನ ಫೈನಲ್ ಪಂದ್ಯದ ರೋಚಕ ಹಣಾಹಣಿಯಲ್ಲಿ ಬ್ಲಾಕ್ ಪ್ಯಾಂಥರ್ಸ್ ತಂಡ 23-21 ಪಾಯಿಂಟ್ಗಳಿಂದ ಡ್ರೀಮ್ ವರ್ಲ್ಡ್ ತಂಡವನ್ನು ಮಣಿಸಿತು. ಉತ್ತಮ ಪೈಪೋಟಿ ನೀಡಿದ ಡ್ರೀಮ್ ವರ್ಲ್ಡ್ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳಬೇಕಾಯಿತು.</p>.<p>ವಿಜೇತ ತಂಡವು ಆಕರ್ಷಕ ಟ್ರೋಫಿ ಮತ್ತು ₹50 ಸಾವಿರ ನಗದು ಹಾಗೂ ದ್ವಿತೀಯ ಸ್ಥಾನ ಪಡೆದ ಡ್ರೀಂ ವರ್ಲ್ಡ್ ತಂಡ ಆಕರ್ಷಕ ಟ್ರೋಫಿ ಮತ್ತು ₹30 ನಗದು ಬಹುಮಾನ ಪಡೆಯಿತು.</p>.<p>ಪ್ರಥಮ ಕ್ವಾಲಿಫೈಯರ್ ಪಂದ್ಯದಲ್ಲಿ ಬ್ಲ್ಯಾಕ್ ಪ್ಯಾಂಥರ್ಸ್ ತಂಡ ಡ್ರೀಂ ವರ್ಲ್ಡ್ ತಂಡವನ್ನು ಮಣಿಸಿ ಫೈನಲ್ ಪ್ರವೇಶಿಸಿತ್ತು.</p>.<p>ಎಲಿಮಿನೇಟರ್ ಪಂದ್ಯದಲ್ಲಿ ಜಿಂಗಲಕ ತಂಡವು ಸೆವೆನ್ ಈಗಲ್ ತಂಡ ಮಣಿಸಿ ಎರಡನೇ ಕ್ವಾಲಿಫಯರ್ ಪಂದ್ಯಕ್ಕೆ ಅರ್ಹತೆ ಗಳಿಸಿತ್ತು. 2ನೇ ಕ್ವಾಲಿಫೈಯರ್ಸ್ ಪಂದ್ಯದಲ್ಲಿ ಡ್ರೀಂ ವರ್ಲ್ಡ್ ತಂಡ ಜಿಂಗಲಕ ತಂಡವನ್ನು ಮಣಿಸಿ ಫೈನಲ್ಸ್ಗೆ ಅರ್ಹತೆ ಪಡೆದುಕೊಂಡಿತ್ತು.</p>.<p>ಟೂರ್ನಿಯ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಪ್ರಜ್ವಲ್, ಉತ್ತಮ ರೈಡರ್ ಪ್ರಶಸ್ತಿಯನ್ನು ದರ್ಶನ್, ಉತ್ತಮ ಡಿಫೆಂಡರ್ ಪ್ರಶಸ್ತಿಯನ್ನು ಅಜಿಲೇಶ್ ಪಡೆದರು.</p>.<p>ಎರಡು ದಿನ ನಡೆದ ಕಬಡ್ಡಿ ಟೂರ್ನಿಯಲ್ಲಿ ಸಮೀಪದ ಹೆಗ್ಗಳ, ಪೆರುಂಬಾಡಿ, ಬೋಯಿಕೇರಿ, ವಿರಾಜಪೇಟೆ ಪಟ್ಟಣದ ಎಂಟು ತಂಡಗಳು ಭಾಗವಹಿಸಿದ್ದವು. ಚೇತನ್, ಕಾರ್ತಿಕ್ ಮತ್ತು ಜಾನ್ಸನ್ ಅವರು ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು.</p>.<p>ಉತ್ತಮ ಬಾಂಧ್ಯವಕ್ಕೆ ಕ್ರೀಡೆ ಸಹಕಾರಿ: ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಬಿ.ಎಂ.ಗಣೇಶ್ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಕ್ರೀಡಾಕೂಟಗಳ ಆಯೋಜನೆಯಿಂದ ಗ್ರಾಮೀಣ ಪ್ರತಿಭೆಗಳು ಹೊರಹೊಮ್ಮಲು ಸಾಧ್ಯವಾಗುತ್ತಿದೆ. ಜೊತೆಗೆ ಗ್ರಾಮಗಳ ನಡುವೆಯೂ ಉತ್ತಮ ಬಾಂಧವ್ಯ ಹೊಂದಲು ಸಹಕಾರಿಯಾಗಿದೆ ಎಂದರು.</p>.<p>ಯೂತ್ ಫ್ರೆಂಡ್ಸ್ನ ಅಧ್ಯಕ್ಷ ಹರೀಶ್ ಕುಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ, ಕೆಡಿಪಿ ಸದಸ್ಯ ಶಶಿ, ಸಿ.ಆರ್. ಬಾಬು, ಮಾಜಿ ಸೈನಿಕ ವಾಸು, ಕೆ.ಕೆ. ಅನಿಲ್ ಕುಮಾರ್ ಉಪಸ್ಥಿತರಿದ್ದರು.</p>.<p>ಯೂತ್ ಫ್ರೆಂಡ್ಸ್ ಸಂಘದ ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು, ವಿವಿಧ ತಂಡಗಳ ಮಾಲೀಕರು, ಕ್ರೀಡಾಪ್ರೇಮಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿರಾಜಪೇಟೆ</strong>: ಸಮೀಪದ ಪೆರುಂಬಾಡಿ ಗ್ರಾಮದ ಯೂತ್ ಫ್ರೆಂಡ್ಸ್ ಸಂಘದ ವತಿಯಿಂದ ಈಚೆಗೆ ನಡೆದ 5 ನೇ ವರ್ಷದ ಹೊನಲು ಬೆಳಕಿನ ಪ್ರೋ ಮ್ಯಾಟ್ ಕಬಡ್ಡಿ ಲೀಗ್ನಲ್ಲಿ ಬ್ಲ್ಯಾಕ್ ಪ್ಯಾಂಥರ್ಸ್ ತಂಡ ಪ್ರಶಸ್ತಿ ಪಡೆಯಿತು.</p>.<p>ಗ್ರಾಮದ ಅಯ್ಯಪ್ಪ ಭಜನಾ ಮಂದಿರದ ಆವರಣದಲ್ಲಿ ನಡೆದ ಲೀಗ್ನ ಫೈನಲ್ ಪಂದ್ಯದ ರೋಚಕ ಹಣಾಹಣಿಯಲ್ಲಿ ಬ್ಲಾಕ್ ಪ್ಯಾಂಥರ್ಸ್ ತಂಡ 23-21 ಪಾಯಿಂಟ್ಗಳಿಂದ ಡ್ರೀಮ್ ವರ್ಲ್ಡ್ ತಂಡವನ್ನು ಮಣಿಸಿತು. ಉತ್ತಮ ಪೈಪೋಟಿ ನೀಡಿದ ಡ್ರೀಮ್ ವರ್ಲ್ಡ್ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳಬೇಕಾಯಿತು.</p>.<p>ವಿಜೇತ ತಂಡವು ಆಕರ್ಷಕ ಟ್ರೋಫಿ ಮತ್ತು ₹50 ಸಾವಿರ ನಗದು ಹಾಗೂ ದ್ವಿತೀಯ ಸ್ಥಾನ ಪಡೆದ ಡ್ರೀಂ ವರ್ಲ್ಡ್ ತಂಡ ಆಕರ್ಷಕ ಟ್ರೋಫಿ ಮತ್ತು ₹30 ನಗದು ಬಹುಮಾನ ಪಡೆಯಿತು.</p>.<p>ಪ್ರಥಮ ಕ್ವಾಲಿಫೈಯರ್ ಪಂದ್ಯದಲ್ಲಿ ಬ್ಲ್ಯಾಕ್ ಪ್ಯಾಂಥರ್ಸ್ ತಂಡ ಡ್ರೀಂ ವರ್ಲ್ಡ್ ತಂಡವನ್ನು ಮಣಿಸಿ ಫೈನಲ್ ಪ್ರವೇಶಿಸಿತ್ತು.</p>.<p>ಎಲಿಮಿನೇಟರ್ ಪಂದ್ಯದಲ್ಲಿ ಜಿಂಗಲಕ ತಂಡವು ಸೆವೆನ್ ಈಗಲ್ ತಂಡ ಮಣಿಸಿ ಎರಡನೇ ಕ್ವಾಲಿಫಯರ್ ಪಂದ್ಯಕ್ಕೆ ಅರ್ಹತೆ ಗಳಿಸಿತ್ತು. 2ನೇ ಕ್ವಾಲಿಫೈಯರ್ಸ್ ಪಂದ್ಯದಲ್ಲಿ ಡ್ರೀಂ ವರ್ಲ್ಡ್ ತಂಡ ಜಿಂಗಲಕ ತಂಡವನ್ನು ಮಣಿಸಿ ಫೈನಲ್ಸ್ಗೆ ಅರ್ಹತೆ ಪಡೆದುಕೊಂಡಿತ್ತು.</p>.<p>ಟೂರ್ನಿಯ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಪ್ರಜ್ವಲ್, ಉತ್ತಮ ರೈಡರ್ ಪ್ರಶಸ್ತಿಯನ್ನು ದರ್ಶನ್, ಉತ್ತಮ ಡಿಫೆಂಡರ್ ಪ್ರಶಸ್ತಿಯನ್ನು ಅಜಿಲೇಶ್ ಪಡೆದರು.</p>.<p>ಎರಡು ದಿನ ನಡೆದ ಕಬಡ್ಡಿ ಟೂರ್ನಿಯಲ್ಲಿ ಸಮೀಪದ ಹೆಗ್ಗಳ, ಪೆರುಂಬಾಡಿ, ಬೋಯಿಕೇರಿ, ವಿರಾಜಪೇಟೆ ಪಟ್ಟಣದ ಎಂಟು ತಂಡಗಳು ಭಾಗವಹಿಸಿದ್ದವು. ಚೇತನ್, ಕಾರ್ತಿಕ್ ಮತ್ತು ಜಾನ್ಸನ್ ಅವರು ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು.</p>.<p>ಉತ್ತಮ ಬಾಂಧ್ಯವಕ್ಕೆ ಕ್ರೀಡೆ ಸಹಕಾರಿ: ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಬಿ.ಎಂ.ಗಣೇಶ್ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಕ್ರೀಡಾಕೂಟಗಳ ಆಯೋಜನೆಯಿಂದ ಗ್ರಾಮೀಣ ಪ್ರತಿಭೆಗಳು ಹೊರಹೊಮ್ಮಲು ಸಾಧ್ಯವಾಗುತ್ತಿದೆ. ಜೊತೆಗೆ ಗ್ರಾಮಗಳ ನಡುವೆಯೂ ಉತ್ತಮ ಬಾಂಧವ್ಯ ಹೊಂದಲು ಸಹಕಾರಿಯಾಗಿದೆ ಎಂದರು.</p>.<p>ಯೂತ್ ಫ್ರೆಂಡ್ಸ್ನ ಅಧ್ಯಕ್ಷ ಹರೀಶ್ ಕುಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ, ಕೆಡಿಪಿ ಸದಸ್ಯ ಶಶಿ, ಸಿ.ಆರ್. ಬಾಬು, ಮಾಜಿ ಸೈನಿಕ ವಾಸು, ಕೆ.ಕೆ. ಅನಿಲ್ ಕುಮಾರ್ ಉಪಸ್ಥಿತರಿದ್ದರು.</p>.<p>ಯೂತ್ ಫ್ರೆಂಡ್ಸ್ ಸಂಘದ ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು, ವಿವಿಧ ತಂಡಗಳ ಮಾಲೀಕರು, ಕ್ರೀಡಾಪ್ರೇಮಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>