<p><strong>ವಿರಾಜಪೇಟೆ</strong>: ‘ಸಕಲ ಜೀವಾತ್ಮರಿಗೆ ಒಳಿತನ್ನೆ ಬಯಸುವ ಬಸವಣ್ಣನವರ ತತ್ವ ಸಿದ್ಧಾಂತಗಳನ್ನು ಪ್ರತಿಯೊಬ್ಬರು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಸಮೀಪದ ಅರಮೇರಿ ಕಳಂಚೇರಿ ಪೀಠಾಧಿಪತಿ ಹಾಗೂ ವೀರಶೈವ ಮಹಾಸಭಾ ಗೌರವ ಅಧ್ಯಕ್ಷ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.</p>.<p>ಅಖಿಲ ಭಾರತ ವೀರಶೈವ ಮಹಾಸಭಾ ಪೊನ್ನಂಪೇಟೆ ಹಾಗೂ ವಿರಾಜಪೇಟೆ ತಾಲ್ಲೂಕು ಘಟಕದ ವತಿಯಿಂದ ಸಮೀಪದ ಅರಮೇರಿ ಕಳಂಚೇರಿ ಮಠದ ಶ್ರೀ ಲಿಂಗರಾಜೇಂದ್ರ ಭವನದಲ್ಲಿ ಈಚೆಗೆ ಬಸವ ಜಯಂತಿಯ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಪ್ರತಿಯೊಬ್ಬರಿಗೂ ಒಳಿತನ್ನೆ ಬಯಸಿದ ಬಸವಣ್ಣನವರ ತತ್ವಗಳು ಉತ್ತಮ ಸಮಾಜ ನಿರ್ಮಾಣಕ್ಕೆ ಪೂರಕ. ಆದ್ದರಿಂದಲೇ ಇಂದು ವಿಶ್ವದೆಲ್ಲೆಡೆ ಬಸವಣ್ಣನವರ ಜಯಂತಿ ಆಚರಿಸಲಾಗುತ್ತಿದೆ. ಜೊತೆಗೆ 1805ರಲ್ಲಿ ಕೊಡಗನ್ನು ಆಳಿದ ವೀರರಾಜೇಂದ್ರ ಅವರನ್ನು ನಾವು ಸ್ಮರಿಸಬೇಕು ಎಂದರು.</p>.<p>ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಮನೆಹಳ್ಳಿ ತಪೋ ಕ್ಷೇತ್ರ ಮಠದ ಮಹಾಂತ ಶಿವಲಿಂಗ ಸ್ವಾಮೀಜಿ, ಯಾರು ತಮ್ಮ ಬದುಕಿನಲ್ಲಿ ಮಹಾತ್ಮರನ್ನು ನೆನಪಿಸಿಕೊಳ್ಳುತ್ತಾರೊ ಅಂಥವರು ಜೀವನದಲ್ಲಿ ಶಾಂತಿ ನೆಮ್ಮದಿಯಿಂದ ಬದುಕುತ್ತಾರೆ. ಬಸವಣ್ಣನ ತತ್ವಗಳು ಅಂದು, ಇಂದು, ಎಂದೆಂದಿಗೂ ಅಗತ್ಯ. ಹಿಂದೆ ಕೊಡಗಿನಲ್ಲಿ 43 ಮಠಗಳಿದ್ದವು. ಆದರೆ, ಇತ್ತೀಚೆಗೆ ಮಠಗಳ ಸಂಖ್ಯೆ ಕಡಿಮೆಯಾಗಿ ಕೇವಲ 13 ಮಠಗಳಿವೆ. ಎಲ್ಲ ಮಠಗಳ ರಕ್ಷಣೆ ಹಾಗೂ ಮಹಾತ್ಮರನ್ನು ನೆನಪಿಸುವಂತಹ ಕಾರ್ಯ ಆಗಬೇಕು ಎಂದರು.</p>.<p>ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಘಟಕದ ಸದಸ್ಯರಾದ ಅನುರಾಧ ಚಂದ್ರಶೇಖರ್ ಮಾತನಾಡಿ, ವೀರಶೈವ ಸಮಾಜದ ಬಾಂಧವರು ಸಂಘಟನೆ ಮೂಲಕ ಸೌಲಭ್ಯ ಪಡೆದುಕೊಳ್ಳಲು, ಪ್ರತಿಯೊಬ್ಬರು ಸಂಘದ ಸದಸ್ಯತ್ವ ಪಡೆದುಕೊಳ್ಳಬೇಕು. ತಮ್ಮ ಮಕ್ಕಳಿಗೆ ವಚನಗಳನ್ನು ಕಲಿಸುವಂತಾಗಬೇಕು ಎಂದರು.</p>.<p>ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ಎಂ.ರಾಜೇಶ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿನ ವೀರಶೈವ ಸಮಾಜ ಬಾಂಧವರು ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಸದಸ್ಯತ್ವ ಪಡೆದುಕೊಂಡು ಮುಂದೆಯೂ ಹೆಚ್ಚುಹೆಚ್ಚು ಕಾರ್ಯಕ್ರಮಗಳನ್ನು ನಡೆಸಲು ಪ್ರೋತ್ಸಾಹ ನೀಡಬೇಕು ಎಂದರು.</p>.<p>ಅಖಿಲ ಭಾರತ ವೀರಶೈವ ಮಹಾಸಭಾದ ಕೊಡಗು ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷ ದೀಪಿಕಾ ಕರ್ಣ, ಜಿಲ್ಲಾ ಘಟಕದ ಉಪಾಧ್ಯಕ್ಷ ಚಂಪ ಉಮೇಶ್ ಮತ್ತು ಎಸ್.ಎಸ್.ಸುರೇಶ್ ಅವರು ಸಭೆ ಉದ್ದೇಶಿಸಿ ಮಾತನಾಡಿದರು.</p>.<p>ರಾಜ್ಯ ಮಟ್ಟದ ಅಥ್ಲೆಟಿಕ್ ಕೂಟದಲ್ಲಿ ಚಿನ್ನದ ಪದಕ ಪಡೆದ ವಿದ್ಯಾರ್ಥಿ ಎ.ಆರ್.ಅಕ್ಷಯ್ ಮತ್ತು 7ನೇ ತರಗತಿ, ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಪೊನ್ನಂಪೇಟೆ-ವಿರಾಜಪೇಟೆ ತಾಲ್ಲೂಕಿನ ಸಮುದಾಯದ ವಿದ್ಯಾರ್ಥಿಗಳಿಗೆ ಈ ಸಂದರ್ಭ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.</p>.<p>ಮಹಾಸಭಾದ ತಾಲ್ಲೂಕು ಘಟಕದ ಉಪಾಧ್ಯಕ್ಷ ಶ್ರೀಕಂಠಪ್ಪ ಪ್ರಾರ್ಥಿಸಿದರು. ಕಾರ್ಯದರ್ಶಿ ವೇದಾ ಜಯರಾಜು, ಶಿಕ್ಷಕಿ ಜ್ಯೋತಿ, ಪ್ರದೀಪ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-51-1839026319</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿರಾಜಪೇಟೆ</strong>: ‘ಸಕಲ ಜೀವಾತ್ಮರಿಗೆ ಒಳಿತನ್ನೆ ಬಯಸುವ ಬಸವಣ್ಣನವರ ತತ್ವ ಸಿದ್ಧಾಂತಗಳನ್ನು ಪ್ರತಿಯೊಬ್ಬರು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಸಮೀಪದ ಅರಮೇರಿ ಕಳಂಚೇರಿ ಪೀಠಾಧಿಪತಿ ಹಾಗೂ ವೀರಶೈವ ಮಹಾಸಭಾ ಗೌರವ ಅಧ್ಯಕ್ಷ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.</p>.<p>ಅಖಿಲ ಭಾರತ ವೀರಶೈವ ಮಹಾಸಭಾ ಪೊನ್ನಂಪೇಟೆ ಹಾಗೂ ವಿರಾಜಪೇಟೆ ತಾಲ್ಲೂಕು ಘಟಕದ ವತಿಯಿಂದ ಸಮೀಪದ ಅರಮೇರಿ ಕಳಂಚೇರಿ ಮಠದ ಶ್ರೀ ಲಿಂಗರಾಜೇಂದ್ರ ಭವನದಲ್ಲಿ ಈಚೆಗೆ ಬಸವ ಜಯಂತಿಯ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಪ್ರತಿಯೊಬ್ಬರಿಗೂ ಒಳಿತನ್ನೆ ಬಯಸಿದ ಬಸವಣ್ಣನವರ ತತ್ವಗಳು ಉತ್ತಮ ಸಮಾಜ ನಿರ್ಮಾಣಕ್ಕೆ ಪೂರಕ. ಆದ್ದರಿಂದಲೇ ಇಂದು ವಿಶ್ವದೆಲ್ಲೆಡೆ ಬಸವಣ್ಣನವರ ಜಯಂತಿ ಆಚರಿಸಲಾಗುತ್ತಿದೆ. ಜೊತೆಗೆ 1805ರಲ್ಲಿ ಕೊಡಗನ್ನು ಆಳಿದ ವೀರರಾಜೇಂದ್ರ ಅವರನ್ನು ನಾವು ಸ್ಮರಿಸಬೇಕು ಎಂದರು.</p>.<p>ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಮನೆಹಳ್ಳಿ ತಪೋ ಕ್ಷೇತ್ರ ಮಠದ ಮಹಾಂತ ಶಿವಲಿಂಗ ಸ್ವಾಮೀಜಿ, ಯಾರು ತಮ್ಮ ಬದುಕಿನಲ್ಲಿ ಮಹಾತ್ಮರನ್ನು ನೆನಪಿಸಿಕೊಳ್ಳುತ್ತಾರೊ ಅಂಥವರು ಜೀವನದಲ್ಲಿ ಶಾಂತಿ ನೆಮ್ಮದಿಯಿಂದ ಬದುಕುತ್ತಾರೆ. ಬಸವಣ್ಣನ ತತ್ವಗಳು ಅಂದು, ಇಂದು, ಎಂದೆಂದಿಗೂ ಅಗತ್ಯ. ಹಿಂದೆ ಕೊಡಗಿನಲ್ಲಿ 43 ಮಠಗಳಿದ್ದವು. ಆದರೆ, ಇತ್ತೀಚೆಗೆ ಮಠಗಳ ಸಂಖ್ಯೆ ಕಡಿಮೆಯಾಗಿ ಕೇವಲ 13 ಮಠಗಳಿವೆ. ಎಲ್ಲ ಮಠಗಳ ರಕ್ಷಣೆ ಹಾಗೂ ಮಹಾತ್ಮರನ್ನು ನೆನಪಿಸುವಂತಹ ಕಾರ್ಯ ಆಗಬೇಕು ಎಂದರು.</p>.<p>ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಘಟಕದ ಸದಸ್ಯರಾದ ಅನುರಾಧ ಚಂದ್ರಶೇಖರ್ ಮಾತನಾಡಿ, ವೀರಶೈವ ಸಮಾಜದ ಬಾಂಧವರು ಸಂಘಟನೆ ಮೂಲಕ ಸೌಲಭ್ಯ ಪಡೆದುಕೊಳ್ಳಲು, ಪ್ರತಿಯೊಬ್ಬರು ಸಂಘದ ಸದಸ್ಯತ್ವ ಪಡೆದುಕೊಳ್ಳಬೇಕು. ತಮ್ಮ ಮಕ್ಕಳಿಗೆ ವಚನಗಳನ್ನು ಕಲಿಸುವಂತಾಗಬೇಕು ಎಂದರು.</p>.<p>ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ಎಂ.ರಾಜೇಶ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿನ ವೀರಶೈವ ಸಮಾಜ ಬಾಂಧವರು ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಸದಸ್ಯತ್ವ ಪಡೆದುಕೊಂಡು ಮುಂದೆಯೂ ಹೆಚ್ಚುಹೆಚ್ಚು ಕಾರ್ಯಕ್ರಮಗಳನ್ನು ನಡೆಸಲು ಪ್ರೋತ್ಸಾಹ ನೀಡಬೇಕು ಎಂದರು.</p>.<p>ಅಖಿಲ ಭಾರತ ವೀರಶೈವ ಮಹಾಸಭಾದ ಕೊಡಗು ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷ ದೀಪಿಕಾ ಕರ್ಣ, ಜಿಲ್ಲಾ ಘಟಕದ ಉಪಾಧ್ಯಕ್ಷ ಚಂಪ ಉಮೇಶ್ ಮತ್ತು ಎಸ್.ಎಸ್.ಸುರೇಶ್ ಅವರು ಸಭೆ ಉದ್ದೇಶಿಸಿ ಮಾತನಾಡಿದರು.</p>.<p>ರಾಜ್ಯ ಮಟ್ಟದ ಅಥ್ಲೆಟಿಕ್ ಕೂಟದಲ್ಲಿ ಚಿನ್ನದ ಪದಕ ಪಡೆದ ವಿದ್ಯಾರ್ಥಿ ಎ.ಆರ್.ಅಕ್ಷಯ್ ಮತ್ತು 7ನೇ ತರಗತಿ, ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಪೊನ್ನಂಪೇಟೆ-ವಿರಾಜಪೇಟೆ ತಾಲ್ಲೂಕಿನ ಸಮುದಾಯದ ವಿದ್ಯಾರ್ಥಿಗಳಿಗೆ ಈ ಸಂದರ್ಭ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.</p>.<p>ಮಹಾಸಭಾದ ತಾಲ್ಲೂಕು ಘಟಕದ ಉಪಾಧ್ಯಕ್ಷ ಶ್ರೀಕಂಠಪ್ಪ ಪ್ರಾರ್ಥಿಸಿದರು. ಕಾರ್ಯದರ್ಶಿ ವೇದಾ ಜಯರಾಜು, ಶಿಕ್ಷಕಿ ಜ್ಯೋತಿ, ಪ್ರದೀಪ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-51-1839026319</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>