<p><strong>ವಿರಾಜಪೇಟೆ</strong>: ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದ ಮಹಾ ಪುರುಷರನ್ನು ಸ್ಮರಿಸುವುದರೊಂದಿಗೆ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಮುನ್ನಡೆಯಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಶುಕ್ರವಾರ ನಡೆದ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಇತಿಹಾಸ ತಿರುಚುವ ಕೆಲಸ ಇಂದು ಸಮಾಜದಲ್ಲಿ ಕೆಲವರಿಂದ ಆಗುತ್ತಿದೆ. ಇದರಿಂದ ಬಲಿದಾನಗೈದ ಮಹನೀಯರ ಕೊಡುಗೆ ಮರೆತಂತಾಗುತ್ತದೆ. ಸ್ವಾತಂತ್ರ್ಯ ಸೇನಾನಿಗಳನ್ನು ಗೌರವಿಸಬೇಕು. ಎಲ್ಲ ವರ್ಗದವರಿಗೂ ಸಮಾಜದಲ್ಲಿ ನ್ಯಾಯ ದೊರೆಯಬೇಕು. ಆಗ ಮಾತ್ರ ನಿಜವಾದ ಸ್ವತಂತ್ರ ಸಿಕ್ಕಿದಂತಾಗುತ್ತದೆ’ ಎಂದರು.</p>.<p>ತಹಶೀಲ್ದಾರ್ ಪ್ರವೀಣ್ ಕುಮಾರ್ ಮಾತನಾಡಿ, ‘ಸ್ವಾತಂತ್ರ್ಯ ಯೋಧರ ತ್ಯಾಗ ಬಲಿದಾನವನ್ನು ಸ್ಮರಿಸಿಕೊಳ್ಳಬೇಕಿದೆ. ಪ್ರತಿಯೊಬ್ಬ ಭಾರತೀಯನು ತಾನು ಭಾರತೀಯ ಎನ್ನುವುದಕ್ಕೆ ಹೆಮ್ಮೆಪಡಬೇಕು’ ಎಂದರು.</p>.<p>ವೇದಿಕೆಯಲ್ಲಿ ಪುರಸಭೆಯ ಅಧ್ಯಕ್ಷೆ ಎಂ.ಕೆ.ದೇಚಮ್ಮ, ಡಿವೈಎಸ್ಪಿ ಮಹೇಶ್ ಕುಮಾರ್, ಸಿಪಿಐ ಅನೂಪ್ ಮಾದಪ್ಪ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ರಾಜೇಶ್, ಮಾಜಿ ಸೈನಿಕರ ಸಹಕಾರ ಸಂಘದ ಅಧ್ಯಕ್ಷ ಚಪ್ಪಂಡ ಹರೀಶ್ ಭಾಗವಹಿಸಿದ್ದರು.</p>.<p>ಮಾಜಿ ಯೋಧರನ್ನು ಸನ್ಮಾನಿಸಲಾಯಿತು. ವಿವಿಧ ಶಾಲೆಗಳ ವಿದ್ಯಾರ್ಥಿಗಳು ದೇಶಭಕ್ತಿಯನ್ನು ಸಾರುವ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರದರ್ಶಿಸಿದರು.</p>.<p> ನಿವೃತ್ತ ಸೈನಿಕರಿಗೆ ಸನ್ಮಾನ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನ ಸ್ವಾತಂತ್ರ್ಯ ಯೋಧರ ಬಲಿದಾನ ಸ್ಮರಿಸಲು ಮನವಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿರಾಜಪೇಟೆ</strong>: ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದ ಮಹಾ ಪುರುಷರನ್ನು ಸ್ಮರಿಸುವುದರೊಂದಿಗೆ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಮುನ್ನಡೆಯಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಶುಕ್ರವಾರ ನಡೆದ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಇತಿಹಾಸ ತಿರುಚುವ ಕೆಲಸ ಇಂದು ಸಮಾಜದಲ್ಲಿ ಕೆಲವರಿಂದ ಆಗುತ್ತಿದೆ. ಇದರಿಂದ ಬಲಿದಾನಗೈದ ಮಹನೀಯರ ಕೊಡುಗೆ ಮರೆತಂತಾಗುತ್ತದೆ. ಸ್ವಾತಂತ್ರ್ಯ ಸೇನಾನಿಗಳನ್ನು ಗೌರವಿಸಬೇಕು. ಎಲ್ಲ ವರ್ಗದವರಿಗೂ ಸಮಾಜದಲ್ಲಿ ನ್ಯಾಯ ದೊರೆಯಬೇಕು. ಆಗ ಮಾತ್ರ ನಿಜವಾದ ಸ್ವತಂತ್ರ ಸಿಕ್ಕಿದಂತಾಗುತ್ತದೆ’ ಎಂದರು.</p>.<p>ತಹಶೀಲ್ದಾರ್ ಪ್ರವೀಣ್ ಕುಮಾರ್ ಮಾತನಾಡಿ, ‘ಸ್ವಾತಂತ್ರ್ಯ ಯೋಧರ ತ್ಯಾಗ ಬಲಿದಾನವನ್ನು ಸ್ಮರಿಸಿಕೊಳ್ಳಬೇಕಿದೆ. ಪ್ರತಿಯೊಬ್ಬ ಭಾರತೀಯನು ತಾನು ಭಾರತೀಯ ಎನ್ನುವುದಕ್ಕೆ ಹೆಮ್ಮೆಪಡಬೇಕು’ ಎಂದರು.</p>.<p>ವೇದಿಕೆಯಲ್ಲಿ ಪುರಸಭೆಯ ಅಧ್ಯಕ್ಷೆ ಎಂ.ಕೆ.ದೇಚಮ್ಮ, ಡಿವೈಎಸ್ಪಿ ಮಹೇಶ್ ಕುಮಾರ್, ಸಿಪಿಐ ಅನೂಪ್ ಮಾದಪ್ಪ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ರಾಜೇಶ್, ಮಾಜಿ ಸೈನಿಕರ ಸಹಕಾರ ಸಂಘದ ಅಧ್ಯಕ್ಷ ಚಪ್ಪಂಡ ಹರೀಶ್ ಭಾಗವಹಿಸಿದ್ದರು.</p>.<p>ಮಾಜಿ ಯೋಧರನ್ನು ಸನ್ಮಾನಿಸಲಾಯಿತು. ವಿವಿಧ ಶಾಲೆಗಳ ವಿದ್ಯಾರ್ಥಿಗಳು ದೇಶಭಕ್ತಿಯನ್ನು ಸಾರುವ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರದರ್ಶಿಸಿದರು.</p>.<p> ನಿವೃತ್ತ ಸೈನಿಕರಿಗೆ ಸನ್ಮಾನ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನ ಸ್ವಾತಂತ್ರ್ಯ ಯೋಧರ ಬಲಿದಾನ ಸ್ಮರಿಸಲು ಮನವಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>