<p><strong>ವಿರಾಜಪೇಟೆ</strong>: ಪಟ್ಟಣದ ತೆಲುಗರ ಬೀದಿಯ ದಕ್ಷಿಣ ಮಾರಿಯಮ್ಮ ದೇಗುಲದ ವಾರ್ಷಿಕ ಕರಗ ಮಹೋತ್ಸವವು ಮೇ 7 ರಿಂದ ಆರಂಭವಾಗಲಿದೆ ಎಂದು ದಕ್ಷಿಣ ಮಾರಿಯಮ್ಮ ಮತ್ತು ಅಂಗಾಳ ಪರಮೇಶ್ವರಿ ದೇವಾಲಯ ಟ್ರಸ್ಟ್ ಆಡಳಿತ ಮಂಡಳಿ ತಿಳಿಸಿದೆ.</p>.<p>ಕರಗ ಮಹೋತ್ಸವ ಮೇ 11 ರವರೆಗೆ ನಡೆಯಲಿದೆ. 5 ದಿನ ನಡೆಯುವ ಉತ್ಸವದಲ್ಲಿ 7 ರಂದು ದೇವಿಯ ಕರಗದ ಮೆರವಣಿಗೆ, ರಾತ್ರಿ ಮಹಾಪೂಜೆ, ಪ್ರಸಾದ ವಿನಿಯೋಗ ನಡೆಯಲಿದೆ. 8 ರಂದು ರಾತ್ರಿ 7ಕ್ಕೆ ತಂಬಿಟ್ಟು ಆರತಿ ಸೇವೆ ಮತ್ತು ವಿಶೇಷ ಪೂಜೆ, ಪ್ರಸಾದ ವಿನಿಯೋಗ, 9 ರಂದು ಮಧ್ಯಾಹ್ನ ದೇವಿಗೆ ವಿಶೇಷ ಅಲಂಕಾರ ಸೇವೆ, ಹರಕೆ ಸೇವೆ ನಡೆದು ಮಹಾ ಪೂಜೆ, ಮಹಾ ಮಂಗಳಾರತಿ ನಡೆಯಲಿದೆ.</p>.<p>ಮೇ 10 ರಂದು ರಾತ್ರಿ ದೇವಿಗೆ ಅಲಂಕಾರ ಪೂಜೆ , ಭಕ್ತರಿಗೆ ಅನ್ನಸಂತರ್ಪಣೆ ನಡೆಯಲಿದೆ. 11 ರಂದು ಸಂಜೆ ಕರಗವು ತೆಲುಗರ ಬೀದಿ, ಜೈನರ ಬೀದಿ, ಎಫ್.ಎಂ.ಸಿ ರಸ್ತೆ, ಖಾಸಗಿ ಬಸ್ನಿಲ್ದಾಣದ ಜಂಕ್ಷನ್ ವರೆಗೆ ಸಂಚರಿಸಿ ದೇವಾಲಯಕ್ಕೆ ಹಿಂದಿರುಗಲಿದೆ. ಬಳಿಕ ಮಹಾ ಪೂಜೆ , ಪ್ರಸಾದ ವಿನಿಯೋಗದೊಂದಿಗೆ ಕರಗ ಮಹೋತ್ಸವ ಕೊನೆಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿರಾಜಪೇಟೆ</strong>: ಪಟ್ಟಣದ ತೆಲುಗರ ಬೀದಿಯ ದಕ್ಷಿಣ ಮಾರಿಯಮ್ಮ ದೇಗುಲದ ವಾರ್ಷಿಕ ಕರಗ ಮಹೋತ್ಸವವು ಮೇ 7 ರಿಂದ ಆರಂಭವಾಗಲಿದೆ ಎಂದು ದಕ್ಷಿಣ ಮಾರಿಯಮ್ಮ ಮತ್ತು ಅಂಗಾಳ ಪರಮೇಶ್ವರಿ ದೇವಾಲಯ ಟ್ರಸ್ಟ್ ಆಡಳಿತ ಮಂಡಳಿ ತಿಳಿಸಿದೆ.</p>.<p>ಕರಗ ಮಹೋತ್ಸವ ಮೇ 11 ರವರೆಗೆ ನಡೆಯಲಿದೆ. 5 ದಿನ ನಡೆಯುವ ಉತ್ಸವದಲ್ಲಿ 7 ರಂದು ದೇವಿಯ ಕರಗದ ಮೆರವಣಿಗೆ, ರಾತ್ರಿ ಮಹಾಪೂಜೆ, ಪ್ರಸಾದ ವಿನಿಯೋಗ ನಡೆಯಲಿದೆ. 8 ರಂದು ರಾತ್ರಿ 7ಕ್ಕೆ ತಂಬಿಟ್ಟು ಆರತಿ ಸೇವೆ ಮತ್ತು ವಿಶೇಷ ಪೂಜೆ, ಪ್ರಸಾದ ವಿನಿಯೋಗ, 9 ರಂದು ಮಧ್ಯಾಹ್ನ ದೇವಿಗೆ ವಿಶೇಷ ಅಲಂಕಾರ ಸೇವೆ, ಹರಕೆ ಸೇವೆ ನಡೆದು ಮಹಾ ಪೂಜೆ, ಮಹಾ ಮಂಗಳಾರತಿ ನಡೆಯಲಿದೆ.</p>.<p>ಮೇ 10 ರಂದು ರಾತ್ರಿ ದೇವಿಗೆ ಅಲಂಕಾರ ಪೂಜೆ , ಭಕ್ತರಿಗೆ ಅನ್ನಸಂತರ್ಪಣೆ ನಡೆಯಲಿದೆ. 11 ರಂದು ಸಂಜೆ ಕರಗವು ತೆಲುಗರ ಬೀದಿ, ಜೈನರ ಬೀದಿ, ಎಫ್.ಎಂ.ಸಿ ರಸ್ತೆ, ಖಾಸಗಿ ಬಸ್ನಿಲ್ದಾಣದ ಜಂಕ್ಷನ್ ವರೆಗೆ ಸಂಚರಿಸಿ ದೇವಾಲಯಕ್ಕೆ ಹಿಂದಿರುಗಲಿದೆ. ಬಳಿಕ ಮಹಾ ಪೂಜೆ , ಪ್ರಸಾದ ವಿನಿಯೋಗದೊಂದಿಗೆ ಕರಗ ಮಹೋತ್ಸವ ಕೊನೆಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>