<p>ವಿರಾಜಪೇಟೆ: ಸಮೀಪದ ಬಿಟ್ಟಂಗಾಲ ಕಂಪನಿಮೊಟ್ಟೆ ಗ್ರಾಮದ ಪ್ರಾರ್ಥನಾ ಮಡಪುರ ಶ್ರೀ ಮುತ್ತಪ್ಪ ದೇವಾಲಯದ 34 ನೇ ವರ್ಷದ ವಾರ್ಷಿಕ ತೆರೆ ಮಹೋತ್ಸವ ಶ್ರದ್ದಾ ಭಕ್ತಿಯಿಂದ ಬುಧವಾರ ಮುಕ್ತಾಯಗೊಂಡಿತು.</p>.<p>ಮಾ. 31ರಂದು ಬೆಳಿಗ್ಗೆ 6ಕ್ಕೆ ಗಣಪತಿ ಹೋಮದೊಂದಿಗೆ ತೆರೆ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಧ್ವಜಾರೋಹಣ ಬಳಿಕ ಶ್ರೀ ಕಣ್ಣಂಬಾಡಿ ಅಮ್ಮನಿಗೆ ಪೂಜೆ ಸಲ್ಲಿಸಲಾಯಿತು. ರಾತ್ರಿ 8ಕ್ಕೆ ಮುತ್ತಪ್ಪನ್ ವೆಳ್ಳಾಟಂ, ಗುಳಿಗನ್ ತೊಟ್ಟಂ ತೆರೆ ನಡೆಯಿತು.</p>.<p>ಬಸುರಿಮಾಲ ದೇವರ ತೊಟ್ಟಂ ತೆರೆಯು ಮುಖ್ಯ ರಸ್ತೆಗಾಗಿ ದೇವಾಲಯಕ್ಕೆ ಆಗಮಿಸಿತು. ಮೆರವಣಿಗೆಯಲ್ಲಿ ಮಹಿಳೆಯರು ಹಣತೆ ಹಿಡಿದು ಸಾಗಿದರು. ಬಳಿಕ ದೇವಾಲಯದ ಆವರಣದಲ್ಲಿ ಅನ್ನಸಂತರ್ಪಣೆ ನಡೆಯಿತು.</p>.<p>ಮಾ. 1ರಂದು ಮುಂಜಾನೆ ಗುಳಿಗನ್ ತೆರೆ, ಶ್ರೀ ಮುತ್ತಪ್ಪನ್, ಶ್ರೀ ತಿರುವಪ್ಪನ್ ತೆರೆ ಹಾಗೂ ಬಸುರಿಮಾಲ ತೆರೆಯೊಂದಿಗೆ ವಾರ್ಷಿಕ ತೆರೆ ಮಹೋತ್ಸವ ಮುಕ್ತಾಯಗೊಂಡಿತು.</p>.<p>ರಾತ್ರಿ ನಡೆದ ಸಿಡಿ ಮದ್ದು ಪ್ರದರ್ಶನ ಭಕ್ತರ ಮನಸೂರೆಗೊಂಡಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-51-1879934903</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿರಾಜಪೇಟೆ: ಸಮೀಪದ ಬಿಟ್ಟಂಗಾಲ ಕಂಪನಿಮೊಟ್ಟೆ ಗ್ರಾಮದ ಪ್ರಾರ್ಥನಾ ಮಡಪುರ ಶ್ರೀ ಮುತ್ತಪ್ಪ ದೇವಾಲಯದ 34 ನೇ ವರ್ಷದ ವಾರ್ಷಿಕ ತೆರೆ ಮಹೋತ್ಸವ ಶ್ರದ್ದಾ ಭಕ್ತಿಯಿಂದ ಬುಧವಾರ ಮುಕ್ತಾಯಗೊಂಡಿತು.</p>.<p>ಮಾ. 31ರಂದು ಬೆಳಿಗ್ಗೆ 6ಕ್ಕೆ ಗಣಪತಿ ಹೋಮದೊಂದಿಗೆ ತೆರೆ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಧ್ವಜಾರೋಹಣ ಬಳಿಕ ಶ್ರೀ ಕಣ್ಣಂಬಾಡಿ ಅಮ್ಮನಿಗೆ ಪೂಜೆ ಸಲ್ಲಿಸಲಾಯಿತು. ರಾತ್ರಿ 8ಕ್ಕೆ ಮುತ್ತಪ್ಪನ್ ವೆಳ್ಳಾಟಂ, ಗುಳಿಗನ್ ತೊಟ್ಟಂ ತೆರೆ ನಡೆಯಿತು.</p>.<p>ಬಸುರಿಮಾಲ ದೇವರ ತೊಟ್ಟಂ ತೆರೆಯು ಮುಖ್ಯ ರಸ್ತೆಗಾಗಿ ದೇವಾಲಯಕ್ಕೆ ಆಗಮಿಸಿತು. ಮೆರವಣಿಗೆಯಲ್ಲಿ ಮಹಿಳೆಯರು ಹಣತೆ ಹಿಡಿದು ಸಾಗಿದರು. ಬಳಿಕ ದೇವಾಲಯದ ಆವರಣದಲ್ಲಿ ಅನ್ನಸಂತರ್ಪಣೆ ನಡೆಯಿತು.</p>.<p>ಮಾ. 1ರಂದು ಮುಂಜಾನೆ ಗುಳಿಗನ್ ತೆರೆ, ಶ್ರೀ ಮುತ್ತಪ್ಪನ್, ಶ್ರೀ ತಿರುವಪ್ಪನ್ ತೆರೆ ಹಾಗೂ ಬಸುರಿಮಾಲ ತೆರೆಯೊಂದಿಗೆ ವಾರ್ಷಿಕ ತೆರೆ ಮಹೋತ್ಸವ ಮುಕ್ತಾಯಗೊಂಡಿತು.</p>.<p>ರಾತ್ರಿ ನಡೆದ ಸಿಡಿ ಮದ್ದು ಪ್ರದರ್ಶನ ಭಕ್ತರ ಮನಸೂರೆಗೊಂಡಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-51-1879934903</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>