<p><strong>ವಿರಾಜಪೇಟೆ: </strong>ಪಟ್ಟಣದ ಅಂಗಡಿ ಮಾಲೀಕರೊಬ್ಬರ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಸಿಬ್ಬಂದಿ ಯನ್ನು ವಜಾಗೊಳಿಸಲು ಪುರಸಭೆಯ ತುರ್ತುಸಭೆ ತೀರ್ಮಾನಿಸಿತು.</p>.<p>ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಸಮೀಪದ ಅಂಗಡಿಯ ಮಾಲೀಕರೊಬ್ಬರ ಮೇಲೆ ಹಲ್ಲೆ ನಡೆಸಿದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಹರಿದಾಡಿತ್ತು. ಈ ಕುರಿತು ಪುರಸಭೆಯ ಅಧ್ಯಕ್ಷೆ ಸುಶ್ಮಿತಾ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ತುರ್ತುಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.</p>.<p>ಸಭೆಯಲ್ಲಿ ಮಾತನಾಡಿದ ಸದಸ್ಯೆ ದೇಚಮ್ಮ, ‘ಈ ಘಟನೆಯಿಂದ ಪುರಸಭೆಯ ಎಲ್ಲಾ ಸದಸ್ಯರಿಗೆ ಅವಮಾನವಾಗಿದೆ. ಆ ಸಿಬ್ಬಂದಿ ಈ ರೀತಿಯ ವರ್ತನೆ ತೋರುತ್ತಿರುವುದು ಹೊಸದಲ್ಲ. ಹೀಗಿರುವಾಗ ಪುರಸಭೆಯ ಮುಖ್ಯಾಧಿಕಾರಿಗಳು ಆತನಿಗೆ ಉದ್ದಿಮೆ ಪರವಾನಗಿ ಪರಿಶೀಲನೆಯ ಜವಾಬ್ದಾರಿ ನೀಡಿರುವುದು ಸರಿಯಲ್ಲ’ ಎಂದು ಆಕ್ಷೇಪ ವ್ಯಕ್ತಪಡಿಸಿದರು.</p>.<p>ಸದಸ್ಯ ಪಿ.ರಂಜಿ ಪೂಣಚ್ಚ ಮಾತನಾಡಿ, ‘ಪುರಸಭೆಯ ಸಿಬ್ಬಂದಿ ವರ್ತಕರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಇಂತಹ ಘಟನೆ ಹಲವು ಬಾರಿ ಆತನಿಂದ ನಡೆದಿದೆ. ಆದ್ದರಿಂದ ಆತನನ್ನು ವಜಾಗೊಳಿಸುವುದೇ ಸೂಕ್ತ’ ಎಂದರು. ಇದಕ್ಕೆ ಸದಸ್ಯ ಮಹ್ಮದ್ ರಾಫಿ ಸಹ ದನಿಗೂಡಿಸಿದರು.</p>.<p>ಹಲ್ಲೆ ನಡೆದ ಘಟನೆ ಸಂದರ್ಭ ಸ್ಥಳದಲ್ಲಿದ್ದ ಪುರಸಭೆಯ ಸದಸ್ಯ ಪೃಥ್ವಿನಾಥ್ ಮಾತನಾಡಿ, ‘ಘಟನೆಯಲ್ಲಿ ನನ್ನ ತಪ್ಪಿಲ್ಲ. ವರ್ತಕ ಪರವಾನಗಿ ಇಲ್ಲದೆ ಅಂಗಡಿ ನಡೆಸುತ್ತಿದ್ದ ಹಾಗೂ ಕಳಪೆ ಗುಣಮಟ್ಟದ ಆಹಾರ ಮಾರಾಟ ಮಾಡುತ್ತಿದ್ದ. ಈ ಬಗ್ಗೆ ಹಲವು ಬಾರಿ ಎಚ್ಚರಿಸಲಾಗಿತ್ತು. ಆದ್ದರಿಂದ ವರ್ತಕನನ್ನು ತರಾಟೆಗೆ ತೆಗೆದು ಕೊಳ್ಳಲಾಗಿತ್ತು’ ಎಂದು ಘಟನೆಯ ಕುರಿತು ಸಮಜಾಯಿಷಿ ನೀಡಿದರು.</p>.<p>ಸದಸ್ಯರಾದ ಮತ್ತೀನ್, ಕೆ.ಸಚಿನ್, ರಾಜೇಶ್, ಆಶಾ ಸುಬ್ಬಯ್ಯ, ಸುನೀತಾ, ರಜನಿಕಾಂತ್ ಮಾತನಾಡಿದರು.</p>.<p>ಪುರಸಭೆಯ ಮುಖ್ಯಾಧಿಕಾರಿ ಚಂದ್ರ ಕುಮಾರ್ ಮಾತನಾಡಿ, ‘ಸಭೆಯ ತೀರ್ಮಾನವನ್ನು ಜಿಲ್ಲಾಧಿಕಾರಿಗಳಿಗೆ ಕಳುಹಿಸಿ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ತಿಳಿಸಿದರು.</p>.<p>ಅಧ್ಯಕ್ಷೆ ಸುಶ್ಮಿತಾ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಪುರಸಭೆಯ ಎಂಜಿನಿಯರ್ ಹೇಮಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿರಾಜಪೇಟೆ: </strong>ಪಟ್ಟಣದ ಅಂಗಡಿ ಮಾಲೀಕರೊಬ್ಬರ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಸಿಬ್ಬಂದಿ ಯನ್ನು ವಜಾಗೊಳಿಸಲು ಪುರಸಭೆಯ ತುರ್ತುಸಭೆ ತೀರ್ಮಾನಿಸಿತು.</p>.<p>ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಸಮೀಪದ ಅಂಗಡಿಯ ಮಾಲೀಕರೊಬ್ಬರ ಮೇಲೆ ಹಲ್ಲೆ ನಡೆಸಿದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಹರಿದಾಡಿತ್ತು. ಈ ಕುರಿತು ಪುರಸಭೆಯ ಅಧ್ಯಕ್ಷೆ ಸುಶ್ಮಿತಾ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ತುರ್ತುಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.</p>.<p>ಸಭೆಯಲ್ಲಿ ಮಾತನಾಡಿದ ಸದಸ್ಯೆ ದೇಚಮ್ಮ, ‘ಈ ಘಟನೆಯಿಂದ ಪುರಸಭೆಯ ಎಲ್ಲಾ ಸದಸ್ಯರಿಗೆ ಅವಮಾನವಾಗಿದೆ. ಆ ಸಿಬ್ಬಂದಿ ಈ ರೀತಿಯ ವರ್ತನೆ ತೋರುತ್ತಿರುವುದು ಹೊಸದಲ್ಲ. ಹೀಗಿರುವಾಗ ಪುರಸಭೆಯ ಮುಖ್ಯಾಧಿಕಾರಿಗಳು ಆತನಿಗೆ ಉದ್ದಿಮೆ ಪರವಾನಗಿ ಪರಿಶೀಲನೆಯ ಜವಾಬ್ದಾರಿ ನೀಡಿರುವುದು ಸರಿಯಲ್ಲ’ ಎಂದು ಆಕ್ಷೇಪ ವ್ಯಕ್ತಪಡಿಸಿದರು.</p>.<p>ಸದಸ್ಯ ಪಿ.ರಂಜಿ ಪೂಣಚ್ಚ ಮಾತನಾಡಿ, ‘ಪುರಸಭೆಯ ಸಿಬ್ಬಂದಿ ವರ್ತಕರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಇಂತಹ ಘಟನೆ ಹಲವು ಬಾರಿ ಆತನಿಂದ ನಡೆದಿದೆ. ಆದ್ದರಿಂದ ಆತನನ್ನು ವಜಾಗೊಳಿಸುವುದೇ ಸೂಕ್ತ’ ಎಂದರು. ಇದಕ್ಕೆ ಸದಸ್ಯ ಮಹ್ಮದ್ ರಾಫಿ ಸಹ ದನಿಗೂಡಿಸಿದರು.</p>.<p>ಹಲ್ಲೆ ನಡೆದ ಘಟನೆ ಸಂದರ್ಭ ಸ್ಥಳದಲ್ಲಿದ್ದ ಪುರಸಭೆಯ ಸದಸ್ಯ ಪೃಥ್ವಿನಾಥ್ ಮಾತನಾಡಿ, ‘ಘಟನೆಯಲ್ಲಿ ನನ್ನ ತಪ್ಪಿಲ್ಲ. ವರ್ತಕ ಪರವಾನಗಿ ಇಲ್ಲದೆ ಅಂಗಡಿ ನಡೆಸುತ್ತಿದ್ದ ಹಾಗೂ ಕಳಪೆ ಗುಣಮಟ್ಟದ ಆಹಾರ ಮಾರಾಟ ಮಾಡುತ್ತಿದ್ದ. ಈ ಬಗ್ಗೆ ಹಲವು ಬಾರಿ ಎಚ್ಚರಿಸಲಾಗಿತ್ತು. ಆದ್ದರಿಂದ ವರ್ತಕನನ್ನು ತರಾಟೆಗೆ ತೆಗೆದು ಕೊಳ್ಳಲಾಗಿತ್ತು’ ಎಂದು ಘಟನೆಯ ಕುರಿತು ಸಮಜಾಯಿಷಿ ನೀಡಿದರು.</p>.<p>ಸದಸ್ಯರಾದ ಮತ್ತೀನ್, ಕೆ.ಸಚಿನ್, ರಾಜೇಶ್, ಆಶಾ ಸುಬ್ಬಯ್ಯ, ಸುನೀತಾ, ರಜನಿಕಾಂತ್ ಮಾತನಾಡಿದರು.</p>.<p>ಪುರಸಭೆಯ ಮುಖ್ಯಾಧಿಕಾರಿ ಚಂದ್ರ ಕುಮಾರ್ ಮಾತನಾಡಿ, ‘ಸಭೆಯ ತೀರ್ಮಾನವನ್ನು ಜಿಲ್ಲಾಧಿಕಾರಿಗಳಿಗೆ ಕಳುಹಿಸಿ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ತಿಳಿಸಿದರು.</p>.<p>ಅಧ್ಯಕ್ಷೆ ಸುಶ್ಮಿತಾ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಪುರಸಭೆಯ ಎಂಜಿನಿಯರ್ ಹೇಮಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>