<p><strong>ವಿರಾಜಪೇಟೆ:</strong> ‘ಶೈಕ್ಷಣಿಕವಾಗಿ ಮುಂದುವರೆದಲ್ಲಿ ಮಾತ್ರ ಸಮುದಾಯದ ಪ್ರಗತಿ ಸಾಧ್ಯ’ ಎಂದು ಎಸ್.ಎನ್.ಡಿ.ಪಿ ಜಿಲ್ಲಾ ಘಟಕದ ಅಧ್ಯಕ್ಷ ವಿ.ಕೆ. ಲೋಕೇಶ್ ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಪಟ್ಟಣದ ಮುತ್ತಪ್ಪ ದೇವಾಲಯದ ಮುತ್ತಪ್ಪ ಕಲಾ ಮಂಟಪದಲ್ಲಿ ಈಚೆಗೆ ನಡೆದ ಎಸ್.ಎನ್.ಡಿ.ಪಿ ವಿರಾಜಪೇಟೆ ಶಾಖೆ ಮಹಾಸಭೆಯಲ್ಲಿ ಅವರು ಮಾತನಾಡಿದರು.</p>.<p>ಸಂಘಟನೆ 100 ವರ್ಷಗಳ ಇತಿಹಾಸ ಹೊಂದಿದ್ದು. ಅಂದು ರೂಪಿಸಲಾದ ಬೈಲಾದಂತೆ ಇಂದು ಎಲ್ಲಾ ಶಾಖೆಗಳು ಕಾರ್ಯನಿರ್ವಹಿಸುತ್ತಿವೆ. ಸ್ವತಂತ್ರ ಪೂರ್ವದಿಂದಲೂ ಶೋಷಿತ ಸಮುದಾಯಗಳು ಮೇಲ್ವರ್ಗದ ತುಳಿತಕ್ಕೊಳಗಾಗಿವೆ. ಆದರೆ ಸಮಾಜದವರು ಇಂದು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿರಾಜಪೇಟೆ ಶಾಖೆಯ ಅಧ್ಯಕ್ಷ ಟಿ.ಎ. ನಾರಾಯಣ ಮಾತನಾಡಿ, ‘ಶಾಖೆಯು ಕಳೆದ 3 ವರ್ಷಗಳ ಅವಧಿಯಲ್ಲಿ ಸಮುದಾಯದ ಸಾಧಕರನ್ನು ಗುರುತಿಸಿ ಸನ್ಮಾನ ಮತ್ತು ವಿವಿಧ ಕಾರ್ಯಗಳಿಗೆ ಸಹಾಯಧನವನ್ನು ಒದಗಿಸಿದೆ’ ಎಂದರು.</p>.<p>ಶಾಖೆಯ ಕಾರ್ಯದರ್ಶಿ ಟಿ.ಕೆ. ಪದ್ಮನಾಭ ಲೆಕ್ಕಪರಿಶೋಧನಾ ವರದಿ ಮಂಡಿಸಿದರು. ಕಾರ್ಯಕ್ರಮದಲ್ಲಿ ನಾರಾಯಣ ಗುರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಕಳೆದ ಸಾಲಿನಲ್ಲಿ ಅಗಲಿದ ಶಾಖೆಯ ಸದಸ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಎಸ್.ಎಸ್.ಎಲ್.ಸಿ ಹಾಗೂ ಪದವಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ವೇದಿಕೆಯಲ್ಲಿ ಸೆಸ್ಕ್ ಸಹಾಯಕ ಎಂಜಿನಿಯರ್ ಸೋಮೇಶ್ ಮತ್ತು ಬಿಲ್ಲವ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎಂ.ಗಣೇಶ್, ಜಿಲ್ಲಾ ಯೂನಿಯನ್ ಉಪಾಧ್ಯಕ್ಷ ಕೆ. ರಾಜನ್, ಜಿಲ್ಲಾ ಕಾರ್ಯಕಾರಿ ಮಂಡಳಿ ಸದಸ್ಯ ಗಿರೀಶ್, ಚೈತನ್ಯ ಮಠಪುರ ಮುತ್ತಪ್ಪ ದೇವಾಲಯದ ಅಧ್ಯಕ್ಷ ಟಿ.ಕೆ. ರಾಜನ್ ಉಪಸ್ಥಿತರಿದ್ದರು.</p>.<p>2026-29ನೇ ಸಾಲಿಗೆ ನೂತನ ಆಡಳಿತ ಮಂಡಳಿಯನ್ನು ರಚಿಸಲಾಯಿತು. ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಟಿ.ಎ. ನಾರಾಯಣ, ಉಪಾಧ್ಯಕ್ಷರಾಗಿ ಟಿ.ಆರ್. ಗಣೇಶ್, ಕಾರ್ಯದರ್ಶಿಯಾಗಿ ಟಿ.ಕೆ.ಪದ್ಮನಾಭ ಅವರು ಪುನರ್ ಆಯ್ಕೆಗೊಂಡರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿರಾಜಪೇಟೆ:</strong> ‘ಶೈಕ್ಷಣಿಕವಾಗಿ ಮುಂದುವರೆದಲ್ಲಿ ಮಾತ್ರ ಸಮುದಾಯದ ಪ್ರಗತಿ ಸಾಧ್ಯ’ ಎಂದು ಎಸ್.ಎನ್.ಡಿ.ಪಿ ಜಿಲ್ಲಾ ಘಟಕದ ಅಧ್ಯಕ್ಷ ವಿ.ಕೆ. ಲೋಕೇಶ್ ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಪಟ್ಟಣದ ಮುತ್ತಪ್ಪ ದೇವಾಲಯದ ಮುತ್ತಪ್ಪ ಕಲಾ ಮಂಟಪದಲ್ಲಿ ಈಚೆಗೆ ನಡೆದ ಎಸ್.ಎನ್.ಡಿ.ಪಿ ವಿರಾಜಪೇಟೆ ಶಾಖೆ ಮಹಾಸಭೆಯಲ್ಲಿ ಅವರು ಮಾತನಾಡಿದರು.</p>.<p>ಸಂಘಟನೆ 100 ವರ್ಷಗಳ ಇತಿಹಾಸ ಹೊಂದಿದ್ದು. ಅಂದು ರೂಪಿಸಲಾದ ಬೈಲಾದಂತೆ ಇಂದು ಎಲ್ಲಾ ಶಾಖೆಗಳು ಕಾರ್ಯನಿರ್ವಹಿಸುತ್ತಿವೆ. ಸ್ವತಂತ್ರ ಪೂರ್ವದಿಂದಲೂ ಶೋಷಿತ ಸಮುದಾಯಗಳು ಮೇಲ್ವರ್ಗದ ತುಳಿತಕ್ಕೊಳಗಾಗಿವೆ. ಆದರೆ ಸಮಾಜದವರು ಇಂದು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿರಾಜಪೇಟೆ ಶಾಖೆಯ ಅಧ್ಯಕ್ಷ ಟಿ.ಎ. ನಾರಾಯಣ ಮಾತನಾಡಿ, ‘ಶಾಖೆಯು ಕಳೆದ 3 ವರ್ಷಗಳ ಅವಧಿಯಲ್ಲಿ ಸಮುದಾಯದ ಸಾಧಕರನ್ನು ಗುರುತಿಸಿ ಸನ್ಮಾನ ಮತ್ತು ವಿವಿಧ ಕಾರ್ಯಗಳಿಗೆ ಸಹಾಯಧನವನ್ನು ಒದಗಿಸಿದೆ’ ಎಂದರು.</p>.<p>ಶಾಖೆಯ ಕಾರ್ಯದರ್ಶಿ ಟಿ.ಕೆ. ಪದ್ಮನಾಭ ಲೆಕ್ಕಪರಿಶೋಧನಾ ವರದಿ ಮಂಡಿಸಿದರು. ಕಾರ್ಯಕ್ರಮದಲ್ಲಿ ನಾರಾಯಣ ಗುರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಕಳೆದ ಸಾಲಿನಲ್ಲಿ ಅಗಲಿದ ಶಾಖೆಯ ಸದಸ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಎಸ್.ಎಸ್.ಎಲ್.ಸಿ ಹಾಗೂ ಪದವಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ವೇದಿಕೆಯಲ್ಲಿ ಸೆಸ್ಕ್ ಸಹಾಯಕ ಎಂಜಿನಿಯರ್ ಸೋಮೇಶ್ ಮತ್ತು ಬಿಲ್ಲವ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎಂ.ಗಣೇಶ್, ಜಿಲ್ಲಾ ಯೂನಿಯನ್ ಉಪಾಧ್ಯಕ್ಷ ಕೆ. ರಾಜನ್, ಜಿಲ್ಲಾ ಕಾರ್ಯಕಾರಿ ಮಂಡಳಿ ಸದಸ್ಯ ಗಿರೀಶ್, ಚೈತನ್ಯ ಮಠಪುರ ಮುತ್ತಪ್ಪ ದೇವಾಲಯದ ಅಧ್ಯಕ್ಷ ಟಿ.ಕೆ. ರಾಜನ್ ಉಪಸ್ಥಿತರಿದ್ದರು.</p>.<p>2026-29ನೇ ಸಾಲಿಗೆ ನೂತನ ಆಡಳಿತ ಮಂಡಳಿಯನ್ನು ರಚಿಸಲಾಯಿತು. ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಟಿ.ಎ. ನಾರಾಯಣ, ಉಪಾಧ್ಯಕ್ಷರಾಗಿ ಟಿ.ಆರ್. ಗಣೇಶ್, ಕಾರ್ಯದರ್ಶಿಯಾಗಿ ಟಿ.ಕೆ.ಪದ್ಮನಾಭ ಅವರು ಪುನರ್ ಆಯ್ಕೆಗೊಂಡರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>