ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿರಾಜಪೇಟೆ: ಕೋವಿಡ್‌ನಿಂದ ಮಹಿಳೆ ಸಾವು, ಪತ್ರಕರ್ತ ತಂಡದಿಂದ ಅಂತ್ಯ ಸಂಸ್ಕಾರ

Last Updated 5 ಸೆಪ್ಟೆಂಬರ್ 2021, 12:26 IST
ಅಕ್ಷರ ಗಾತ್ರ

ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಪಾಲಿಬೆಟ್ಟದಲ್ಲಿ ಕೋವಿಡ್‌ನಿಂದ ಮೃತಪಟ್ಟಿದ್ದ ಮಹಿಳೆಯ ಅಂತ್ಯಸಂಸ್ಕಾರವನ್ನು ಪತ್ರಕರ್ತರ ತಂಡವೊಂದು ನೆರವೇರಿಸಿ ಮಾನವೀಯತೆ ಮೆರೆದಿದೆ. ಇಲ್ಲಿನ ಪತ್ರಕರ್ತರು, ಮಾಧ್ಯಮ ಸ್ಪಂದನಾ ತಂಡದ ಮೂಲಕ ಸೇವಾ ಕಾರ್ಯ ಮಾಡಿದ್ದಾರೆ.

ಪಾಲಿಬೆಟ್ಟದ ಮಸ್ಕಲ್ ತೋಟದ ನಿವಾಸಿ, 49 ವರ್ಷದ ಮಹಿಳೆ ಕೋವಿಡ್‌ನಿಂದ ಮೃತಪಟ್ಟಿದ್ದರು. ಕೋವಿಡ್‌ ಮಾರ್ಗಸೂಚಿಯಂತೆ ಅಂತ್ಯಸಂಸ್ಕಾರ ನೆರವೇರಿಸಲು ಸಹಕರಿಸುವಂತೆ ಅವರ ಕುಟುಂಬಸ್ಥರು ಮಾಧ್ಯಮ ಪ್ರತಿನಿಧಿಗಳನ್ನು ಕೋರಿದ್ದರು. ಅದಕ್ಕೆ ಸ್ಪಂದಿಸಿದ ತಂಡದ ರಮೇಶ್ ಕುಟ್ಟಪ್ಪ, ಪುತ್ತಂ ಪ್ರದೀಪ್, ಪುತ್ತರಿರ ಪಪ್ಪು ತಿಮ್ಮಯ್ಯ, ಕುಟ್ಟಂಡ ಅಜಿತ್ ಕರುಂಬಯ್ಯ, ಎನ್.ವಿನಯ್, ಬಿ.ಪಿ.ಸುನಿಲ್ ಅವರು, ಪಿಪಿಇ ಕಿಟ್ ಧರಿಸಿ ಹಿಂದೂ ರುದ್ರಭೂಮಿಯಲ್ಲಿ ಭಾನುವಾರ ಸಂಜೆ ಅಂತ್ಯಸಂಸ್ಕಾರ ನೆರವೇರಿಸಿದರು.

ಹಿಂದೆಯೂ ಜಿಲ್ಲೆಯ ಮಾಧ್ಯಮ ಪ್ರತಿನಿಧಿಗಳು ಬಲಮುರಿ ಸೇರಿ ವಿವಿಧೆಡೆ ಕೋವಿಡ್‌ನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ನೆರವೇರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT