ವಿರಾಜಪೇಟೆಯಲ್ಲಿ ಜಾಗೃತಿ ಅಭಿಯಾನ
ವಿರಾಜಪೇಟೆ: ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಜಿಲ್ಲಾಡಳಿತ ಜಿಲ್ಲಾ ಸ್ವೀಪ್ ಸಮಿತಿ ತಾಲ್ಲೂಕು ಸ್ವೀಪ್ ಸಮಿತಿ ವಿರಾಜಪೇಟೆ ಪುರಸಭೆ ವತಿಯಿಂದ ವಿರಾಜಪೇಟೆ ಪುರಸಭೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಲಾಯಿತು. ‘ಮತದಾನದ ಕಾರ್ಯದಲ್ಲಿ ಹಬ್ಬದಂತೆ ಎಲ್ಲರೂ ಸಂಭ್ರಮಿಸಬೇಕು.
ಈ ಹಬ್ಬದಲ್ಲಿ ಎಲ್ಲರೂ ತಪ್ಪದೇ ಮತ ಚಲಾಯಿಸಬೇಕು. ಏಪ್ರಿಲ್ 26 ರಂದು ಮತದಾನ ಜರುಗಲಿದ್ದು ಎಲ್ಲರೂ ಮತದಾರರ ಗುರುತಿನ ಚೀಟಿಯೊಂದಿಗೆ ಹಾಗೂ ಚುನಾವಣಾ ಆಯೋಗದ ಸೂಚಿಸಿದ ದಾಖಲೆಗಳೊಂದಿಗೆ ಮತದಾನ ಕೇಂದ್ರಕ್ಕೆ ತೆರಳಿ ತಮ್ಮ ಹಕ್ಕನ್ನು ಚಲಾಯಿಸಬೇಕು’ ಎಂದು ಅರಿವು ಮೂಡಿಸಲಾಯಿತು. ವಿರಾಜಪೇಟೆ ಪುರಸಭೆ ವ್ಯಾಪ್ತಿಯ ಖಾಸಗಿ ಬಸ್ ನಿಲ್ದಾಣ ಮಾರುಕಟ್ಟೆ ಪ್ರದೇಶ ಸೇರಿದಂತೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮತದಾನದ ಜಾಗೃತಿ ಮೂಡಿಸಲಾಯಿತು.