ಬೇಸಿಗೆಗೂ ಮುನ್ನವೇ ಕ್ರಮ ಕೈಗೊಳ್ಳಿ ನೆಲ್ಯಹುದಿಕೇರಿ ಪಟ್ಟಣ ಹಾಗೂ ಜನವಸತಿ ಪ್ರದೇಶದ ತ್ಯಾಜ್ಯ ನೀರನ್ನು ಕಾವೇರಿ ನದಿಗೆ ಹರಿಬಿಡಲಾಗುತ್ತಿದೆ. ಇದರಿಂದಾಗಿ ನದಿ ನೀರು ಕುಡಿಯಲು ಯೋಗ್ಯವಾಗಿಲ್ಲ. ಬೇಸಿಗೆ ಮುನ್ನವೇ ಸಂಬಂಧಪಟ್ಟವರು ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದೆ ಕುಡಿಯುವ ನೀರಿಗೂ ಸಮಸ್ಯೆ ಎದುರಾಗಲಿದೆ.ತೆರಂಬಳ್ಳಿ ಸುಧೀರ್ ಬೆಳೆಗಾರರು
ಜಿಲ್ಲಾ ಪಂಚಾಯಿತಿ ಕ್ರಮ ಕೈಗೊಳ್ಳಲಿ ಲಕ್ಷಾಂತರ ಜನರು ಜಾನುವಾರುಗಳು ಸೇರಿದಂತೆ ಜೀವಿಗಳು ಕಾವೇರಿ ನೀರನ್ನು ಆಶ್ರಯಿಸಿದ್ದಾರೆ. ಬೆಂಗಳೂರಿನ ಬಹುತೇಕ ಭಾಗದಲ್ಲಿ ಕಾವೇರಿ ನೀರು ಕುಡಿಯಲು ಬಳಸುತ್ತಿದ್ದಾರೆ. ಆದರೆ ತವರಿನಲ್ಲೇ ನದಿ ನೀರು ಕುಡಿಯಲು ಯೋಗ್ಯವಾಗಿಲ್ಲ. ತಲಕಾವೇರಿಯಿಂದ ಕುಶಾಲನಗರದವರೆಗಿನ ನದಿ ತಡದ ಗ್ರಾಮ ಪಂಚಾಯಿತಿಗಳು ತ್ಯಾಜ್ಯ ನೀರನ್ನು ಹರಿಬಿಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಜಿಲ್ಲಾ ಪಂಚಾಯಿತಿ ಕೂಡ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಸಮದ್ ಸಾಮಾಜಿಕ ಕಾರ್ಯಕರ್ತ ಸಿದ್ದಾಪುರ
ಜಿಲ್ಲಾ ಪಂಚಾಯಿತಿ ಕ್ರಮ ಕೈಗೊಳ್ಳಲಿ ಲಕ್ಷಾಂತರ ಜನರು ಜಾನುವಾರುಗಳು ಸೇರಿದಂತೆ ಜೀವಿಗಳು ಕಾವೇರಿ ನೀರನ್ನು ಆಶ್ರಯಿಸಿದ್ದಾರೆ. ಬೆಂಗಳೂರಿನ ಬಹುತೇಕ ಭಾಗದಲ್ಲಿ ಕಾವೇರಿ ನೀರು ಕುಡಿಯಲು ಬಳಸುತ್ತಿದ್ದಾರೆ. ಆದರೆ ತವರಿನಲ್ಲೇ ನದಿ ನೀರು ಕುಡಿಯಲು ಯೋಗ್ಯವಾಗಿಲ್ಲ. ತಲಕಾವೇರಿಯಿಂದ ಕುಶಾಲನಗರದವರೆಗಿನ ನದಿ ತಡದ ಗ್ರಾಮ ಪಂಚಾಯಿತಿಗಳು ತ್ಯಾಜ್ಯ ನೀರನ್ನು ಹರಿಬಿಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಜಿಲ್ಲಾ ಪಂಚಾಯಿತಿ ಕೂಡ ಈ ಬಗ್ಗೆ ಕ್ರಮ ಕೈಗೊಳ್ಳಬೇಕು.ಸಮದ್ ಸಾಮಾಜಿಕ ಕಾರ್ಯಕರ್ತ ಸಿದ್ದಾಪುರ
ಕಾವೇರಿ ನದಿ ಸಂರಕ್ಷಣೆಗೆ ಸರ್ಕಾರ ಒತ್ತು ನೀಡಲಿ ಯುವ ಬ್ರಿಗೇಡ್ ಹಾಗೂ ಮುತ್ತಪ್ಪ ಯುವಕಲಾ ಸಂಘದ ವತಿಯಿಂದ ಸಿದ್ದಾಪುರ ಸೇತುವೆಯ ಬಳಿ ನದಿ ಶುಚಿಗೊಳಿಸಲಾಗಿತ್ತು. ಮದ್ಯದ ಬಾಟಲಿಗಳು ಪ್ಲಾಸ್ಟಿಕ್ ಸೇರಿದಂತೆ ರಾಶಿಗಟ್ಟಲೆ ತ್ಯಾಜ್ಯ ನದಿಯಿಂದ ಹೊರತೆಗೆದಿದ್ದೆವು. ಇದೀಗ ಪಟ್ಟಣದ ತ್ಯಾಜ್ಯ ನೀರು ನದಿ ಒಡಲಿಗೆ ಸೇರುತ್ತಿದೆ. ಗ್ರಾಮ ಪಂಚಾಯಿತಿ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಕಾವೇರಿ ನದಿ ಸಂರಕ್ಷಣೆಗೆ ಸರ್ಕಾರ ವಿಶೇಷ ಒತ್ತು ನೀಡಬೇಕು.ಪದ್ಮನಾಭ ನೆಲ್ಯಹುದಕೇರಿ.
ನೋಟಿಸ್ ನೀಡಲಾಗುವುದು ನೆಲ್ಯಹುದಿಕೇರಿ ಪಟ್ಟಣದ ಕೆಲ ಮನೆಗಳ ತ್ಯಾಜ್ಯ ನೀರನ್ನು ನದಿಗೆ ಹರಿಬಿಡಲಾಗುತ್ತಿದ್ದು ಈ ಬಗ್ಗೆ ಶೀಘ್ರದಲ್ಲೇ ನೋಟೀಸ್ ಮಾಡಲಾಗುವುದು. ಶೀಘ್ರದಲ್ಲೇ ಗ್ರಾಮ ಪಂಚಾಯಿತಿ ವತಿಯಿಂದ ಇಂಗು ಗುಂಡಿಗಳನ್ನು ನಿರ್ಮಿಸಲು ಕ್ರಮ ಕೈಗೊಂಡು ಸಮಸ್ಯೆಯನ್ನು ಬಗೆಹರಿಸಲಾಗುವುದು.ನಂಜುಂಡಸ್ವಾಮಿ ನೆಲ್ಯಹುದಿಕೇರಿ ಪಿಡಿಒ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.