ನಾಲ್ಕು ಕ್ರೆಸ್ಟ್ಗೇಟ್ಗಳ ಮೂಲಕ ನದಿಗೆ ನೀರು ಬಿಡುಗಡೆ ಮಾಡಲಾಗಿದೆ. ಜಲಾಶಯದ ಗರಿಷ್ಠಮಟ್ಟವು 2,859 ಅಡಿಯಾಗಿದ್ದು ರಾತ್ರಿ ವೇಳೆಗೆ ಬಹುತೇಕ ಭರ್ತಿಯಾಗುವ ಹಂತ ತಲುಪಿತ್ತು. ಭದ್ರತಾ ದೃಷ್ಟಿಯಿಂದ ರಾತ್ರಿಯೇ ನೀರು ಬಿಡುಗಡೆ ಮಾಡಲಾಗಿದೆ.
ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರಲು ಕೋರಲಾಗಿದೆ. ಕುಶಾಲನಗರದ ಹಲವು ಬಡಾವಣೆಗಳಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದೆ.