<p><strong>ವಿರಾಜಪೇಟೆ</strong>: ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ 24 ಗಂಟೆಗಳಿಂದ ಧಾರಾಕಾರ ಮಳೆ ಆಯಿತು.</p>.<p>ಕೆಲವು ದಿನಗಳಿಂದ ಕೊಂಚ ಇಳಿಮುಖಗೊಂಡಿದ್ದ ವರ್ಷಧಾರೆಯು ಶುಕ್ರವಾರ ರಾತ್ರಿಯಿಂದ ಮತ್ತೆ ಧಾರಾಕಾರವಾಗಿ ಸುರಿಯುತ್ತಿದೆ.</p>.<p>ವಿರಾಜಪೇಟೆ ವಿಭಾಗದಲ್ಲಿ ಶನಿವಾರ ದಿನವಿಡೀ ಬಿಡುವು ನೀಡದೆ ಮಳೆ ಸುರಿಯಿತು. ಸಮೀಪದ ಬೇಟೋಳಿ, ಆರ್ಜಿ, ರಾಮನಗರ, ಹೆಗ್ಗಳ, ಮಾಕುಟ್ಟ, ಬಿಟ್ಟಂಗಾಲ, ಕದನೂರು, ಕಾಕೋಟು ಪರಂಬು, ಚೆಂಬೆಬೆಳ್ಳೂರು, ಕದನೂರು ಸೇರಿದಂತೆ ಹಲವು ಗ್ರಾಮಗಳ ವ್ಯಾಪ್ತಿಯಲ್ಲಿ ಉತ್ತಮ ಮಳೆ ಆಗಿದೆ.</p>.<p>ಶನಿವಾರ ಬೆಳಿಗ್ಗೆಯಿಂದಲೇ ಮಳೆ ಸುರಿಯುತ್ತಿರುವುದರಿಂದ ಹಳ್ಳಕೊಳ್ಳಗಳು ಮತ್ತೆ ತುಂಬಿ ಹರಿಯಲು ಆರಂಭಿಸಿವೆ.</p>.<p>ಸಮೀಪದ ಭೇತ್ರಿಯಲ್ಲಿನ ಕಾವೇರಿ ಹೊಳೆ ಹಾಗೂ ಕದನೂರು ಹೊಳೆಯ ನೀರಿನ ಮಟ್ಟದಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದೆ. ನಿರಂತರ ಮಳೆಯಿಂದ ಭತ್ತದ ಗದ್ದೆಗಳಿಗೆ ಹಲವೆಡೆ ನೀರು ನುಗ್ಗಿದ್ದು, ಬೆಳೆ ಕೊಳೆಯುವ ಆತಂಕ ರೈತರನ್ನು ಕಾಡಲಾರಂಭಿಸಿದೆ.</p>.<p>ಈಗಾಗಲೇ ಎಲ್ಲೆಡೆಭತ್ತದ ನಾಟಿ ಕಾರ್ಯ ಪೂರ್ಣಗೊಂಡಿದ್ದು, ಮೂರು ದಿನಗಳ ಕಾಲ ಇದೇ ರೀತಿ ಮಳೆ ಮುಂದುವರಿದರೆ ಭತ್ತದ ಗದ್ದೆಗಳು ಸಂಪೂರ್ಣ ಜಲಾವೃತಗೊಂಡು ರೈತರು ಸಂಕಷ್ಟಕ್ಕೀಡಾಗುವ ಸಾಧ್ಯತೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿರಾಜಪೇಟೆ</strong>: ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ 24 ಗಂಟೆಗಳಿಂದ ಧಾರಾಕಾರ ಮಳೆ ಆಯಿತು.</p>.<p>ಕೆಲವು ದಿನಗಳಿಂದ ಕೊಂಚ ಇಳಿಮುಖಗೊಂಡಿದ್ದ ವರ್ಷಧಾರೆಯು ಶುಕ್ರವಾರ ರಾತ್ರಿಯಿಂದ ಮತ್ತೆ ಧಾರಾಕಾರವಾಗಿ ಸುರಿಯುತ್ತಿದೆ.</p>.<p>ವಿರಾಜಪೇಟೆ ವಿಭಾಗದಲ್ಲಿ ಶನಿವಾರ ದಿನವಿಡೀ ಬಿಡುವು ನೀಡದೆ ಮಳೆ ಸುರಿಯಿತು. ಸಮೀಪದ ಬೇಟೋಳಿ, ಆರ್ಜಿ, ರಾಮನಗರ, ಹೆಗ್ಗಳ, ಮಾಕುಟ್ಟ, ಬಿಟ್ಟಂಗಾಲ, ಕದನೂರು, ಕಾಕೋಟು ಪರಂಬು, ಚೆಂಬೆಬೆಳ್ಳೂರು, ಕದನೂರು ಸೇರಿದಂತೆ ಹಲವು ಗ್ರಾಮಗಳ ವ್ಯಾಪ್ತಿಯಲ್ಲಿ ಉತ್ತಮ ಮಳೆ ಆಗಿದೆ.</p>.<p>ಶನಿವಾರ ಬೆಳಿಗ್ಗೆಯಿಂದಲೇ ಮಳೆ ಸುರಿಯುತ್ತಿರುವುದರಿಂದ ಹಳ್ಳಕೊಳ್ಳಗಳು ಮತ್ತೆ ತುಂಬಿ ಹರಿಯಲು ಆರಂಭಿಸಿವೆ.</p>.<p>ಸಮೀಪದ ಭೇತ್ರಿಯಲ್ಲಿನ ಕಾವೇರಿ ಹೊಳೆ ಹಾಗೂ ಕದನೂರು ಹೊಳೆಯ ನೀರಿನ ಮಟ್ಟದಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದೆ. ನಿರಂತರ ಮಳೆಯಿಂದ ಭತ್ತದ ಗದ್ದೆಗಳಿಗೆ ಹಲವೆಡೆ ನೀರು ನುಗ್ಗಿದ್ದು, ಬೆಳೆ ಕೊಳೆಯುವ ಆತಂಕ ರೈತರನ್ನು ಕಾಡಲಾರಂಭಿಸಿದೆ.</p>.<p>ಈಗಾಗಲೇ ಎಲ್ಲೆಡೆಭತ್ತದ ನಾಟಿ ಕಾರ್ಯ ಪೂರ್ಣಗೊಂಡಿದ್ದು, ಮೂರು ದಿನಗಳ ಕಾಲ ಇದೇ ರೀತಿ ಮಳೆ ಮುಂದುವರಿದರೆ ಭತ್ತದ ಗದ್ದೆಗಳು ಸಂಪೂರ್ಣ ಜಲಾವೃತಗೊಂಡು ರೈತರು ಸಂಕಷ್ಟಕ್ಕೀಡಾಗುವ ಸಾಧ್ಯತೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>