<p><strong>ಮಡಿಕೇರಿ:</strong> ‘ನಾವು ಬಂದಿದ್ದೇವೆ. ಜನರು ಧೈರ್ಯವಾಗಿರಿ, ತುರ್ತು ಸ್ಥಿತಿಯಲ್ಲಿ ನಾವು ನಿಮ್ಮನ್ನು ರಕ್ಷಿಸುತ್ತೇವೆ’ ಎಂದು ಅಭಯ ನೀಡಿದವರು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ ಯೋಧರು.</p>.<p>ಬೆಂಗಳೂರಿನಿಂದ ಇಲ್ಲಿಗೆ ಭಾನುವಾರ ಬಂದಿರುವ ಇವರು ಕಳೆದೆರಡು ದಿನಗಳಿಂದ ಪರಿಸ್ಥಿತಿ ಪರಾಮರ್ಶಿಸಿದ್ದಾರೆ. ಜಿಲ್ಲಾ ವಿಪತ್ತು ನಿರ್ವಹಣಾ ಪರಿಣತ ಅನನ್ಯ ವಾಸುದೇವ್ ಅವರು ಜಿಲ್ಲೆಯಲ್ಲಿ ನೈಸರ್ಗಿಕ ವಿಕೋಪ ಸಂಭವಿಸಬಹುದಾದ ಸ್ಥಳಗಳ ಮಾಹಿತಿ ನೀಡಿದ್ದಾರೆ. ಈಗ ಅವರು ರಕ್ಷಣಾ ಕಾರ್ಯಕ್ಕೆ ಸಜ್ಜಾಗಿದ್ದಾರೆ.</p>.<p>ಇಲ್ಲಿ ಬುಧವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಎನ್ಡಿಆರ್ಎಫ್ ತಂಡದ ಮುಖ್ಯಸ್ಥ ಇನ್ಸ್ಪೆಕ್ಟರ್ ಹರಿಶ್ಚಂದ್ರ ಪಾಂಡೆ, ‘ಮುಂಗಾರು ಬಹಳ ಮುಂಚಿತವಾಗಿಯೇ ಬಂದಿದೆ. ನಾವೂ ಸಹ ಮುಂಚಿತವಾಗಿಯೇ ಬಂದಿದ್ದೇವೆ. ಯಾವುದೇ ಆತಂಕ ಬೇಡ’ ಎಂದು ಹೇಳಿದರು.</p>.<p>ಭೂಕುಸಿತ, ಪ್ರವಾಹ ಸೇರಿದಂತೆ ಯಾವುದೇ ಬಗೆಯ ನೈಸರ್ಗಿಕ ವಿಕೋಪ ಸಂಭವಿಸಿದರೂ ಅದರಲ್ಲಿ ಸಿಲುಕಿದ ಜನರನ್ನು ರಕ್ಷಿಸಲು ಬೇಕಾಗಿರುವ ರಕ್ಷಣಾ ಸಲಕರಣೆಗಳನ್ನು ತಂದಿದ್ದೇವೆ ಎಂದು ಅವುಗಳನ್ನು ಪ್ರದರ್ಶಿಸಿದರು.</p>.<p>‘ಈಗಾಗಲೇ ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರದ ಜೊತೆ ಸಂಪರ್ಕ ಸಾಧಿಸಿದ್ದೇವೆ. ವಿಕೋಪ ಸಂಭವಿಸಬಹುದಾದ ಪ್ರದೇಶಗಳ ಮಾಹಿತಿ ಪಡೆದಿದ್ದೇವೆ. ಎಲ್ಲವನ್ನೂ ನಮಗೆ ಅಧಿಕಾರಿಗಳು ತಿಳಿಸಿದ್ದಾರೆ. ಅಪಾಯ ಸಂಭವಿಸಿದ ಕೂಡಲೇ ನಾವು ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯ ಆರಂಭಿಸುತ್ತೇವೆ’ ಎಂದು ಹೇಳಿದರು.</p>.<p>ಇವರ ನೇತೃತ್ವದಲ್ಲಿ ಒಟ್ಟು 30 ಜನರ ತಂಡ ಮೈತ್ರಿ ಹಾಲ್ನಲ್ಲಿ ಸನ್ನದ್ಧ ಸ್ಥಿತಿಯಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ‘ನಾವು ಬಂದಿದ್ದೇವೆ. ಜನರು ಧೈರ್ಯವಾಗಿರಿ, ತುರ್ತು ಸ್ಥಿತಿಯಲ್ಲಿ ನಾವು ನಿಮ್ಮನ್ನು ರಕ್ಷಿಸುತ್ತೇವೆ’ ಎಂದು ಅಭಯ ನೀಡಿದವರು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ ಯೋಧರು.</p>.<p>ಬೆಂಗಳೂರಿನಿಂದ ಇಲ್ಲಿಗೆ ಭಾನುವಾರ ಬಂದಿರುವ ಇವರು ಕಳೆದೆರಡು ದಿನಗಳಿಂದ ಪರಿಸ್ಥಿತಿ ಪರಾಮರ್ಶಿಸಿದ್ದಾರೆ. ಜಿಲ್ಲಾ ವಿಪತ್ತು ನಿರ್ವಹಣಾ ಪರಿಣತ ಅನನ್ಯ ವಾಸುದೇವ್ ಅವರು ಜಿಲ್ಲೆಯಲ್ಲಿ ನೈಸರ್ಗಿಕ ವಿಕೋಪ ಸಂಭವಿಸಬಹುದಾದ ಸ್ಥಳಗಳ ಮಾಹಿತಿ ನೀಡಿದ್ದಾರೆ. ಈಗ ಅವರು ರಕ್ಷಣಾ ಕಾರ್ಯಕ್ಕೆ ಸಜ್ಜಾಗಿದ್ದಾರೆ.</p>.<p>ಇಲ್ಲಿ ಬುಧವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಎನ್ಡಿಆರ್ಎಫ್ ತಂಡದ ಮುಖ್ಯಸ್ಥ ಇನ್ಸ್ಪೆಕ್ಟರ್ ಹರಿಶ್ಚಂದ್ರ ಪಾಂಡೆ, ‘ಮುಂಗಾರು ಬಹಳ ಮುಂಚಿತವಾಗಿಯೇ ಬಂದಿದೆ. ನಾವೂ ಸಹ ಮುಂಚಿತವಾಗಿಯೇ ಬಂದಿದ್ದೇವೆ. ಯಾವುದೇ ಆತಂಕ ಬೇಡ’ ಎಂದು ಹೇಳಿದರು.</p>.<p>ಭೂಕುಸಿತ, ಪ್ರವಾಹ ಸೇರಿದಂತೆ ಯಾವುದೇ ಬಗೆಯ ನೈಸರ್ಗಿಕ ವಿಕೋಪ ಸಂಭವಿಸಿದರೂ ಅದರಲ್ಲಿ ಸಿಲುಕಿದ ಜನರನ್ನು ರಕ್ಷಿಸಲು ಬೇಕಾಗಿರುವ ರಕ್ಷಣಾ ಸಲಕರಣೆಗಳನ್ನು ತಂದಿದ್ದೇವೆ ಎಂದು ಅವುಗಳನ್ನು ಪ್ರದರ್ಶಿಸಿದರು.</p>.<p>‘ಈಗಾಗಲೇ ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರದ ಜೊತೆ ಸಂಪರ್ಕ ಸಾಧಿಸಿದ್ದೇವೆ. ವಿಕೋಪ ಸಂಭವಿಸಬಹುದಾದ ಪ್ರದೇಶಗಳ ಮಾಹಿತಿ ಪಡೆದಿದ್ದೇವೆ. ಎಲ್ಲವನ್ನೂ ನಮಗೆ ಅಧಿಕಾರಿಗಳು ತಿಳಿಸಿದ್ದಾರೆ. ಅಪಾಯ ಸಂಭವಿಸಿದ ಕೂಡಲೇ ನಾವು ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯ ಆರಂಭಿಸುತ್ತೇವೆ’ ಎಂದು ಹೇಳಿದರು.</p>.<p>ಇವರ ನೇತೃತ್ವದಲ್ಲಿ ಒಟ್ಟು 30 ಜನರ ತಂಡ ಮೈತ್ರಿ ಹಾಲ್ನಲ್ಲಿ ಸನ್ನದ್ಧ ಸ್ಥಿತಿಯಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>