ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

Published 9 ಫೆಬ್ರುವರಿ 2024, 6:59 IST
Last Updated 9 ಫೆಬ್ರುವರಿ 2024, 6:59 IST
ಅಕ್ಷರ ಗಾತ್ರ

ಮಡಿಕೇರಿ: ಅಪಘಾತಕ್ಕೆ ಒಳಗಾಗಿ ಬೆನ್ನುಹುರಿ ಸಮಸ್ಯೆಯಿಂದ ಅಂಗವೈಕಲ್ಯತೆ ಹೊಂದಿರುವವರು ಇಲ್ಲಿ ಶುಕ್ರವಾರ ಗಾಲಿಕುರ್ಚಿ ಜಾಥಾ ನಡೆಸಿದರು.

ಸೇವಾಭಾರತಿ– ಸೇವಾಧಾಮ ಸಂಸ್ಥೆಯು ವಿಕಾಸ್ ಜನಸೇವಾ ಟ್ರಸ್ಟ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆ, ಕಾವೇರಿ ಕೃಪಾ ವಿಶ್ವಕಲ್ಯಾಣ ಸೇವಾ ಸಮಿತಿ, ಅಶ್ವಿನಿ ಆಸ್ಪತ್ರೆ ಸಹಯೋಗದಲ್ಲಿ 23ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ ಹಾಗೂ ಗಾಲಿ ಕುರ್ಚಿ ಜಾಥಾ ಆಯೋಜಿಸಿತ್ತು.

ಅಪಘಾತಕ್ಕೆ ಒಳಗಾಗಿ ಅಂಗವಿಕಲರಾದವರು ಗಾಲಿಕುರ್ಚಿಗಳಲ್ಲಿ ಭಾಗಿಯಾದರು. ಜೊತೆಯಲ್ಲಿ ಹಲವು ವಿದ್ಯಾರ್ಥಿಗಳು ಜಾಥಾದಲ್ಲಿದ್ದರು‌.

ಹಿರಿಯ ಕಲಾವಿದೆ ರಾಣಿ ಮಾಚಯ್ಯ ಸಹ ಜಾಥಾದಲ್ಲಿ ಹೆಜ್ಜೆ ಹಾಕಿದರು. ಶಾಂತಿನಿಕೇತನದ ಬಳಿಯ ಮಡಿಕೇರಿ- ಮೈಸೂರು ರಸ್ತೆಯಲ್ಲಿ ಸಾಗಿದ ಜಾಥಾ ಜನರಲ್ ತಿಮ್ಮಯ್ಯ ವೃತ್ತದವರೆಗೂ ಸಂಚರಿಸಿತು‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT