ಕೃಷಿಕ ಚಂದ್ರಶೇಖರ್ ಮಾತನಾಡಿ, ‘ಈ ಭಾಗದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಸಾಕಷ್ಟು ಹಾನಿ ಮಾಡುತ್ತಿವೆ. ಇವುಗಳನ್ನು ಕೊಂದಲ್ಲಿ ಅರಣ್ಯ ಇಲಾಖೆಯವರು ತಕ್ಷಣ ಸ್ಪಂದಿಸಿ ಕ್ರಮಕ್ಕೆ ಮುಂದಾಗುತ್ತಾರೆ. ಆದರೆ, ನಷ್ಟಪಡಿಸಿದ್ದಕ್ಕೆ ಪರಿಹಾರ ಕೇಳಿದಲ್ಲಿ ಕಾನೂನಿನಲ್ಲಿ ಅವಕಾಶ ಇಲ್ಲ ಎಂದು ಹಿಂದಕ್ಕೆ ಕಳುಹಿಸುತ್ತಿದ್ದಾರೆ. ಇದರಿಂದಾಗಿ ಸಾಕಷ್ಟು ಬೆಳೆಗಾರರಿಗೆ ನಷ್ಟವಾಗುತ್ತಿದ್ದು, ಸರ್ಕಾರ ಸೂಕ್ತ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.