‘ಕಾಫಿ ತೋಟದಲ್ಲಿ ಬೆಳಗಿನ ಜಾವ ಆಹಾರ ಸೇವಿಸಿ, ಕಾದಾಡುವುದರಿಂದ ಗಿಡಗಳು ಹಾಳಾಗಿವೆ. ಎಚ್.ಪಿ.ಸುರೇಶ್, ರಾಜಪ್ಪ, ಜಿ.ಕೆ.ಸುರೇಶ್ ಎಂಬವರ ತೋಟಗಳಲ್ಲಿ ಕಾಫಿ ಗಿಡಗಳು ಹಾಳಾಗಿವೆ.
ಕಾಡಾನೆಗಳಿಂದ ಕಾಟ ಕಡಿಮೆಯಾದಂತೆ ಕಾಡುಕೋಣಗಳ ಹಾವಳಿ ಪ್ರಾರಂಭವಾಗಿದೆ. ಬೆಳಗಿನ ಜಾವ ಕಾಫಿ ತೋಟಗಳಿಗೆ ಕಾಲ್ನಡಿಗೆಯಲ್ಲಿ ತೆರಳಲು ಭಯವಾಗುತ್ತದೆ. ಹಗಲಿನ ವೇಳೆ ಕೆಲಸಕ್ಕೆ ಕೂಲಿ ಕಾರ್ಮಿಕರು ಬರುತ್ತಿಲ್ಲ. ಅರಣ್ಯ ಇಲಾಖೆ ಕಾಡಕೋಣಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ಕಾಫಿ ಬೆಳೆಗಾರ ಎಚ್.ಪಿ.ತ್ರಿಲೋಕ್ ಒತ್ತಾಯಿಸಿದ್ದಾರೆ.