<p><strong>ಮಡಿಕೇರಿ:</strong> ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಗುಹ್ಯ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಗುರುವಾರ ಬೆಳೆಗಾರ ಚೌರಿರ ಗಣಪತಿ (ಗಪ್ಪಿ) (49) ಎಂಬುವವರು ಮೃತಪಟ್ಟರು. </p>.<p>ಗುಹ್ಯ ಗ್ರಾಮದ ಹೈಸ್ಕೂಲ್ ರಸ್ತೆಯ ನಿವಾಸಿ ಚೌರಿರ ಗಣಪತಿ ಗುರುವಾರ ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಕಾಫಿ ತೋಟಕ್ಕೆ ತೆರಳಿದ್ದರು. ತೋಟದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಕಾಡಾನೆಯೊಂದು ಗಣಪತಿ ಅವರ ಮೇಲೆ ದಾಳಿ ನಡೆಸಿದೆ. ಪಾರಾಗಲೆಂದು ಅವರು ಓಡುತ್ತಿದ್ದಾಗ ಕೆಳಗೆ ಬಿದ್ದಿದ್ದಾರೆ. ಕಾಡಾನೆ ಕಾಲಿನಿಂದ ತುಳಿದಿದ್ದು, ಸ್ಥಳದಲ್ಲೆ ಅವರು ಮೃತಪಟ್ಟರು. ತೋಟದ ಮೇಲ್ವಿಚಾರಕ ನೌಷಾದ್ ಕೂದಲೆಳೆ ಅಂತರದಲ್ಲಿ ಪಾರಾದರು.</p>.<p>ಮೃತದೇಹವಿರಿಸಿದ್ದ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದ ಮುಂಭಾಗ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಬಂದ ಸಿಸಿಎಫ್ ಸೋನಲ್ ವೃಷ್ಣಿ ಅವರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು, ‘ಅರಣ್ಯ ಇಲಾಖೆಯು ಕಾಡಾನೆಗಳ ಹಾವಳಿ ನಿಯಂತ್ರಿಸಲು ಯೋಜನೆ ರೂಪಿಸಿಲ್ಲ’ ಎಂದು ಹರಿಹಾಯ್ದರು. ಸರ್ಕಾರದ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು.</p>.<p>ಸಿಸಿಎಫ್ ಸೋನಲ್ ವೃಷ್ಣಿ ಮಾತನಾಡಿ, ‘ಕಾಡಾನೆಯನ್ನು ಸೆರೆ ಹಿಡಿಯಲಾಗುವುದು. ವೈಜ್ಞಾನಿಕ ರೀತಿಯಲ್ಲಿ ರೈಲ್ವೆ ಬ್ಯಾರಿಕೇಡ್ ಅಳವಡಿಸಲಾಗುವುದು ಹಾಗೂ ಅಮ್ಮತ್ತಿ ಹೋಬಳಿ ವ್ಯಾಪ್ತಿಯಲ್ಲಿ ಕಾಡಾನೆ ದಾಳಿ ತಡೆಗೆ ವಿಶೇಷ ಅಧಿಕಾರಿ ನೇಮಕ ಮಾಡಲಾಗುವುದು ಎಂದು ಭರವಸೆ ನೀಡಿದರು. ಜೊತೆಗೆ, ವನ್ಯಜೀವಿ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ₹ 1 ಕೋಟಿ ಪರಿಹಾರ ನೀಡುವುದು, ಅರಣ್ಯ ಸಚಿವರ ನೇತೃತ್ವದಲ್ಲಿ 20 ದಿನಗಳ ಒಳಗೆ ಸಭೆ ನಡೆಸುವುದು ಮೊದಲಾದ ಬೇಡಿಕೆಗಳ ಕುರಿತು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ತಿಳಿಸಿದರು. ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.</p>.<p>ಕಾಡಾನೆ ದಾಳಿಯಿಂದ ಸಂಭವಿಸುತ್ತಿರುವ ಸಾವುಗಳಿಗೆ ಅರಣ್ಯಾಧಿಕಾರಿಗಳ ಬೇಜವಾಬ್ದಾರಿತನವೇ ಕಾರಣ ಎಂದು ಆರೋಪಿಸಿ ರೈತ ಸಂಘ ಹಾಗೂ ಇತರರು ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>‘ಸಿದ್ದಾಪುರ ಭಾಗದಲ್ಲಿ ಕಾಡಾನೆಗಳಿದ್ದು, ಮುಂಜಾಗ್ರತೆ ವಹಿಸುವಂತೆ ಜನರ ಮೊಬೈಲ್ ಫೋನ್ಗಳಿಗೆ ಸಂದೇಶಗಳನ್ನು ಕಳುಹಿಸಲಾಗಿತ್ತು. ಹಿಂಡಿನಲ್ಲಿದ್ದ ಕಾಡಾನೆ ಬೇರ್ಪಟ್ಟಿದ್ದು, ದಾಳಿ ನಡೆಸಿದೆ. ಅದನ್ನು ಗುರುತಿಸುವ ಕಾರ್ಯ ನಡೆದಿದೆ’ ಎಂದು ಡಿಸಿಎಫ್ ಜಗನ್ನಾಥ್ ಹೇಳಿದರು.</p>.<p>ಎರಡು ವಾರದ ಅವಧಿಯಲ್ಲೇ ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದ ಮೂವರು ಮೃತಪಟ್ಟಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ. ಆನೆ ದಾಳಿಯಿಂದ ಜನವರಿಯಿಂದ ಇಲ್ಲಿಯವರೆಗೆ ಐವರು ಮೃತಪಟ್ಟಂತಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಗುಹ್ಯ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಗುರುವಾರ ಬೆಳೆಗಾರ ಚೌರಿರ ಗಣಪತಿ (ಗಪ್ಪಿ) (49) ಎಂಬುವವರು ಮೃತಪಟ್ಟರು. </p>.<p>ಗುಹ್ಯ ಗ್ರಾಮದ ಹೈಸ್ಕೂಲ್ ರಸ್ತೆಯ ನಿವಾಸಿ ಚೌರಿರ ಗಣಪತಿ ಗುರುವಾರ ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಕಾಫಿ ತೋಟಕ್ಕೆ ತೆರಳಿದ್ದರು. ತೋಟದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಕಾಡಾನೆಯೊಂದು ಗಣಪತಿ ಅವರ ಮೇಲೆ ದಾಳಿ ನಡೆಸಿದೆ. ಪಾರಾಗಲೆಂದು ಅವರು ಓಡುತ್ತಿದ್ದಾಗ ಕೆಳಗೆ ಬಿದ್ದಿದ್ದಾರೆ. ಕಾಡಾನೆ ಕಾಲಿನಿಂದ ತುಳಿದಿದ್ದು, ಸ್ಥಳದಲ್ಲೆ ಅವರು ಮೃತಪಟ್ಟರು. ತೋಟದ ಮೇಲ್ವಿಚಾರಕ ನೌಷಾದ್ ಕೂದಲೆಳೆ ಅಂತರದಲ್ಲಿ ಪಾರಾದರು.</p>.<p>ಮೃತದೇಹವಿರಿಸಿದ್ದ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದ ಮುಂಭಾಗ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಬಂದ ಸಿಸಿಎಫ್ ಸೋನಲ್ ವೃಷ್ಣಿ ಅವರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು, ‘ಅರಣ್ಯ ಇಲಾಖೆಯು ಕಾಡಾನೆಗಳ ಹಾವಳಿ ನಿಯಂತ್ರಿಸಲು ಯೋಜನೆ ರೂಪಿಸಿಲ್ಲ’ ಎಂದು ಹರಿಹಾಯ್ದರು. ಸರ್ಕಾರದ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು.</p>.<p>ಸಿಸಿಎಫ್ ಸೋನಲ್ ವೃಷ್ಣಿ ಮಾತನಾಡಿ, ‘ಕಾಡಾನೆಯನ್ನು ಸೆರೆ ಹಿಡಿಯಲಾಗುವುದು. ವೈಜ್ಞಾನಿಕ ರೀತಿಯಲ್ಲಿ ರೈಲ್ವೆ ಬ್ಯಾರಿಕೇಡ್ ಅಳವಡಿಸಲಾಗುವುದು ಹಾಗೂ ಅಮ್ಮತ್ತಿ ಹೋಬಳಿ ವ್ಯಾಪ್ತಿಯಲ್ಲಿ ಕಾಡಾನೆ ದಾಳಿ ತಡೆಗೆ ವಿಶೇಷ ಅಧಿಕಾರಿ ನೇಮಕ ಮಾಡಲಾಗುವುದು ಎಂದು ಭರವಸೆ ನೀಡಿದರು. ಜೊತೆಗೆ, ವನ್ಯಜೀವಿ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ₹ 1 ಕೋಟಿ ಪರಿಹಾರ ನೀಡುವುದು, ಅರಣ್ಯ ಸಚಿವರ ನೇತೃತ್ವದಲ್ಲಿ 20 ದಿನಗಳ ಒಳಗೆ ಸಭೆ ನಡೆಸುವುದು ಮೊದಲಾದ ಬೇಡಿಕೆಗಳ ಕುರಿತು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ತಿಳಿಸಿದರು. ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.</p>.<p>ಕಾಡಾನೆ ದಾಳಿಯಿಂದ ಸಂಭವಿಸುತ್ತಿರುವ ಸಾವುಗಳಿಗೆ ಅರಣ್ಯಾಧಿಕಾರಿಗಳ ಬೇಜವಾಬ್ದಾರಿತನವೇ ಕಾರಣ ಎಂದು ಆರೋಪಿಸಿ ರೈತ ಸಂಘ ಹಾಗೂ ಇತರರು ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>‘ಸಿದ್ದಾಪುರ ಭಾಗದಲ್ಲಿ ಕಾಡಾನೆಗಳಿದ್ದು, ಮುಂಜಾಗ್ರತೆ ವಹಿಸುವಂತೆ ಜನರ ಮೊಬೈಲ್ ಫೋನ್ಗಳಿಗೆ ಸಂದೇಶಗಳನ್ನು ಕಳುಹಿಸಲಾಗಿತ್ತು. ಹಿಂಡಿನಲ್ಲಿದ್ದ ಕಾಡಾನೆ ಬೇರ್ಪಟ್ಟಿದ್ದು, ದಾಳಿ ನಡೆಸಿದೆ. ಅದನ್ನು ಗುರುತಿಸುವ ಕಾರ್ಯ ನಡೆದಿದೆ’ ಎಂದು ಡಿಸಿಎಫ್ ಜಗನ್ನಾಥ್ ಹೇಳಿದರು.</p>.<p>ಎರಡು ವಾರದ ಅವಧಿಯಲ್ಲೇ ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದ ಮೂವರು ಮೃತಪಟ್ಟಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ. ಆನೆ ದಾಳಿಯಿಂದ ಜನವರಿಯಿಂದ ಇಲ್ಲಿಯವರೆಗೆ ಐವರು ಮೃತಪಟ್ಟಂತಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>