ಯವಕಪಾಡಿ ಗ್ರಾಮದ ನಾಲ್ಕುನಾಡು ಅರಮನೆಯ ಬಳಿಯಿರುವ ಸರ್ಕಾರಿ ಶಾಲೆಯ ಪಿಲ್ಲರ್ಗಳನ್ನೇ ಶನಿವಾರ ಬೆಳಿಗ್ಗೆ ಗುದ್ದಿ ಪುಡಿಗಟ್ಟಿರುವ ಕಾಡಾನೆ, ರಾಜು ಎಂಬುವರ ಮಾರುತಿ ವ್ಯಾನಿಗೂ ಹಾನಿ ಮಾಡಿದೆ. ಬಳಿಕ ರಾಜನ್ ಅವರ ಮನೆ ಚಾವಣಿಗೂ ಕಿತ್ತು ಹಾಕಿದೆ.ಶುಕ್ರವಾರ ರಾತ್ರಿಯೂ ಪುಂಡಾಟಿಕೆ ತೋರಿದ್ದ ಆನೆಯು ತಂತಿ ಬೇಲಿಯನ್ನು ಕಿತ್ತು ಎಸೆದಿತ್ತು.