ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಮಡಿಕೇರಿ: ಸತತ ಕಾರ್ಯಾಚರಣೆ, ಕೊನೆಗೂ ಕಾಡಾನೆ ಸೆರೆ

Published 25 ಜೂನ್ 2023, 17:15 IST
Last Updated 25 ಜೂನ್ 2023, 17:15 IST
ಅಕ್ಷರ ಗಾತ್ರ

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಸಮೀಪದ ಕಂಡಂಗಾಲ ಗ್ರಾಮದ ಬಳಿ 35 ವರ್ಷದ ಗಂಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಭಾನುವಾರ ಸೆರೆ ಹಿಡಿದರು. ಈ ಆನೆಯು ಕಳೆದ ಹಲವು ತಿಂಗಳುಗಳಿಂದ ಈ ಭಾಗದಲ್ಲಿ ಕೃಷಿ ಭೂಮಿಯ ಮೇಲೆ ದಾಳಿ ನಡೆಸಿ, ಬೆಳೆಗಳನ್ನು ನಾಶಪಡಿಸಿತ್ತು. ಇದರ ಸೆರೆಗೆ ಭಾನುವಾರ ಬೆಳಿಗ್ಗೆಯಿಂದಲೆ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆಯ ಸಿಬ್ಬಂದಿ ಅಭಿಮನ್ಯು, ಪ್ರಶಾಂತ, ಹರ್ಷ ಸೇರಿದಂತೆ 4 ಸಾಕಾನೆಗಳ ನೆರವಿನಿಂದ ಕಾರ್ಯಾಚರಣೆ ನಡೆಸಿದ್ದರು. ಮಧ್ಯಾಹ್ನದ ವೇಳೆಗೆ ಕಾಡಾನೆಗೆ ಅರಿವಳಿಕೆ ಚುಚ್ಚುಮದ್ದು ನೀಡಿ, ಸೆರೆ ಹಿಡಿದು, ರೇಡಿಯೊ ಕಾಲರ್ ಅಳವಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT