<p><strong>ನಾಪೋಕ್ಲು:</strong> ಜಿಲ್ಲೆಯ ಗಡಿಭಾಗ ಸಂಪಾಜೆ ಗ್ರಾಮ ಪಂಚಾಯಿತಿಯ ಕೊಯನಾಡಿನ ಗ್ರಾಮದ ಕೇನಾಜೆ ಉಲ್ಲಾಸ ಎಂಬವರ ತೋಟಕ್ಕೆ ಮಂಗಳವಾರ ರಾತ್ರಿ ಕಾಡಾನೆಗಳು ನುಗ್ಗಿ ಕೃಷಿ ನಾಶ ಪಡಿಸಿವೆ.</p>.<p>ಕಾಡಾನೆಗಳ ಹಿಂಡು ತೆಂಗು, ಅಡಿಕೆ, ಬಾಳೆ ಗಿಡಗಳನ್ನು ಧ್ವಂಸ ಗೊಳಿಸಿವೆ. ಅರಣ್ಯ ಇಲಾಖೆ ಹಾಗೂ ಸರ್ಕಾರ ಸೂಕ್ತ ಪರಿಹಾರವನ್ನು ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<p>ಸಮೀಪದ ನೆಲಜಿ ಗ್ರಾಮದ ಅಪ್ಪುಮಣಿಯಂಡ ರಘುಸುಬ್ಬಯ್ಯ ಅವರ ಗದ್ದೆಗಳಲ್ಲಿ ಭತ್ತದ ಪೈರನ್ನು ಕಾಡಾನೆಗಳು ತುಳಿದು ನಾಶ ಮಾಡಿವೆ. ತೋಟಗಳಲ್ಲೂ ಅಡ್ಡಾಡಿದ್ದು, ಫಸಲು ಹಾನಿಗೊಳಗಾಗಿದೆ. ನೆಲಜಿ, ಬಲ್ಲಮಾವಟಿ, ಪೇರೂರು ಗ್ರಾಮ ಗಳಲ್ಲಿ ಕಾಡಾನೆಗಳು ಹಾನಿ ಮಾಡಿದ್ದು, ಅಧಿಕಾರಿಗಳು ಸ್ಪಂದಿಸಿಲ್ ಎಂದು ರಘುಸುಬ್ಬಯ್ಯ ಆರೋಪಿಸಿದ್ದಾರೆ.</p>.<p>ನಾಪೋಕ್ಲು ಸಮೀಪದ ನರಿಯಂದಡ ಗ್ರಾಮದ ಪೊಕ್ಕೋಳಂಡ್ರ ಮಕ್ಕಿಮನೆ, ಮಂಜೀಪುರ ಕುಟುಂಬಸ್ಥರ ತೋಟಗಳಲ್ಲಿ ಹುಲಿ ಹೆಜ್ಜೆ ಗುರುತು ಪತ್ತೆಯಾಗಿದ್ದು ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು , ಹುಲಿ ಕಂಡರೆ ಅರಣ್ಯ ಇಲಾಖೆ ಯನ್ನು ಸಂಪರ್ಕಿಸುವಂತೆ (ಸಂಪರ್ಕ ಸಂಖ್ಯೆ 8277124444) ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಪೋಕ್ಲು:</strong> ಜಿಲ್ಲೆಯ ಗಡಿಭಾಗ ಸಂಪಾಜೆ ಗ್ರಾಮ ಪಂಚಾಯಿತಿಯ ಕೊಯನಾಡಿನ ಗ್ರಾಮದ ಕೇನಾಜೆ ಉಲ್ಲಾಸ ಎಂಬವರ ತೋಟಕ್ಕೆ ಮಂಗಳವಾರ ರಾತ್ರಿ ಕಾಡಾನೆಗಳು ನುಗ್ಗಿ ಕೃಷಿ ನಾಶ ಪಡಿಸಿವೆ.</p>.<p>ಕಾಡಾನೆಗಳ ಹಿಂಡು ತೆಂಗು, ಅಡಿಕೆ, ಬಾಳೆ ಗಿಡಗಳನ್ನು ಧ್ವಂಸ ಗೊಳಿಸಿವೆ. ಅರಣ್ಯ ಇಲಾಖೆ ಹಾಗೂ ಸರ್ಕಾರ ಸೂಕ್ತ ಪರಿಹಾರವನ್ನು ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<p>ಸಮೀಪದ ನೆಲಜಿ ಗ್ರಾಮದ ಅಪ್ಪುಮಣಿಯಂಡ ರಘುಸುಬ್ಬಯ್ಯ ಅವರ ಗದ್ದೆಗಳಲ್ಲಿ ಭತ್ತದ ಪೈರನ್ನು ಕಾಡಾನೆಗಳು ತುಳಿದು ನಾಶ ಮಾಡಿವೆ. ತೋಟಗಳಲ್ಲೂ ಅಡ್ಡಾಡಿದ್ದು, ಫಸಲು ಹಾನಿಗೊಳಗಾಗಿದೆ. ನೆಲಜಿ, ಬಲ್ಲಮಾವಟಿ, ಪೇರೂರು ಗ್ರಾಮ ಗಳಲ್ಲಿ ಕಾಡಾನೆಗಳು ಹಾನಿ ಮಾಡಿದ್ದು, ಅಧಿಕಾರಿಗಳು ಸ್ಪಂದಿಸಿಲ್ ಎಂದು ರಘುಸುಬ್ಬಯ್ಯ ಆರೋಪಿಸಿದ್ದಾರೆ.</p>.<p>ನಾಪೋಕ್ಲು ಸಮೀಪದ ನರಿಯಂದಡ ಗ್ರಾಮದ ಪೊಕ್ಕೋಳಂಡ್ರ ಮಕ್ಕಿಮನೆ, ಮಂಜೀಪುರ ಕುಟುಂಬಸ್ಥರ ತೋಟಗಳಲ್ಲಿ ಹುಲಿ ಹೆಜ್ಜೆ ಗುರುತು ಪತ್ತೆಯಾಗಿದ್ದು ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು , ಹುಲಿ ಕಂಡರೆ ಅರಣ್ಯ ಇಲಾಖೆ ಯನ್ನು ಸಂಪರ್ಕಿಸುವಂತೆ (ಸಂಪರ್ಕ ಸಂಖ್ಯೆ 8277124444) ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>