<p><strong>ಸಿದ್ದಾಪುರ:</strong> ಬಾಡಗ ಬಾಣಂಗಾಲ ಹಾಗೂ ಪುಲಿಯೇರಿ ವ್ಯಾಪ್ತಿಯಲ್ಲಿ ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ ಶುಕ್ರವಾರ ನಡೆಯಿತು.</p>.<p>ಬಾಡಗ ಬಾಣಂಗಾಲ ಗ್ರಾಮದ ಕೌರಿಬೆಟ್ಟ ಕಾಫಿ ತೋಟದಲ್ಲಿ ಕಾಡಾನೆ ದಾಳಿಯಿಂದ ಕಾವಲುಗಾರ ಮೃತಪಟ್ಟ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹಾಗೂ ಕಾರ್ಮಿಕರು ಭಯಭೀತರಾಗಿದ್ದರು.</p>.<p>ಶಾಸಕ ಎ.ಎಸ್. ಪೊನ್ನಣ್ಣ ಅವರ ಸೂಚನೆ ಮೇರೆಗೆ ತಿತಿಮತಿ ಹಾಗೂ ವಿರಾಜಪೇಟೆ ಅರಣ್ಯ ವಿಭಾಗದ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿದರು. ಈ ವೇಳೆ ಕಾಫಿ ತೋಟದಲ್ಲಿ ಒಂಟಿ ಸಲಗ ಕಾಣಸಿದ್ದು, ಪಟಾಕಿ ಸಿಡಿಸಿ ಅರಣ್ಯದತ್ತ ಅಟ್ಟಲಾಯಿತು. ಕಾರ್ಯಾಚರಣೆಯಲ್ಲಿ ವಿರಾಜಪೇಟೆ ವಲಯ ಅರಣ್ಯಾಧಿಕಾರಿ ಶಿವರಾಂ, ತಿತಿಮತಿ ವಲಯ ಅರಣ್ಯಾಧಿಕಾರಿ ಗಂಗಾಧರ್, ಉಪವಲಯ ಅರಣ್ಯಾಧಿಕಾರಿ ಸಂಜಿತ್ ಸೋಮಯ್ಯ, ಶಶಿ, ಆರ್.ಆರ್.ಟಿ ಹಾಗೂ ಆನೆ ಕಾರ್ಯಪಡೆಯ ಸಿಬ್ಬಂದಿ ಭಾಗವಹಿಸಿದ್ದರು.</p>.<p>ಬಾಡಗ ಬಾಣಂಗಾಲ ವ್ಯಾಪ್ತಿಯಲ್ಲಿ ಕಾಡಾನೆ ಹಿಂಡು ಬೀಡುಬಿಟ್ಟಿದ್ದು, ಅರಣ್ಯಕ್ಕೆ ಅಟ್ಟಿದ ಬಳಿಕ ಮರಳಿ ತೋಟಕ್ಕೆ ಬರುತ್ತಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅರಣ್ಯದಿಂದ ಮರಳಿ ಬರದಂತೆ ಕ್ರಮ ಕೂಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.</p>
<p><strong>ಸಿದ್ದಾಪುರ:</strong> ಬಾಡಗ ಬಾಣಂಗಾಲ ಹಾಗೂ ಪುಲಿಯೇರಿ ವ್ಯಾಪ್ತಿಯಲ್ಲಿ ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ ಶುಕ್ರವಾರ ನಡೆಯಿತು.</p>.<p>ಬಾಡಗ ಬಾಣಂಗಾಲ ಗ್ರಾಮದ ಕೌರಿಬೆಟ್ಟ ಕಾಫಿ ತೋಟದಲ್ಲಿ ಕಾಡಾನೆ ದಾಳಿಯಿಂದ ಕಾವಲುಗಾರ ಮೃತಪಟ್ಟ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹಾಗೂ ಕಾರ್ಮಿಕರು ಭಯಭೀತರಾಗಿದ್ದರು.</p>.<p>ಶಾಸಕ ಎ.ಎಸ್. ಪೊನ್ನಣ್ಣ ಅವರ ಸೂಚನೆ ಮೇರೆಗೆ ತಿತಿಮತಿ ಹಾಗೂ ವಿರಾಜಪೇಟೆ ಅರಣ್ಯ ವಿಭಾಗದ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿದರು. ಈ ವೇಳೆ ಕಾಫಿ ತೋಟದಲ್ಲಿ ಒಂಟಿ ಸಲಗ ಕಾಣಸಿದ್ದು, ಪಟಾಕಿ ಸಿಡಿಸಿ ಅರಣ್ಯದತ್ತ ಅಟ್ಟಲಾಯಿತು. ಕಾರ್ಯಾಚರಣೆಯಲ್ಲಿ ವಿರಾಜಪೇಟೆ ವಲಯ ಅರಣ್ಯಾಧಿಕಾರಿ ಶಿವರಾಂ, ತಿತಿಮತಿ ವಲಯ ಅರಣ್ಯಾಧಿಕಾರಿ ಗಂಗಾಧರ್, ಉಪವಲಯ ಅರಣ್ಯಾಧಿಕಾರಿ ಸಂಜಿತ್ ಸೋಮಯ್ಯ, ಶಶಿ, ಆರ್.ಆರ್.ಟಿ ಹಾಗೂ ಆನೆ ಕಾರ್ಯಪಡೆಯ ಸಿಬ್ಬಂದಿ ಭಾಗವಹಿಸಿದ್ದರು.</p>.<p>ಬಾಡಗ ಬಾಣಂಗಾಲ ವ್ಯಾಪ್ತಿಯಲ್ಲಿ ಕಾಡಾನೆ ಹಿಂಡು ಬೀಡುಬಿಟ್ಟಿದ್ದು, ಅರಣ್ಯಕ್ಕೆ ಅಟ್ಟಿದ ಬಳಿಕ ಮರಳಿ ತೋಟಕ್ಕೆ ಬರುತ್ತಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅರಣ್ಯದಿಂದ ಮರಳಿ ಬರದಂತೆ ಕ್ರಮ ಕೂಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.</p>