ಹಾಡು ಹಗಲೇ ಮಠಸಾಗರ ಗ್ರಾಮದೊಳಗೆ ನುಗ್ಗಿದ ಕಾಡಾನೆ: ಜೀವಭಯದಲ್ಲಿ ಗ್ರಾಮಸ್ಥರು

ಸಕಲೇಶಪುರ: ಮಠಸಾಗರ ಗ್ರಾಮಕ್ಕೆ ಬುಧವಾರ ಬೆಳಿಗ್ಗೆ ನುಗ್ಗಿದ ಕಾಡಾನೆಯು ಗ್ರಾಮಸ್ಥರಲ್ಲಿ ಭಯ ಉಂಟುಮಾಡಿತು.
ಬೆಳಿಗ್ಗೆ 7.30ರ ಸುಮಾರಿಗೆ ಗ್ರಾಮದ ಮನೆಗಳ ಅಂಗಳಕ್ಕೆ ಬಂದ ಈ ಆನೆಯ ಕಂಡು ಜನರು ಜೋರಾಗಿ ಕೂಗಿಕೊಂಡರು. ಹೊರಗೆ ಇದ್ದವರು ಜಾಗೃತಗೊಂಡು, ಮನೆಯೊಳಗೆ ಓಡಿದರು. ಸುಮಾರು 15 ನಿಮಿಷ ಗ್ರಾಮದಲ್ಲಿ ಗಾಬರಿಯಿಂದ ಓಡಾಡಿದ ಈ ಆನೆಯು ನಂತರ ಪಕ್ಕದ ಕಾಫಿ ತೋಟದತ್ತ ತೆರಳಿತು. ಯಾವುದೇ ಪ್ರಾಣಹಾನಿ ಉಂಟಾಗಿಲ್ಲ.
10 ದಿನಗಳ ಹಿಂದೆ ಇದೇ ಗ್ರಾಮದಿಂದ ಕೂಗಳತೆ ದೂರದಲ್ಲಿ ಕಾಡಾನೆ ಯೊಂದು ಅರ್ಚಕ ಆಶಿಕ್ ಭಟ್ ಎಂಬುವವರನ್ನು ಕೊಂದು ಹಾಕಿತ್ತು. ಅದೇ ಆನೆ ಮತ್ತೆ ಬಂದಿದೆ ಎಂದು ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.