ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಡಗು: ಮಂಗಳೂರು- ಮೈಸೂರು ಹೆದ್ದಾರಿಯಲ್ಲಿ ಕಾಡಾನೆ ಪ್ರತ್ಯಕ್ಷ

Published 9 ಜೂನ್ 2024, 4:34 IST
Last Updated 9 ಜೂನ್ 2024, 4:34 IST
ಅಕ್ಷರ ಗಾತ್ರ

ಸುಂಟಿಕೊಪ್ಪ: ಇಲ್ಲಿಗೆ ಸಮೀಪದ ಏಳನೇ ಹೊಸಕೋಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಿಗ್ಗೆ ಕಾಡಾ‌ನೆಯೊಂದು ಕಾಣಿಸಿಕೊಂಡಿದೆ.

ಗ್ರಾಮ ಪಂಚಾಯಿತಿ ಕಚೇರಿ ಬಳಿ ಇರುವ ಸಾವಿತ್ರಿ ಎಂಬುವವರ ತೋಟದ ಮೂಲಕ ಬಂದ ಕಾಡಾನೆಯೊಂದು ಆಗ ತಾನೇ‌ ಮಸೀದಿಗೆ ತೆರಳಿ ಪ್ರಾರ್ಥ‌ನೆ ಮುಗಿಸಿ ಬರುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿದ್ದು, ಕೂದಲೆಳೆ ಅಂತರದಲ್ಲಿ ಅವರು ಪಾರಾಗಿದ್ದಾರೆ. ಆದರೆ ಅವರ ಕಾರನ್ನು ಜಖಂಗೊಳಿಸಿ ತೋಟದೊಳಗೆ ನುಸುಳಿದೆ.

ಅದೇ ಮಾರ್ಗದಲ್ಲಿ ಮತ್ತೊಂದು ಕಾಡಾನೆಯೂ ಅಲ್ಲಿಗೆ ಬಂದಿದೆ. ಇದರಿಂದ ಸ್ಥಳೀಯರು ಭಯಭೀತರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT