<p><strong>ಸುಂಟಿಕೊಪ್ಪ:</strong> ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ಮುಂದುವರೆದಿದ್ದು, ಫಸಲುಭರಿತ ಬೆಳೆಗಳನ್ನು ತಿಂದ ತುಳಿದು ನಷ್ಟಪಡಿಸುತ್ತಿವೆ.</p>.<p>ಸಮೀಪದ ಚೆಟ್ಟಳ್ಳಿ ಗ್ರಾಮದ ನಿವಾಸಿ ಹೊಸಮನೆ ಪೂವಯ್ಯ ಅವರ ತೋಟಕ್ಕೆ ಕಾಡಾನೆ ಹಿಂಡು ನುಗ್ಗಿ ದಾಂದಲೆ ನಡೆಸಿ ಅಪಾರ ಬೆಳೆ ನಷ್ಟ ಮಾಡಿವೆ. <br> ಮಳೆಗಾಲ ಪ್ರಾರಂಭವಾದಗಿನಿಂದ ನಿರಂತರವಾಗಿ ಈ ಭಾಗದಲ್ಲಿ ಕಾಡಿನಿಂದ ಬಂದ ಕಾಡಾನೆಗಳು ತೋಟಗಳಲ್ಲಿ ಬೀಡುಬಿಟ್ಟಿದ್ದು, ಕಾಫಿ, ಕರಿಮೆಣಸು, ತೆಂಗು, ಬಾಳೆ ತೋಟಗಳನ್ನು ದ್ವಂಸಗೊಳಿಸಿ ಭಾರಿ ಪ್ರಮಾಣದಲ್ಲಿ ನಷ್ಟಪಡಿಸಿವೆ ಎಂದು ಹೊಸಮನೆ ಪೂವಯ್ಯ ತಮ್ಮ ಅಳಲು ತೋಡಿಕೊಂಡಿದ್ದಾರೆ.</p>.<p>ಈ ಕಾಡಾನೆಯ ದಾಳಿಯಿಂದ ಉಂಟಾದ ನಷ್ಟ ಪರಿಹಾರಕ್ಕಾಗಿ ಹಲವು ಬಾರಿ ಅರಣ್ಯ ಇಲಾಖೆಗೆ ಮನವಿ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.<br /> ಈ ಭಾಗದ ಕೆಲ ತೋಟಗಳಲ್ಲಿ ಹಗಲು ವೇಳೆಯಲ್ಲಿಯೇ ಆನೆಗಳು ನುಗ್ಗುತ್ತಿವೆ. ಕೂಲಿ ಕಾರ್ಮಿಕರು ತೋಟಕ್ಕೆ ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ. <br /> ಎಲ್ಲ ದಾಖಲಾತಿಗಳನ್ನು ನೀಡಿ ಪರಿಹಾರಕ್ಕೆ ಕಳೆದ ವರ್ಷ ಮನವಿ ಸಲ್ಲಿಸಿದರೂ ಇದುವರೆಗೆ ಪರಿಹಾರ ನೀಡುವಲ್ಲಿ ಅರಣ್ಯ ಇಲಾಖೆ ಮೌನವಹಿಸಿದೆ ಎಂದು ಈ ಭಾಗದ ಕೃಷಿಕರು ಅರಣ್ಯ ಇಲಾಖೆ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಕೂಡಲೇ ಅರಣ್ಯ ಅಧಿಕಾರಿಗಳು ಕೃಷಿಕರ ಭೂಮಿಯಿಂದ ಆನೆಗಳನ್ನು ಅರಣ್ಯಗಳಿಗೆ ಓಡಿಸುವಂತೆ ಒತ್ತಾಯಿಸಿದ್ದಾರೆ.</p>.<p>ನಾಕೂರು, ನೆಟ್ಲಿ‘ಬಿ’, ಏಳನೇ ಹೊಸಕೋಟೆ ಭಾಗಗಳಲ್ಲಿ ಕಾಡಾನೆಗಳು ತೋಟಗಳಲ್ಲಿ ಬೀಡುಬಿಟ್ಟು ಬೆಳೆ ನಷ್ಟ ಪಡಿಸುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಂಟಿಕೊಪ್ಪ:</strong> ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ಮುಂದುವರೆದಿದ್ದು, ಫಸಲುಭರಿತ ಬೆಳೆಗಳನ್ನು ತಿಂದ ತುಳಿದು ನಷ್ಟಪಡಿಸುತ್ತಿವೆ.</p>.<p>ಸಮೀಪದ ಚೆಟ್ಟಳ್ಳಿ ಗ್ರಾಮದ ನಿವಾಸಿ ಹೊಸಮನೆ ಪೂವಯ್ಯ ಅವರ ತೋಟಕ್ಕೆ ಕಾಡಾನೆ ಹಿಂಡು ನುಗ್ಗಿ ದಾಂದಲೆ ನಡೆಸಿ ಅಪಾರ ಬೆಳೆ ನಷ್ಟ ಮಾಡಿವೆ. <br> ಮಳೆಗಾಲ ಪ್ರಾರಂಭವಾದಗಿನಿಂದ ನಿರಂತರವಾಗಿ ಈ ಭಾಗದಲ್ಲಿ ಕಾಡಿನಿಂದ ಬಂದ ಕಾಡಾನೆಗಳು ತೋಟಗಳಲ್ಲಿ ಬೀಡುಬಿಟ್ಟಿದ್ದು, ಕಾಫಿ, ಕರಿಮೆಣಸು, ತೆಂಗು, ಬಾಳೆ ತೋಟಗಳನ್ನು ದ್ವಂಸಗೊಳಿಸಿ ಭಾರಿ ಪ್ರಮಾಣದಲ್ಲಿ ನಷ್ಟಪಡಿಸಿವೆ ಎಂದು ಹೊಸಮನೆ ಪೂವಯ್ಯ ತಮ್ಮ ಅಳಲು ತೋಡಿಕೊಂಡಿದ್ದಾರೆ.</p>.<p>ಈ ಕಾಡಾನೆಯ ದಾಳಿಯಿಂದ ಉಂಟಾದ ನಷ್ಟ ಪರಿಹಾರಕ್ಕಾಗಿ ಹಲವು ಬಾರಿ ಅರಣ್ಯ ಇಲಾಖೆಗೆ ಮನವಿ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.<br /> ಈ ಭಾಗದ ಕೆಲ ತೋಟಗಳಲ್ಲಿ ಹಗಲು ವೇಳೆಯಲ್ಲಿಯೇ ಆನೆಗಳು ನುಗ್ಗುತ್ತಿವೆ. ಕೂಲಿ ಕಾರ್ಮಿಕರು ತೋಟಕ್ಕೆ ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ. <br /> ಎಲ್ಲ ದಾಖಲಾತಿಗಳನ್ನು ನೀಡಿ ಪರಿಹಾರಕ್ಕೆ ಕಳೆದ ವರ್ಷ ಮನವಿ ಸಲ್ಲಿಸಿದರೂ ಇದುವರೆಗೆ ಪರಿಹಾರ ನೀಡುವಲ್ಲಿ ಅರಣ್ಯ ಇಲಾಖೆ ಮೌನವಹಿಸಿದೆ ಎಂದು ಈ ಭಾಗದ ಕೃಷಿಕರು ಅರಣ್ಯ ಇಲಾಖೆ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಕೂಡಲೇ ಅರಣ್ಯ ಅಧಿಕಾರಿಗಳು ಕೃಷಿಕರ ಭೂಮಿಯಿಂದ ಆನೆಗಳನ್ನು ಅರಣ್ಯಗಳಿಗೆ ಓಡಿಸುವಂತೆ ಒತ್ತಾಯಿಸಿದ್ದಾರೆ.</p>.<p>ನಾಕೂರು, ನೆಟ್ಲಿ‘ಬಿ’, ಏಳನೇ ಹೊಸಕೋಟೆ ಭಾಗಗಳಲ್ಲಿ ಕಾಡಾನೆಗಳು ತೋಟಗಳಲ್ಲಿ ಬೀಡುಬಿಟ್ಟು ಬೆಳೆ ನಷ್ಟ ಪಡಿಸುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>