ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಮವಾರಪೇಟೆ: ಹಗಲಿನಲ್ಲೇ ರಸ್ತೆಯಲ್ಲಿ ಕಾಡಾನೆ ಸಂಚಾರ

Published 13 ಮಾರ್ಚ್ 2024, 15:48 IST
Last Updated 13 ಮಾರ್ಚ್ 2024, 15:48 IST
ಅಕ್ಷರ ಗಾತ್ರ

ಸೋಮವಾರಪೇಟೆ: ಕಾಜೂರು ಮೀಸಲು ಅರಣ್ಯದ ಬಳಿ ಮಡಿಕೇರಿ ಸೋಮವಾರಪೇಟೆ ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಬೆಳ್ಳಂ ಬೆಳಿಗ್ಗೆಯೇ ಸಂಚರಿಸುತ್ತಿದ್ದು, ಜನ ಸಾಮಾನ್ಯರು ಭಯಭೀತರಾಗಿದ್ದಾರೆ.

‘ಈ ಭಾಗದಲ್ಲಿ ಟ್ರಂಚ್, ಸೋಲಾರ್ ತಂತಿ ಹಾಗೂ ರೈಲ್ವೆ ಬ್ಯಾರಿಕೇಡ್ ಅಳವಡಿಸಲಾಗಿದೆ. ಆದರೂ ರಸ್ತೆಯಲ್ಲಿ ಆನೆ ಸಂಚಾರ ಮಾತ್ರ ಕಡಿಮೆಯಾಗಿಲ್ಲ. ಸರ್ಕಾರದ ಯೋಜನೆಗಳು ಯಾವುದೂ ಸರಿಯಾಗಿ ಅನುಷ್ಠಾನವಾಗದೆ, ಕೋಟ್ಯಂತರ ಹಣವೆಲ್ಲಾ ನೀರು ಪಾಲಾಗುತ್ತಿದೆ’ ಎಂದು ಸ್ಥಳೀಯ ಗ್ರಾಮಸ್ಥರು ದೂರಿದ್ದಾರೆ.

‘ಕಾಡಾನೆಗಳಿಗೆ ಶಾಶ್ವತ ಪರಿಹಾರ ಒದಗಿಸಬೇಕು. ಕಾಡಿನಲ್ಲಿ ಕುಡಿಯುವ ನೀರು ಮತ್ತು ಮೇವಿನ ವ್ಯವಸ್ಥೆಯಾಗದ ಹೊರತು ಕಾಡಾನೆಗಳ ನಿಯಂತ್ರಣ ಸಾಧ್ಯವಿಲ್ಲ’ ಎಂದು ಯಡವಾರೆ ಗ್ರಾಮದ ಕೃಷಿಕ ಅಶೋಕ್ ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT