<blockquote>ಕಾಡಾನೆಗಳಿಂದ ಬೆಳೆ ನಾಶ ಹುಲಿ, ಚಿರತೆ ಹಾವಳಿಗೆ ಜಾನುವಾರು ಬಲಿ | ನಿಯಂತ್ರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲ: ರೈತರ ಆಕ್ರೋಶ</blockquote>.<p><strong>ಗೋಣಿಕೊಪ್ಪಲು:</strong> ಪೊನ್ನಂಪೇಟೆ ತಾಲ್ಲೂಕಿನ ಬಿ.ಶೆಟ್ಟಿಗೇರಿ, ಬೇಗೂರು, ಈಚೂರು, ಕುಂದ, ಹಳ್ಳಿಗಟ್ಟು ಭಾಗದಲ್ಲಿ ಕಾಡಾನೆಗಳ ಹಾವಳಿ ಅತಿಯಾಗಿದೆ ಎಂದು ಆರೋಪಿಸಿ ಕೃಷಿಕರು ಹಾಗೂ ಕಾಫಿಬೆಳೆಗಾರರು ಸೋಮವಾರ ಪೊನ್ನಂಪೇಟೆ ವಲಯ ಅರಣ್ಯ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ಕುಂದ, ಬೇಗೂರಿನ ಬರಪೊಳೆ ಭಾಗದಿಂದ ಬರುವ ಕಾಡಾನೆಗಳು ಬೆಳೆಯನ್ನೆಲ್ಲ ತಿಂದು ನಾಶಪಡಿಸುತ್ತಿವೆ. ಅಲ್ಲದೆ ಹುಲಿ, ಚಿರತೆಗಳ ಹಾವಳಿಯಿಂದಲೂ ಜಾನುವಾರುಗಳು ಬಲಿಯಾಗುತ್ತಿವೆ. ಇವುಗಳನ್ನು ನಿಯಂತ್ರಿಸುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕಾಫಿ ಬೆಳೆಗಾರ ಮಾಚಿಮಾಡ ರವೀಂದ್ರ ಮಾತನಾಡಿ, ‘ಅರಣ್ಯದಿಂದ ಬರುವ ಆನೆಗಳನ್ನು ನಿಯಂತ್ರಿಸಬೇಕು. ಅರಣ್ಯದಂಚಿನಲ್ಲಿ ರೈಲ್ವೆ ಹಳಿಯ ಬ್ಯಾರಿಕೇಡ್ ನಿರ್ಮಿಸಲು ಭೂಮಿ ಪೂಜೆ ಮಾಡಿ 6 ತಿಂಗಳು ಕಳೆದಿದ್ದರೂ ಇನ್ನೂ ಕಾಮಗಾರಿ ಆರಂಭಗೊಂಡಿಲ್ಲ. ಕಾಡಾನೆಗಳು ನಾಡಿಗೆ ಬರುವುದನ್ನು ತಪ್ಪಿಸಲು ಅರಣ್ಯ ಇಲಾಖೆ ವಿಫಲವಾಗಿದೆ’ ಎಂದು ಆರೋಪಿಸಿದರು.</p>.<p>ಹುಲಿ ದಾಳಿಗೆ ಬಲಿಯಾಗುತ್ತಿರುವ ಜಾನುವಾರುಗಳಿಗೆ ಪರಿಹಾರ ನೀಡುವುದರ ಬದಲು ಜಾನುವಾರುಗಳನ್ನೇ ನೀಡುವಂತಾಗಬೇಕು ಎಂದು ಒತ್ತಾಯಿಸಿದರು.</p>.<p>ಚೆಪ್ಪುಡೀರ ರಾಕೇಶ್ ದೇವಯ್ಯ, ಚೋಡುಮಾಡ ಶಾಮ್ ವಿಕ್ರಂ, ಸುಬ್ರಮಣಿ, ಮತ್ರಂಡ ಪ್ರವೀಣ್, ಕಾರ್ಯಪ್ಪ, ಸ್ಕಂದ, ರಶಿಕ, ವಿಠಲ, ಅಯ್ಯಪ್ಪ, ನಾಮೇರ ವಾಸು, ಅಚ್ಚಯ್ಯ ಮೊದಲಾದವರು ಪಾಲ್ಗೊಂಡಿದ್ದರು.</p>.<div><blockquote>ಕುಂದ ಹಳ್ಳಿಗಟ್ಟು ಬಿ.ಶೆಟ್ಟಿಗೇರಿ ಬೇಗೂರು ಭಾಗದಲ್ಲಿ ಹೆಚ್ಚಿರುವ ವನ್ಯಜೀವಿಗಳ ಹಾವಳಿಯನ್ನು ತಡೆಗಟ್ಟದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಪ್ರತಿಭಟನೆ ನಡೆಸಲಾಗುವುದು</blockquote><span class="attribution">ಮಾಚಿಮಾಡ ರವೀಂದ್ರ ಕಾಫಿ ಬೆಳೆಗಾರ </span></div>.<p><strong>8 ಕಿ.ಮೀ ರೈಲ್ವೆ ಬ್ಯಾರಿಕೇಡ್ ಅಳವಡಿಸಲು ಟೆಂಡರ್</strong> </p><p>ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಮಾತನಾಡಿದ ಎಸಿಎಫ್ ಗೋಪಾಲ್ ಬೇಗೂರು ‘ಚೀನಿವಾಡ ಪ್ರದೇಶಗಳು ಮಡಿಕೇರಿ ವನ್ಯಜೀವಿ ವಿಭಾಗಕ್ಕೆ ಒಳಪಡುತ್ತವೆ. ಈ ಭಾಗದಲ್ಲಿ ಕಾಡಾನೆಗಳನ್ನು ಕಾಡಿಗಟ್ಟುವ ಬಗ್ಗೆ ಕ್ರಮಕೈಗೊಳ್ಳಲಾಗಿದೆ. ಬ್ಯಾರಿಕೇಡ್ ಅಳವಡಿಸುವ ಅಧಿಕಾರ ವನ್ಯಜೀವಿ ವಿಭಾಗಕ್ಕೆ ಸೇರಿದೆ. ಇದರ ಬಗ್ಗೆ ಸಂಬಂಧಪಟ್ಟವರಿಗೆ ಮಾಹಿತಿ ನೀಡಲಾಗುವುದು ಎಂದು ಹೇಳಿದರು. ಸರ್ಕಾರ ಬಿಡುಗಡೆ ಮಾಡಿರುವ ₹21 ಕೋಟಿ ಅನುದಾನದಲ್ಲಿ ಮಾಲ್ದಾರೆ ವ್ಯಾಪ್ತಿಯ ಕಾವೇರಿ ನದಿ ತೀರದಿಂದ ಘಟ್ಟದಳ್ಳದವರೆಗೆ 8 ಕಿಲೋ ದೂರ ರೈಲ್ವೆ ಬ್ಯಾರಿಕೇಡ್ ಅಳವಡಿಸಲು ಟೆಂಡರ್ ಕರೆಯಲಾಗಿದೆ. ಬಿ.ಶೆಟ್ಟಿಗೇರಿ ಭಾಗದಲ್ಲಿ ಸೋಲಾರ್ ತಂತಿ ಅಳವಡಿಸುವ ಚಿಂತನೆ ಇದೆ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<blockquote>ಕಾಡಾನೆಗಳಿಂದ ಬೆಳೆ ನಾಶ ಹುಲಿ, ಚಿರತೆ ಹಾವಳಿಗೆ ಜಾನುವಾರು ಬಲಿ | ನಿಯಂತ್ರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲ: ರೈತರ ಆಕ್ರೋಶ</blockquote>.<p><strong>ಗೋಣಿಕೊಪ್ಪಲು:</strong> ಪೊನ್ನಂಪೇಟೆ ತಾಲ್ಲೂಕಿನ ಬಿ.ಶೆಟ್ಟಿಗೇರಿ, ಬೇಗೂರು, ಈಚೂರು, ಕುಂದ, ಹಳ್ಳಿಗಟ್ಟು ಭಾಗದಲ್ಲಿ ಕಾಡಾನೆಗಳ ಹಾವಳಿ ಅತಿಯಾಗಿದೆ ಎಂದು ಆರೋಪಿಸಿ ಕೃಷಿಕರು ಹಾಗೂ ಕಾಫಿಬೆಳೆಗಾರರು ಸೋಮವಾರ ಪೊನ್ನಂಪೇಟೆ ವಲಯ ಅರಣ್ಯ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ಕುಂದ, ಬೇಗೂರಿನ ಬರಪೊಳೆ ಭಾಗದಿಂದ ಬರುವ ಕಾಡಾನೆಗಳು ಬೆಳೆಯನ್ನೆಲ್ಲ ತಿಂದು ನಾಶಪಡಿಸುತ್ತಿವೆ. ಅಲ್ಲದೆ ಹುಲಿ, ಚಿರತೆಗಳ ಹಾವಳಿಯಿಂದಲೂ ಜಾನುವಾರುಗಳು ಬಲಿಯಾಗುತ್ತಿವೆ. ಇವುಗಳನ್ನು ನಿಯಂತ್ರಿಸುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕಾಫಿ ಬೆಳೆಗಾರ ಮಾಚಿಮಾಡ ರವೀಂದ್ರ ಮಾತನಾಡಿ, ‘ಅರಣ್ಯದಿಂದ ಬರುವ ಆನೆಗಳನ್ನು ನಿಯಂತ್ರಿಸಬೇಕು. ಅರಣ್ಯದಂಚಿನಲ್ಲಿ ರೈಲ್ವೆ ಹಳಿಯ ಬ್ಯಾರಿಕೇಡ್ ನಿರ್ಮಿಸಲು ಭೂಮಿ ಪೂಜೆ ಮಾಡಿ 6 ತಿಂಗಳು ಕಳೆದಿದ್ದರೂ ಇನ್ನೂ ಕಾಮಗಾರಿ ಆರಂಭಗೊಂಡಿಲ್ಲ. ಕಾಡಾನೆಗಳು ನಾಡಿಗೆ ಬರುವುದನ್ನು ತಪ್ಪಿಸಲು ಅರಣ್ಯ ಇಲಾಖೆ ವಿಫಲವಾಗಿದೆ’ ಎಂದು ಆರೋಪಿಸಿದರು.</p>.<p>ಹುಲಿ ದಾಳಿಗೆ ಬಲಿಯಾಗುತ್ತಿರುವ ಜಾನುವಾರುಗಳಿಗೆ ಪರಿಹಾರ ನೀಡುವುದರ ಬದಲು ಜಾನುವಾರುಗಳನ್ನೇ ನೀಡುವಂತಾಗಬೇಕು ಎಂದು ಒತ್ತಾಯಿಸಿದರು.</p>.<p>ಚೆಪ್ಪುಡೀರ ರಾಕೇಶ್ ದೇವಯ್ಯ, ಚೋಡುಮಾಡ ಶಾಮ್ ವಿಕ್ರಂ, ಸುಬ್ರಮಣಿ, ಮತ್ರಂಡ ಪ್ರವೀಣ್, ಕಾರ್ಯಪ್ಪ, ಸ್ಕಂದ, ರಶಿಕ, ವಿಠಲ, ಅಯ್ಯಪ್ಪ, ನಾಮೇರ ವಾಸು, ಅಚ್ಚಯ್ಯ ಮೊದಲಾದವರು ಪಾಲ್ಗೊಂಡಿದ್ದರು.</p>.<div><blockquote>ಕುಂದ ಹಳ್ಳಿಗಟ್ಟು ಬಿ.ಶೆಟ್ಟಿಗೇರಿ ಬೇಗೂರು ಭಾಗದಲ್ಲಿ ಹೆಚ್ಚಿರುವ ವನ್ಯಜೀವಿಗಳ ಹಾವಳಿಯನ್ನು ತಡೆಗಟ್ಟದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಪ್ರತಿಭಟನೆ ನಡೆಸಲಾಗುವುದು</blockquote><span class="attribution">ಮಾಚಿಮಾಡ ರವೀಂದ್ರ ಕಾಫಿ ಬೆಳೆಗಾರ </span></div>.<p><strong>8 ಕಿ.ಮೀ ರೈಲ್ವೆ ಬ್ಯಾರಿಕೇಡ್ ಅಳವಡಿಸಲು ಟೆಂಡರ್</strong> </p><p>ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಮಾತನಾಡಿದ ಎಸಿಎಫ್ ಗೋಪಾಲ್ ಬೇಗೂರು ‘ಚೀನಿವಾಡ ಪ್ರದೇಶಗಳು ಮಡಿಕೇರಿ ವನ್ಯಜೀವಿ ವಿಭಾಗಕ್ಕೆ ಒಳಪಡುತ್ತವೆ. ಈ ಭಾಗದಲ್ಲಿ ಕಾಡಾನೆಗಳನ್ನು ಕಾಡಿಗಟ್ಟುವ ಬಗ್ಗೆ ಕ್ರಮಕೈಗೊಳ್ಳಲಾಗಿದೆ. ಬ್ಯಾರಿಕೇಡ್ ಅಳವಡಿಸುವ ಅಧಿಕಾರ ವನ್ಯಜೀವಿ ವಿಭಾಗಕ್ಕೆ ಸೇರಿದೆ. ಇದರ ಬಗ್ಗೆ ಸಂಬಂಧಪಟ್ಟವರಿಗೆ ಮಾಹಿತಿ ನೀಡಲಾಗುವುದು ಎಂದು ಹೇಳಿದರು. ಸರ್ಕಾರ ಬಿಡುಗಡೆ ಮಾಡಿರುವ ₹21 ಕೋಟಿ ಅನುದಾನದಲ್ಲಿ ಮಾಲ್ದಾರೆ ವ್ಯಾಪ್ತಿಯ ಕಾವೇರಿ ನದಿ ತೀರದಿಂದ ಘಟ್ಟದಳ್ಳದವರೆಗೆ 8 ಕಿಲೋ ದೂರ ರೈಲ್ವೆ ಬ್ಯಾರಿಕೇಡ್ ಅಳವಡಿಸಲು ಟೆಂಡರ್ ಕರೆಯಲಾಗಿದೆ. ಬಿ.ಶೆಟ್ಟಿಗೇರಿ ಭಾಗದಲ್ಲಿ ಸೋಲಾರ್ ತಂತಿ ಅಳವಡಿಸುವ ಚಿಂತನೆ ಇದೆ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>