<p><strong>ಮಡಿಕೇರಿ:</strong> ಜಿಲ್ಲೆಯಲ್ಲಿ ಪುರುಷ ಮತದಾರರಿಗಿಂತ ಮಹಿಳಾ ಮತದಾರರ ಸಂಖ್ಯೆಯೇ ಹೆಚ್ಚಿದೆ. ಒಟ್ಟು ಮತದಾರರ ಸಂಖ್ಯೆಯಲ್ಲಿ 4,322 ಮಹಿಳಾ ಮತದಾರರ ಸಂಖ್ಯೆ ಪುರುಷರಿಗಿಂತ ಹೆಚ್ಚಿದ್ದರೆ, ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 3,500 ಹಾಗೂ ವಿರಾಜಪೇಟೆ ಕ್ಷೇತ್ರದಲ್ಲಿ 822 ಮಹಿಳಾ ಮತದಾರರ ಸಂಖ್ಯೆ ಹೆಚ್ಚಿದೆ.</p>.<p>ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಬುಧವಾರ ತಮ್ಮ ಕಚೇರಿಯಲ್ಲಿ ಬಿಡುಗಡೆ ಮಾಡಿದ ಕರಡು ಮತದಾರರ ಪಟ್ಟಿಯಲ್ಲಿ ಈ ಅಂಶ ಕಂಡು ಬಂತು.</p>.<p>ನಂತರ ಮಾತನಾಡಿದ ಅವರು, ‘ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಯನ್ನು ಚುನಾವಣಾ ಆಯೋಗದ ನಿರ್ದೇಶನ ದಂತೆ ಕೈಗೊಳ್ಳಲಾಗಿದೆ. ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ.ಡಿ. 8ರವರೆಗೆ ಆಕ್ಷೇಪಣೆ ಸಲ್ಲಿಸಬಹುದು’ ಎಂದು ಹೇಳಿದರು.</p>.<p>ಜನವರಿ, ಏಪ್ರಿಲ್, ಜುಲೈ ಮತ್ತು ಅಕ್ಟೋಬರ್ 1 ರಂದು 18 ವರ್ಷ ಪೂರ್ಣಗೊಳ್ಳುವ ಯುವ ಜನರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಹಾಗೂ 18 ವರ್ಷ ಮೇಲ್ಪಟ್ಟವರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದೆ ಇದ್ದಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಮೂನೆ-6 ರಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಮಾಹಿತಿ ನೀಡಿದರು.</p>.<p>ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗಿರುವ ಮತದಾರರು ಮೃತಪಟ್ಟಿದ್ದಲ್ಲಿ, ಸ್ಥಳಾಂತರಗೊಂಡಿದ್ದಲ್ಲಿ ಅಥವಾ ಪುನರಾವರ್ತನೆ ಆಗಿದ್ದಲ್ಲಿ ನಮೂನೆ 7 ರಲ್ಲಿ ಅರ್ಜಿ ಸಲ್ಲಿಸಬಹುದು. ವಿವಿಧ ಪಕ್ಷಗಳ ಪ್ರಮುಖರು ತಮ್ಮ ತಮ್ಮ ವಾರ್ಡ್ ಮತ್ತು ಗ್ರಾಮಗಳಲ್ಲಿ ಈ ಬಗ್ಗೆ ಗಮನಹರಿಸಬೇಕು ಮನವಿ ಮಾಡಿದರು.</p>.<p>ಮತದಾರರ ನಿವಾಸ ಬದಲಾವಣೆ, ಪ್ರಸ್ತುತ ಮತದಾರರ ಪಟ್ಟಿಯಲ್ಲಿ ನಮೂದುಗಳ ತಿದ್ದುಪಡಿಗಾಗಿ, ಬದಲಿ ಮತದಾರರ ಗುರುತಿನ ಚೀಟಿ ನೀಡುವುದು ಮತ್ತು ಅಂಗವಿಕಲರ ಗುರುತಿಸುವುದಕ್ಕೆ ನಮೂನೆ 8 ರಲ್ಲಿ ಅರ್ಜಿ ಸಲ್ಲಿಸಬಹುದು. ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಮೂನೆ 6 ರಲ್ಲಿ ಅರ್ಜಿ ಸಲ್ಲಿಸಬಹುದು ಎಂದರು.</p>.<p>ನ. 9ರಿಂದ ಡಿ. 8ರವರೆಗೆ ಆಯಾಯ ಮತಗಟ್ಟೆಯ ಬೂತ್ ಮಟ್ಟದ ಅಧಿಕಾರಿಗಳಿಗೆ ಮತ್ತು ಸಂಬಂಧಪಟ್ಟ ತಾಲ್ಲೂಕು ಕಚೇರಿಗಳಿಗೆ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದು. ಅಲ್ಲದೇ, ಮತದಾರರೇ https://www.nvsp.in ಮತ್ತು https://voterportal.eci.gov.in ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ ಮತ್ತು ‘ವಿಎಚ್ಎ’ ಮೊಬೈಲ್ ಆ್ಯಪ್ ಮೂಲಕ ನಮೂನೆ 6ಎ, ನಮೂನೆ 7 ಮತ್ತು ನಮೂನೆ 8 ನ್ನು ಸಲ್ಲಿಸಬಹುದು ಎಂದು ಹೇಳಿದರು.</p>.<p>ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಕಾರ್ಯದಲ್ಲಿ ಕೊಡಗು ಜಿಲ್ಲೆಯಲ್ಲಿ ಶೇ 75.43 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಅವರು ತಿಳಿಸಿದರು.</p>.<p>ಅಭಿಯಾನ ಸಂದರ್ಭದಲ್ಲಿ ಮನೆ ಮನೆಗೆ ಮತಗಟ್ಟೆ ಅಧಿಕಾರಿಗಳು ಭೇಟಿ ನೀಡಿದಾಗ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ಸ್ಥಳಾಂತರ, ತೆಗೆಯುವುದು ಮತ್ತಿತರ ಕಾರ್ಯಕ್ಕೆ ಸಹಕರಿಸುವಂತೆ ಅವರು ಕೋರಿದರು.</p>.<p>ಬಳಿಕ ನಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಕಾಂಗ್ರೆಸ್ ಮುಖಂಡ ತೆನ್ನಿರಾ ಮೈನಾ ಹಾಗೂ ಬಿಜೆಪಿಯ ಅಪ್ಪಣ್ಣ ಭಾಗವಹಿಸಿದ್ದರು.</p>.<p><strong>4 ಮತಗಟ್ಟೆ; ನೋಂದಣಿಯೇ ಇಲ್ಲ!</strong></p>.<p>‘ಕೊಡಗು ಜಿಲ್ಲೆಯ 4 ಮತಗಟ್ಟೆಯಲ್ಲಿ ಒಂದು ವರ್ಷಕ್ಕೂ ಹೆಚ್ಚು ಕಾಲದಿಂದ ಹೊಸದಾಗಿ ಒಬ್ಬರೂ ನೋಂದಣಿಯಾಗಿಲ್ಲ’ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದರು.</p>.<p>ವಿಶೇಷ ಅಭಿಯಾನ: ‘ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಸಂಬಂಧ ನ. 12, 20, ಡಿ. 3 ಮತ್ತು 4 ರಂದು ಜಿಲ್ಲೆಯ 542 ಮತಗಟ್ಟೆಗಳಲ್ಲಿ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ. 18 ವರ್ಷ ಮೇಲ್ಪಟ್ಟವರೆಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಕೋರಿದರು’</p>.<p>ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವ ಕುರಿತು ಖಾತರಿಪಡಿಸಿಕೊಳ್ಳಬೇಕು. ನೋಂದಣಿಯಾಗದೆ ಇದ್ದಲ್ಲಿ ನಮೂನೆ 6ರಲ್ಲಿ ಅರ್ಜಿಯನ್ನು ಸ್ಥಳದಲ್ಲಿಯೇ ನೀಡಬಹುದು. ಅಂತಿಮ ಮತದಾರರ ಪಟ್ಟಿಯನ್ನು ಜ. 5ರಂದು ಪ್ರಕಟಿಸಲಾಗುವುದು ಎಂದು ತಿಳಿಸಿದರು.</p>.<p><strong>ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ; ಜಾಗೃತಿ ಜಾಥಾ</strong></p>.<p>ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ಸ್ಥಳಾಂತರ, ಹೆಸರು ತೆಗೆಯುವುದು ಮತ್ತಿತರ ಸಂಬಂಧ ಇದೇ ನವೆಂಬರ್, 12, 20, ಡಿ.3 ಮತ್ತು 4 ರಂದು ಜಿಲ್ಲೆಯಲ್ಲಿನ 542 ಮತಗಟ್ಟೆಗಳಲ್ಲಿ ವಿಶೇಷ ನೋಂದಣಿ ಅಭಿಯಾನ ನಡೆಯುವ ಕುರಿತು ಜಾಗೃತಿ ಮೂಡಿಸಲು ಜಿಲ್ಲಾಡಳಿತದ ವತಿಯಿಂದ ಕಾಲ್ನಡಿಗೆ ಜಾಥವು ಬುಧವಾರ ನಡೆಯಿತು.</p>.<p>ನಗರದ ಗಾಂಧಿ ಮಂಟಪದಿಂದ ಮಂಗೇರಿರ ಮುತ್ತಣ್ಣ ವೃತ್ತ, ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತದ ಮೂಲಕ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದ ಮಾರ್ಗದಲ್ಲಿ ಜಾಥಾ ನಡೆಯಿತು.</p>.<p>ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ ಅವರ ನೇತೃತ್ವದಲ್ಲಿ ನಡೆದ ಜಾಥಾದಲ್ಲಿ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಜಿ.ಪಂ ಸಿಇಒ ಡಾ.ಎಸ್.ಆಕಾಶ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<p><strong>ಆನ್ಲೈನ್ನಲ್ಲಿ ನೋಂದಣಿ ಸಾಧ್ಯ</strong></p>.<p>https://www.nvsp.in</p>.<p>https://voterportal.eci.gov.in</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಜಿಲ್ಲೆಯಲ್ಲಿ ಪುರುಷ ಮತದಾರರಿಗಿಂತ ಮಹಿಳಾ ಮತದಾರರ ಸಂಖ್ಯೆಯೇ ಹೆಚ್ಚಿದೆ. ಒಟ್ಟು ಮತದಾರರ ಸಂಖ್ಯೆಯಲ್ಲಿ 4,322 ಮಹಿಳಾ ಮತದಾರರ ಸಂಖ್ಯೆ ಪುರುಷರಿಗಿಂತ ಹೆಚ್ಚಿದ್ದರೆ, ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 3,500 ಹಾಗೂ ವಿರಾಜಪೇಟೆ ಕ್ಷೇತ್ರದಲ್ಲಿ 822 ಮಹಿಳಾ ಮತದಾರರ ಸಂಖ್ಯೆ ಹೆಚ್ಚಿದೆ.</p>.<p>ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಬುಧವಾರ ತಮ್ಮ ಕಚೇರಿಯಲ್ಲಿ ಬಿಡುಗಡೆ ಮಾಡಿದ ಕರಡು ಮತದಾರರ ಪಟ್ಟಿಯಲ್ಲಿ ಈ ಅಂಶ ಕಂಡು ಬಂತು.</p>.<p>ನಂತರ ಮಾತನಾಡಿದ ಅವರು, ‘ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಯನ್ನು ಚುನಾವಣಾ ಆಯೋಗದ ನಿರ್ದೇಶನ ದಂತೆ ಕೈಗೊಳ್ಳಲಾಗಿದೆ. ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ.ಡಿ. 8ರವರೆಗೆ ಆಕ್ಷೇಪಣೆ ಸಲ್ಲಿಸಬಹುದು’ ಎಂದು ಹೇಳಿದರು.</p>.<p>ಜನವರಿ, ಏಪ್ರಿಲ್, ಜುಲೈ ಮತ್ತು ಅಕ್ಟೋಬರ್ 1 ರಂದು 18 ವರ್ಷ ಪೂರ್ಣಗೊಳ್ಳುವ ಯುವ ಜನರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಹಾಗೂ 18 ವರ್ಷ ಮೇಲ್ಪಟ್ಟವರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದೆ ಇದ್ದಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಮೂನೆ-6 ರಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಮಾಹಿತಿ ನೀಡಿದರು.</p>.<p>ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗಿರುವ ಮತದಾರರು ಮೃತಪಟ್ಟಿದ್ದಲ್ಲಿ, ಸ್ಥಳಾಂತರಗೊಂಡಿದ್ದಲ್ಲಿ ಅಥವಾ ಪುನರಾವರ್ತನೆ ಆಗಿದ್ದಲ್ಲಿ ನಮೂನೆ 7 ರಲ್ಲಿ ಅರ್ಜಿ ಸಲ್ಲಿಸಬಹುದು. ವಿವಿಧ ಪಕ್ಷಗಳ ಪ್ರಮುಖರು ತಮ್ಮ ತಮ್ಮ ವಾರ್ಡ್ ಮತ್ತು ಗ್ರಾಮಗಳಲ್ಲಿ ಈ ಬಗ್ಗೆ ಗಮನಹರಿಸಬೇಕು ಮನವಿ ಮಾಡಿದರು.</p>.<p>ಮತದಾರರ ನಿವಾಸ ಬದಲಾವಣೆ, ಪ್ರಸ್ತುತ ಮತದಾರರ ಪಟ್ಟಿಯಲ್ಲಿ ನಮೂದುಗಳ ತಿದ್ದುಪಡಿಗಾಗಿ, ಬದಲಿ ಮತದಾರರ ಗುರುತಿನ ಚೀಟಿ ನೀಡುವುದು ಮತ್ತು ಅಂಗವಿಕಲರ ಗುರುತಿಸುವುದಕ್ಕೆ ನಮೂನೆ 8 ರಲ್ಲಿ ಅರ್ಜಿ ಸಲ್ಲಿಸಬಹುದು. ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಮೂನೆ 6 ರಲ್ಲಿ ಅರ್ಜಿ ಸಲ್ಲಿಸಬಹುದು ಎಂದರು.</p>.<p>ನ. 9ರಿಂದ ಡಿ. 8ರವರೆಗೆ ಆಯಾಯ ಮತಗಟ್ಟೆಯ ಬೂತ್ ಮಟ್ಟದ ಅಧಿಕಾರಿಗಳಿಗೆ ಮತ್ತು ಸಂಬಂಧಪಟ್ಟ ತಾಲ್ಲೂಕು ಕಚೇರಿಗಳಿಗೆ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದು. ಅಲ್ಲದೇ, ಮತದಾರರೇ https://www.nvsp.in ಮತ್ತು https://voterportal.eci.gov.in ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ ಮತ್ತು ‘ವಿಎಚ್ಎ’ ಮೊಬೈಲ್ ಆ್ಯಪ್ ಮೂಲಕ ನಮೂನೆ 6ಎ, ನಮೂನೆ 7 ಮತ್ತು ನಮೂನೆ 8 ನ್ನು ಸಲ್ಲಿಸಬಹುದು ಎಂದು ಹೇಳಿದರು.</p>.<p>ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಕಾರ್ಯದಲ್ಲಿ ಕೊಡಗು ಜಿಲ್ಲೆಯಲ್ಲಿ ಶೇ 75.43 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಅವರು ತಿಳಿಸಿದರು.</p>.<p>ಅಭಿಯಾನ ಸಂದರ್ಭದಲ್ಲಿ ಮನೆ ಮನೆಗೆ ಮತಗಟ್ಟೆ ಅಧಿಕಾರಿಗಳು ಭೇಟಿ ನೀಡಿದಾಗ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ಸ್ಥಳಾಂತರ, ತೆಗೆಯುವುದು ಮತ್ತಿತರ ಕಾರ್ಯಕ್ಕೆ ಸಹಕರಿಸುವಂತೆ ಅವರು ಕೋರಿದರು.</p>.<p>ಬಳಿಕ ನಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಕಾಂಗ್ರೆಸ್ ಮುಖಂಡ ತೆನ್ನಿರಾ ಮೈನಾ ಹಾಗೂ ಬಿಜೆಪಿಯ ಅಪ್ಪಣ್ಣ ಭಾಗವಹಿಸಿದ್ದರು.</p>.<p><strong>4 ಮತಗಟ್ಟೆ; ನೋಂದಣಿಯೇ ಇಲ್ಲ!</strong></p>.<p>‘ಕೊಡಗು ಜಿಲ್ಲೆಯ 4 ಮತಗಟ್ಟೆಯಲ್ಲಿ ಒಂದು ವರ್ಷಕ್ಕೂ ಹೆಚ್ಚು ಕಾಲದಿಂದ ಹೊಸದಾಗಿ ಒಬ್ಬರೂ ನೋಂದಣಿಯಾಗಿಲ್ಲ’ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದರು.</p>.<p>ವಿಶೇಷ ಅಭಿಯಾನ: ‘ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಸಂಬಂಧ ನ. 12, 20, ಡಿ. 3 ಮತ್ತು 4 ರಂದು ಜಿಲ್ಲೆಯ 542 ಮತಗಟ್ಟೆಗಳಲ್ಲಿ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ. 18 ವರ್ಷ ಮೇಲ್ಪಟ್ಟವರೆಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಕೋರಿದರು’</p>.<p>ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವ ಕುರಿತು ಖಾತರಿಪಡಿಸಿಕೊಳ್ಳಬೇಕು. ನೋಂದಣಿಯಾಗದೆ ಇದ್ದಲ್ಲಿ ನಮೂನೆ 6ರಲ್ಲಿ ಅರ್ಜಿಯನ್ನು ಸ್ಥಳದಲ್ಲಿಯೇ ನೀಡಬಹುದು. ಅಂತಿಮ ಮತದಾರರ ಪಟ್ಟಿಯನ್ನು ಜ. 5ರಂದು ಪ್ರಕಟಿಸಲಾಗುವುದು ಎಂದು ತಿಳಿಸಿದರು.</p>.<p><strong>ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ; ಜಾಗೃತಿ ಜಾಥಾ</strong></p>.<p>ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ಸ್ಥಳಾಂತರ, ಹೆಸರು ತೆಗೆಯುವುದು ಮತ್ತಿತರ ಸಂಬಂಧ ಇದೇ ನವೆಂಬರ್, 12, 20, ಡಿ.3 ಮತ್ತು 4 ರಂದು ಜಿಲ್ಲೆಯಲ್ಲಿನ 542 ಮತಗಟ್ಟೆಗಳಲ್ಲಿ ವಿಶೇಷ ನೋಂದಣಿ ಅಭಿಯಾನ ನಡೆಯುವ ಕುರಿತು ಜಾಗೃತಿ ಮೂಡಿಸಲು ಜಿಲ್ಲಾಡಳಿತದ ವತಿಯಿಂದ ಕಾಲ್ನಡಿಗೆ ಜಾಥವು ಬುಧವಾರ ನಡೆಯಿತು.</p>.<p>ನಗರದ ಗಾಂಧಿ ಮಂಟಪದಿಂದ ಮಂಗೇರಿರ ಮುತ್ತಣ್ಣ ವೃತ್ತ, ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತದ ಮೂಲಕ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದ ಮಾರ್ಗದಲ್ಲಿ ಜಾಥಾ ನಡೆಯಿತು.</p>.<p>ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ ಅವರ ನೇತೃತ್ವದಲ್ಲಿ ನಡೆದ ಜಾಥಾದಲ್ಲಿ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಜಿ.ಪಂ ಸಿಇಒ ಡಾ.ಎಸ್.ಆಕಾಶ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<p><strong>ಆನ್ಲೈನ್ನಲ್ಲಿ ನೋಂದಣಿ ಸಾಧ್ಯ</strong></p>.<p>https://www.nvsp.in</p>.<p>https://voterportal.eci.gov.in</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>