ಕುಶಾಲನಗರ (ಕೊಡಗು ಜಿಲ್ಲೆ): ತಾಲ್ಲೂಕಿನ ಹೆಬ್ಬಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಡಾಂಚಿನ ಗ್ರಾಮ ಚಿನ್ನೇನಹಳ್ಳಿಯಲ್ಲಿ ಗುರುವಾರ ಕಾಡಾನೆ ದಾಳಿಗೆ ಸಿಲುಕಿ ವೆಂಕಟಮ್ಮ ಎಂಬುವವರು ತೀವ್ರವಾಗಿ ಗಾಯಗೊಂಡಿದ್ದಾರೆ.
ಇವರು ಬಹಿರ್ದೆಸೆಗೆ ಹೋದಾಗ ಕಾಡಾನೆ ದಾಳಿ ನಡೆಸಿದೆ. ತಕ್ಷಣವೇ ಅವರನ್ನು
ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.