<p><strong>ಮಡಿಕೇರಿ</strong>: ‘ರೈತರು, ನೌಕರರು, ಕಾರ್ಮಿಕರ ಮೇಲೆ ದಾಳಿ ನಡೆಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ನೀತಿಗಳ ವಿರುದ್ಧ ನಾವು ಒಂದಾಗದಿದ್ದರೆ ಉಳಿಗಾಲ ಇಲ್ಲ’ ಎಂದು ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ರಾಮಕೃಷ್ಣ ತಿಳಿಸಿದರು.</p>.<p>ಇಲ್ಲಿನ ಬಾಲಭವನದಲ್ಲಿ ಭಾನುವಾರ ನಡೆದ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಕೊಡಗು ಜಿಲ್ಲಾ ಸಮಿತಿಯ 5ನೇ ಹಕ್ಕೊತ್ತಾಯ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ನಾವೆಲ್ಲರೂ ನಾವು ಟೊಂಕ ಕಟ್ಟಲಿಲ್ಲ ಎಂದರೆ ಕಷ್ಟ. ಎಲ್ಲರೂ ಮೊದಲು ಉದಾರೀಕರಣ, ನವ ಉದಾರೀಕರಣ, ಖಾಸಗೀಕರಣ ಹಾಗೂ ಈಗ ಬರುತ್ತಿರುವ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಕುರಿತು ಅರಿವು ಪಡೆದುಕೊಳ್ಳಬೇಕು’ ಎಂದರು.</p>.<p>ಈಗ ‘ಎಐ’ ತಂತ್ರಜ್ಞಾನ ಉತ್ಪಾದನೆ ಮತ್ತು ಸೇವಾ ರಂಗಕ್ಕೆ ಬಂದಿದೆ. ಈ ರಂಗದಲ್ಲಿ ಉದ್ಯೋಗ ಕಡಿತ ಆಗುತ್ತಿದೆ. ಪರಿಸ್ಥಿತಿ ಹೀಗಾದರೆ ನಾವು ಎಲ್ಲಿ ಹೋಗಬೇಕು?’ ಎಂದು ಪ್ರಶ್ನಿಸಿದ ಅವರು, ‘ಹಾಗೆಂದು ನಾವು ತಂತ್ರಜ್ಞಾನ ವಿರೋಧಿಗಳಲ್ಲ. ತಂತ್ರಜ್ಞಾನ ನಮ್ಮ ಅನುಕೂಲಕ್ಕೆ ಬೇಕೇ ವಿನಹಾ ನಮ್ಮ ನಾಶಕ್ಕೆ ಅಲ್ಲ’ ಎಂದು ಪ್ರತಿಪಾದಿಸಿದರು.</p>.<p>‘ರಾಜ್ಯದಲ್ಲಿ 7.80 ಲಕ್ಷ ಹುದ್ದೆಗಳು, ಕೇಂದ್ರದಲ್ಲಿ 50 ಲಕ್ಷ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ತುಂಬಲಿಲ್ಲ, ಪ್ರಧಾನಿ ನರೇಂದ್ರ ಮೋದಿಯೂ ಭರ್ತಿ ಮಾಡಲಿಲ್ಲ. ಹಾಗಾದರೆ, ನಮ್ಮ ಮಕ್ಕಳಿಗೆ ಕೆಲಸ ಬೇಡವಾ?’ ಎಂದೂ ಪ್ರಶ್ನಿಸಿದರು.</p>.<p>ಎಲ್ಲರೂ ಪ್ರಜ್ಞಾಪೂರ್ವಕವಾಗಿ, ಸಂಘಟಿತರಾಗಿ ಹೋರಾಟಕ್ಕೆ ಧುಮುಕಬೇಕಿದೆ. ಆಗ ಮಾತ್ರ ನ್ಯಾಯ ಸಿಗಲು ಸಾಧ್ಯ ಎಂದರು.</p>.<p>ಸಂಘದ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಅವರು ಈಚೆಗೆ ನಿಧನರಾದ ಹೋರಾಟಗಾರರನ್ನು ಸ್ಮರಿಸಿ, ಶ್ರದ್ಧಾಂಜಲಿ ಅರ್ಪಿಸಿದರು.</p>.<p>ಸಂಘದ ಕುಶಾಲನಗರ ತಾಲ್ಲೂಕು ಘಟಕದ ಕಾರ್ಯದರ್ಶಿ ವಿಜಯ್, ಪೊನ್ನಂಪೇಟೆ ತಾಲ್ಲೂಕು ಘಟಕದ ಕಾರ್ಯದರ್ಶಿ ಮಧುಸೂದನ್, ತೋಟ ಕಾರ್ಮಿಕರ ಸಂಘದ ಜಿಲ್ಲಾ ಕಾರ್ಯದರ್ಶಿ ಎನ್.ಟಿ.ಕುಟ್ಟಪ್ಪ ಭಾಗವಹಿಸಿದ್ದರು.</p>.<p>ಇದೇ ವೇಳೆ ಪಂಚಾಯಿತಿ ನೌಕರರ ಸಂಘಟನೆಯ ಮುಂದಿನ 3 ವರ್ಷಕ್ಕೆ 9 ಜನರ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಪಿ.ಆರ್.ಭರತ್, ಕಾರ್ಯದರ್ಶಿಯಾಗಿ ಮಧುಸೂದನ್, ಖಜಾಂಚಿಯಾಗಿ ವಸಂತ್ಕುಮಾರ್, ಉಪಾಧ್ಯಕ್ಷರಾಗಿ ಮಹದೇವ್, ಸಜಿತಾ, ವಿಂಧ್ಯಾ, ರಂಗಸ್ವಾಮಿ, ಉಪಕಾರ್ಯದರ್ಶಿಯಾಗಿ ದಿಲೀಪ್ಕುಮಾರ್ ಆಯ್ಕೆಯಾದರು. </p>.<p> ಮುಂದಿನ 3 ವರ್ಷಗಳಿಗೆ ಪದಾಧಿಕಾರಿಗಳ ಆಯ್ಕೆ ರಾಜ್ಯಮಟ್ಟದ ಸಮಾವೇಶಕ್ಕೆ ಐವರ ಆಯ್ಕೆ ಜಿಲ್ಲೆಯ ವಿವಿಧ ಭಾಗದ ಪಂಚಾಯಿತಿ ನೌಕರರು ಭಾಗಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ‘ರೈತರು, ನೌಕರರು, ಕಾರ್ಮಿಕರ ಮೇಲೆ ದಾಳಿ ನಡೆಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ನೀತಿಗಳ ವಿರುದ್ಧ ನಾವು ಒಂದಾಗದಿದ್ದರೆ ಉಳಿಗಾಲ ಇಲ್ಲ’ ಎಂದು ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ರಾಮಕೃಷ್ಣ ತಿಳಿಸಿದರು.</p>.<p>ಇಲ್ಲಿನ ಬಾಲಭವನದಲ್ಲಿ ಭಾನುವಾರ ನಡೆದ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಕೊಡಗು ಜಿಲ್ಲಾ ಸಮಿತಿಯ 5ನೇ ಹಕ್ಕೊತ್ತಾಯ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ನಾವೆಲ್ಲರೂ ನಾವು ಟೊಂಕ ಕಟ್ಟಲಿಲ್ಲ ಎಂದರೆ ಕಷ್ಟ. ಎಲ್ಲರೂ ಮೊದಲು ಉದಾರೀಕರಣ, ನವ ಉದಾರೀಕರಣ, ಖಾಸಗೀಕರಣ ಹಾಗೂ ಈಗ ಬರುತ್ತಿರುವ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಕುರಿತು ಅರಿವು ಪಡೆದುಕೊಳ್ಳಬೇಕು’ ಎಂದರು.</p>.<p>ಈಗ ‘ಎಐ’ ತಂತ್ರಜ್ಞಾನ ಉತ್ಪಾದನೆ ಮತ್ತು ಸೇವಾ ರಂಗಕ್ಕೆ ಬಂದಿದೆ. ಈ ರಂಗದಲ್ಲಿ ಉದ್ಯೋಗ ಕಡಿತ ಆಗುತ್ತಿದೆ. ಪರಿಸ್ಥಿತಿ ಹೀಗಾದರೆ ನಾವು ಎಲ್ಲಿ ಹೋಗಬೇಕು?’ ಎಂದು ಪ್ರಶ್ನಿಸಿದ ಅವರು, ‘ಹಾಗೆಂದು ನಾವು ತಂತ್ರಜ್ಞಾನ ವಿರೋಧಿಗಳಲ್ಲ. ತಂತ್ರಜ್ಞಾನ ನಮ್ಮ ಅನುಕೂಲಕ್ಕೆ ಬೇಕೇ ವಿನಹಾ ನಮ್ಮ ನಾಶಕ್ಕೆ ಅಲ್ಲ’ ಎಂದು ಪ್ರತಿಪಾದಿಸಿದರು.</p>.<p>‘ರಾಜ್ಯದಲ್ಲಿ 7.80 ಲಕ್ಷ ಹುದ್ದೆಗಳು, ಕೇಂದ್ರದಲ್ಲಿ 50 ಲಕ್ಷ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ತುಂಬಲಿಲ್ಲ, ಪ್ರಧಾನಿ ನರೇಂದ್ರ ಮೋದಿಯೂ ಭರ್ತಿ ಮಾಡಲಿಲ್ಲ. ಹಾಗಾದರೆ, ನಮ್ಮ ಮಕ್ಕಳಿಗೆ ಕೆಲಸ ಬೇಡವಾ?’ ಎಂದೂ ಪ್ರಶ್ನಿಸಿದರು.</p>.<p>ಎಲ್ಲರೂ ಪ್ರಜ್ಞಾಪೂರ್ವಕವಾಗಿ, ಸಂಘಟಿತರಾಗಿ ಹೋರಾಟಕ್ಕೆ ಧುಮುಕಬೇಕಿದೆ. ಆಗ ಮಾತ್ರ ನ್ಯಾಯ ಸಿಗಲು ಸಾಧ್ಯ ಎಂದರು.</p>.<p>ಸಂಘದ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಅವರು ಈಚೆಗೆ ನಿಧನರಾದ ಹೋರಾಟಗಾರರನ್ನು ಸ್ಮರಿಸಿ, ಶ್ರದ್ಧಾಂಜಲಿ ಅರ್ಪಿಸಿದರು.</p>.<p>ಸಂಘದ ಕುಶಾಲನಗರ ತಾಲ್ಲೂಕು ಘಟಕದ ಕಾರ್ಯದರ್ಶಿ ವಿಜಯ್, ಪೊನ್ನಂಪೇಟೆ ತಾಲ್ಲೂಕು ಘಟಕದ ಕಾರ್ಯದರ್ಶಿ ಮಧುಸೂದನ್, ತೋಟ ಕಾರ್ಮಿಕರ ಸಂಘದ ಜಿಲ್ಲಾ ಕಾರ್ಯದರ್ಶಿ ಎನ್.ಟಿ.ಕುಟ್ಟಪ್ಪ ಭಾಗವಹಿಸಿದ್ದರು.</p>.<p>ಇದೇ ವೇಳೆ ಪಂಚಾಯಿತಿ ನೌಕರರ ಸಂಘಟನೆಯ ಮುಂದಿನ 3 ವರ್ಷಕ್ಕೆ 9 ಜನರ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಪಿ.ಆರ್.ಭರತ್, ಕಾರ್ಯದರ್ಶಿಯಾಗಿ ಮಧುಸೂದನ್, ಖಜಾಂಚಿಯಾಗಿ ವಸಂತ್ಕುಮಾರ್, ಉಪಾಧ್ಯಕ್ಷರಾಗಿ ಮಹದೇವ್, ಸಜಿತಾ, ವಿಂಧ್ಯಾ, ರಂಗಸ್ವಾಮಿ, ಉಪಕಾರ್ಯದರ್ಶಿಯಾಗಿ ದಿಲೀಪ್ಕುಮಾರ್ ಆಯ್ಕೆಯಾದರು. </p>.<p> ಮುಂದಿನ 3 ವರ್ಷಗಳಿಗೆ ಪದಾಧಿಕಾರಿಗಳ ಆಯ್ಕೆ ರಾಜ್ಯಮಟ್ಟದ ಸಮಾವೇಶಕ್ಕೆ ಐವರ ಆಯ್ಕೆ ಜಿಲ್ಲೆಯ ವಿವಿಧ ಭಾಗದ ಪಂಚಾಯಿತಿ ನೌಕರರು ಭಾಗಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>