<p>ಮಡಿಕೇರಿ: ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ’ (ಮನರೇಗಾ) ಕಾಯ್ದೆಯ ಬದಲಿಗೆ ಹೊಸದಾಗಿ ಜಾರಿಗೆ ತಂದಿರುವ ‘ವಿಕಸಿತ ಭಾರತ – ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ ಗ್ರಾಮೀಣ’ (ವಿಬಿ– ಜಿ ರಾಮ್ ಜಿ) ಕಾಯ್ದೆಯು ಕೊಡಗು ಜಿಲ್ಲೆಗೆ ಸಹಕಾರಿಯಾಗಿದೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.</p>.<p>ಕಾಂಗ್ರೆಸ್ ಈ ಕಾಯ್ದೆ ಕುರಿತು ಅಪಪ್ರಚಾರ ನಡೆಸುತ್ತಿದೆ. ಈ ಕಾಯ್ದೆ ಕುರಿತು ಅವರು ಹೇಳುತ್ತಿರುವುದೆಲ್ಲ ಸುಳ್ಳು ಎಂದು ಅವರು ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.</p>.<p>ಗ್ರಾಮ ಪಂಚಾಯಿತಿಗಳ ಅಧಿಕಾರ ಕಿತ್ತುಕೊಂಡಿದೆ ಎಂಬ ಆರೋಪ ಸತ್ಯಕ್ಕೆ ದೂರ. ಸ್ಥಳೀಯ ಅಗತ್ಯತೆಗೆ ತಕ್ಕಂತೆ ಯಾವುದೇ ಕಾಮಗಾರಿಗಳನ್ನು ಕೈಗೊಳ್ಳಲು ಗ್ರಾಮ ಪಂಚಾಯಿತಿಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ. ಈ ನಿಟ್ಟಿನಲ್ಲಿ ಪ್ರಾಕೃತಿಕ ವಿಕೋಪ ಎದುರಿಸುವಂತಹ ಕೊಡಗು ಜಿಲ್ಲೆಗೆ ಅದನ್ನು ತಡೆಯಲು ಬೇಕಾದ ತಡೆಗೋಡೆ ಮತ್ತಿತರ ಕಾಮಗಾರಿಗಳನ್ನು ಈ ಯೋಜನೆಯಡಿ ಕೈಗೊಳ್ಳಬಹುದು ಎಂದರು.</p>.<p>ಈ ಹಿಂದೆ ಇದ್ದ ನರೇಗಾ ಕಾಯ್ದೆಯಲ್ಲಿ ಸೋರಿಕೆ ಹೆಚ್ಚಾಗಿತ್ತು. ಮೇಲ್ವಿಚಾರಣೆ ಕಷ್ಟಸಾಧ್ಯವಾಗಿದ್ದು, ಉತ್ತರದಾಯಿತ್ವ ಯಾರಿಗೂ ಇರಲಿಲ್ಲ. ಆದರೆ, ಈ ಹೊಸ ಕಾಯ್ದೆಯಲ್ಲಿ ಇದಕ್ಕೆಲ್ಲ ಪರಿಹಾರ ಕಂಡುಕೊಳ್ಳಲಾಗಿದೆ ಎಂದು ಸಮರ್ಥಿಸಿಕೊಂಡರು.</p>.<p>ಕೃತಕ ಬುದ್ದಿಮೆತ್ತೆ, ಬಯೊಮೆಟ್ರಿಕ್ ಸೇರಿದಂತೆ ವಿನೂತನ ತಂತ್ರಜ್ಞಾನದ ಅಳವಡಿಕೆಯಿಂದ ಮೇಲ್ವಿಚಾರಣೆ ಮಾಡಬಹುದು, ಸೋರಿಕೆ ತಡೆಗಟ್ಟಬಹುದು. ರಾಜ್ಯಗಳ ಪಾಲು ಹೆಚ್ಚಿಸುವ ಮೂಲಕ ಅವರಿಗೂ ಉತ್ತರದಾಯಿತ್ವ ನೀಡಲಾಗಿದೆ. ಈ ಮೂಲಕ ಹಳೆಯ ಕಾಯ್ದೆಯಲ್ಲಿದ್ದ ಎಲ್ಲ ಬಗೆಯ ಲೋಪಗಳನ್ನು ತೆಗೆದು ಹಾಕಲಾಗಿದೆ ಎಂದರು.</p>.<p>ಕೆಲಸದ ದಿನಗಳನ್ನು 120ರಿಂದ 125ಕ್ಕೆ ಹೆಚ್ಚಿಸಲಾಗಿದೆ. ಗ್ರಾಮೀಣ ಜನರ ಬದುಕನ್ನು ಸುಧಾರಿಸಲು ಇದೊಂದು ಲಾಭದಾಯಕ ಕಾಯ್ದೆ. ಜನರು ಕಾಂಗ್ರೆಸ್ನ ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ಮನವಿ ಮಾಡಿದರು.</p>.<p>ಕಾಯ್ದೆಯಿಂದ ಮಹಾತ್ಮ ಗಾಂಧೀಜಿ ಅವರ ಹೆಸರನ್ನು ತೆಗೆದು ಹಾಕಿರುವ ಕುರಿತು ಪ್ರತಿಕ್ರಿಯಿಸಿದ ಅವರು, ‘ನಮಗೆ ಗಾಂಧೀಜಿ ಅವರೇ ಆದರ್ಶ. ಅವರ ತತ್ವ, ಸಿದ್ಧಾಂತಗಳನ್ವಯವೇ ಈ ಕಾಯ್ದೆಯನ್ನು ರೂಪಿಸಲಾಗಿದೆ. ಮಾತ್ರವಲ್ಲ, ಆಡಳಿತವನ್ನೂ ನಡೆಸುತ್ತಿದ್ದೇವೆ. ಕಾಂಗ್ರೆಸ್ನವರಿಗೆ ಹೆಸರು ಮಾತ್ರ ಮುಖ್ಯವೇ ಹೊರತು ಗಾಂಧೀಜಿ ಅವರ ತತ್ವವಲ್ಲ’ ಎಂದು ತಿರುಗೇಟು ನೀಡಿದರು.</p>.<p>ರಾಜ್ಯದ ಪಾಲನ್ನು ಹೆಚ್ಚಿಸುವಾಗ ರಾಜ್ಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಏಕಪಕ್ಷೀಯವಾದ ಸರ್ವಾಧಿಕಾರಿ ಧೋರಣೆ ತಳೆಯಲಾಗಿದೆ ಎಂಬ ಆರೋಪ ಕುರಿತು ಪ್ರತಿಕ್ರಿಯಿಸಿದ ಅವರು, ‘ಇದು ಸಹ ಸುಳ್ಳು ಆರೋಪ. ಈ ಕಾಯ್ದೆ ರೂಪಿಸುವುದಕ್ಕೂ ಮುನ್ನ ಎಲ್ಲ ರಾಜ್ಯದವರೊಂದಿಗೂ ಆಡಳಿತಾತ್ಮಕವಾಗಿ ಚರ್ಚೆ ನಡೆಸಲಾಗಿತ್ತು’ ಎಂದರು.</p>.<p>ವಿಮಾನ ದುರಂತ ಕುರಿತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಚುನಾವಣಾ ದೃಷ್ಟಿಯಿಂದ ಹೇಳಿಕೆ ನೀಡಿದ್ದಾರೆ. ಯಾವುದೇ ದುರಂತ ನಡೆದರೂ ತನಿಖೆ ನಡೆಸಲಾಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p>ಬಿಜೆಪಿ ಮುಖಂಡರಾದ ಮಹೇಶ್ ಜೈನಿ, ಅರುಣ್ಕುಮಾರ್, ಉಮೇಶ್ ಸುಬ್ರಮಣಿ ಭಾಗವಹಿಸಿದ್ದರು.</p>. <p> <strong>‘ಹಳ್ಳಿಗಳಲ್ಲಿ ಜಾಗೃತಿ ಕಾರ್ಯಕ್ರಮ’</strong> </p><p>ಬಿಜೆಪಿ ಕೃಷಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಡಾ.ಬಿ.ಸಿ.ನವೀನ್ಕುಮಾರ್ ಮಾತನಾಡಿ ‘ವಿಕಸಿತ ಭಾರತ – ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ ಗ್ರಾಮೀಣ’ (ವಿಬಿ– ಜಿ ರಾಮ್ ಜಿ) ಕಾಯ್ದೆಯ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿದೆ. ಇದಕ್ಕೆ ಪ್ರತಿಯಾಗಿ ಕಾಯ್ದೆಯಲ್ಲಿರುವ ಅಂಶಗಳನ್ನು ಕುರಿತು ಜನರಿಗೆ ಮನವರಿಕೆ ಮಾಡಲು ಬಿಜೆಪಿ ನಿರ್ಧರಿಸಿದೆ. ರಾಜ್ಯದ 7 ಸಾವಿರ ಹಳ್ಳಿಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು’ ಎಂದರು.</p>.<p><strong>‘ಕಾಯ್ದೆ ಪರವಾಗಿ ಗ್ರಾಮಸಭೆಗಳಲ್ಲಿ ನಿರ್ಣಯ’</strong> </p><p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರವಿ ಕಾಳಪ್ಪ ಮಾತನಾಡಿ ‘ಕೊಡಗಿನ ಬಹುತೇಕ ಗ್ರಾಮ ಪಂಚಾಯಿತಿಗಳ ಗ್ರಾಮಸಭೆಗಳಲ್ಲಿ ‘ವಿಕಸಿತ ಭಾರತ – ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ ಗ್ರಾಮೀಣ’ (ವಿಬಿ– ಜಿ ರಾಮ್ ಜಿ) ಕಾಯ್ದೆಯ ಪರವಾಗಿ ನಿರ್ಣಯ ಕೈಗೊಳ್ಳಲಾಗಿದೆ’ ಎಂದು ಹೇಳಿದರು. ‘ನಾಪೋಕ್ಲುವಿನ ಶಾಲೆಗೆ ಸೇರಿದ ಜಾಗದಲ್ಲಿ ಶಾದಿಮಹಲ್ ನಿರ್ಮಿಸುತ್ತಿರುವುದರ ವಿರುದ್ಧ ಬಿಜೆಪಿ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿತ್ತು. ಆ ಬಳಿಕ ಕಾಮಗಾರಿ ಸ್ಥಗಿತಗೊಳಿಸಿ ಸರ್ವೆ ಮಾಡಲು ಹೇಳಲಾಗಿದೆ. ಸರ್ವೆ ನಡೆಸಿ ಆ ಜಾಗ ಶಾಲೆಗೆ ಸಂಬಂಧಿಸಿಲ್ಲ ಎಂದು ದೃಢವಾದರೆ ಶಾದಿಮಹಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಒಂದು ವೇಳೆ ಆ ಜಾಗ ಶಾಲೆಗೆ ಸೇರಿದ್ದಾದರೇ ಅದನ್ನು ಶೈಕ್ಷಣಿಕ ಉದ್ದೇಶಕ್ಕೆ ಮಾತ್ರವೇ ಬಳಕೆ ಮಾಡಿಕೊಳ್ಳಬೇಕು’ ಎಂದರು.</p>.<p>‘<strong>ರೈಲು ಯೋಜನೆ ಸ್ಥಗಿತವೆ ಹೊರತು ರದ್ದಾಗಿಲ್ಲ’</strong> </p><p>‘ಕುಶಾಲನಗರಕ್ಕೆ ರೈಲು ಸಂಪರ್ಕ ಒದಗಿಸುವ ಯೋಜನೆ ಸ್ಥಗಿತವಾಗಿದೆಯಷ್ಟೇ ಹೊರತು ರದ್ದಾಗಿಲ್ಲ’ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು. ಭೂಸ್ವಾಧೀನ ಸಾಧ್ಯವಿಲ್ಲ ಎಂದು ರಾಜ್ಯಸರ್ಕಾರ ಪತ್ರ ಬರೆದಿತ್ತು. ಅದರ ಆಧಾರದ ಮೇಲೆ ರೈಲ್ವೆ ಇಲಾಖೆ ಈ ಯೋಜನೆಯನ್ನು ಸ್ಥಗಿತಗೊಳಿಸಿದೆ. ತನ್ನ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಈಗಾಗಲೇ ಮನವಿ ಸಲ್ಲಿಸಲಾಗಿದೆ. ಒಂದು ವೇಳೆ ರಾಜ್ಯ ಸರ್ಕಾರ ಸಹಕಾರ ನೀಡಿದರೆ ನಿಶ್ಚಿತವಾಗಿಯೂ ಯೋಜನೆ ಕಾರ್ಯರೂಪಕ್ಕೆ ಬರಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ’ (ಮನರೇಗಾ) ಕಾಯ್ದೆಯ ಬದಲಿಗೆ ಹೊಸದಾಗಿ ಜಾರಿಗೆ ತಂದಿರುವ ‘ವಿಕಸಿತ ಭಾರತ – ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ ಗ್ರಾಮೀಣ’ (ವಿಬಿ– ಜಿ ರಾಮ್ ಜಿ) ಕಾಯ್ದೆಯು ಕೊಡಗು ಜಿಲ್ಲೆಗೆ ಸಹಕಾರಿಯಾಗಿದೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.</p>.<p>ಕಾಂಗ್ರೆಸ್ ಈ ಕಾಯ್ದೆ ಕುರಿತು ಅಪಪ್ರಚಾರ ನಡೆಸುತ್ತಿದೆ. ಈ ಕಾಯ್ದೆ ಕುರಿತು ಅವರು ಹೇಳುತ್ತಿರುವುದೆಲ್ಲ ಸುಳ್ಳು ಎಂದು ಅವರು ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.</p>.<p>ಗ್ರಾಮ ಪಂಚಾಯಿತಿಗಳ ಅಧಿಕಾರ ಕಿತ್ತುಕೊಂಡಿದೆ ಎಂಬ ಆರೋಪ ಸತ್ಯಕ್ಕೆ ದೂರ. ಸ್ಥಳೀಯ ಅಗತ್ಯತೆಗೆ ತಕ್ಕಂತೆ ಯಾವುದೇ ಕಾಮಗಾರಿಗಳನ್ನು ಕೈಗೊಳ್ಳಲು ಗ್ರಾಮ ಪಂಚಾಯಿತಿಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ. ಈ ನಿಟ್ಟಿನಲ್ಲಿ ಪ್ರಾಕೃತಿಕ ವಿಕೋಪ ಎದುರಿಸುವಂತಹ ಕೊಡಗು ಜಿಲ್ಲೆಗೆ ಅದನ್ನು ತಡೆಯಲು ಬೇಕಾದ ತಡೆಗೋಡೆ ಮತ್ತಿತರ ಕಾಮಗಾರಿಗಳನ್ನು ಈ ಯೋಜನೆಯಡಿ ಕೈಗೊಳ್ಳಬಹುದು ಎಂದರು.</p>.<p>ಈ ಹಿಂದೆ ಇದ್ದ ನರೇಗಾ ಕಾಯ್ದೆಯಲ್ಲಿ ಸೋರಿಕೆ ಹೆಚ್ಚಾಗಿತ್ತು. ಮೇಲ್ವಿಚಾರಣೆ ಕಷ್ಟಸಾಧ್ಯವಾಗಿದ್ದು, ಉತ್ತರದಾಯಿತ್ವ ಯಾರಿಗೂ ಇರಲಿಲ್ಲ. ಆದರೆ, ಈ ಹೊಸ ಕಾಯ್ದೆಯಲ್ಲಿ ಇದಕ್ಕೆಲ್ಲ ಪರಿಹಾರ ಕಂಡುಕೊಳ್ಳಲಾಗಿದೆ ಎಂದು ಸಮರ್ಥಿಸಿಕೊಂಡರು.</p>.<p>ಕೃತಕ ಬುದ್ದಿಮೆತ್ತೆ, ಬಯೊಮೆಟ್ರಿಕ್ ಸೇರಿದಂತೆ ವಿನೂತನ ತಂತ್ರಜ್ಞಾನದ ಅಳವಡಿಕೆಯಿಂದ ಮೇಲ್ವಿಚಾರಣೆ ಮಾಡಬಹುದು, ಸೋರಿಕೆ ತಡೆಗಟ್ಟಬಹುದು. ರಾಜ್ಯಗಳ ಪಾಲು ಹೆಚ್ಚಿಸುವ ಮೂಲಕ ಅವರಿಗೂ ಉತ್ತರದಾಯಿತ್ವ ನೀಡಲಾಗಿದೆ. ಈ ಮೂಲಕ ಹಳೆಯ ಕಾಯ್ದೆಯಲ್ಲಿದ್ದ ಎಲ್ಲ ಬಗೆಯ ಲೋಪಗಳನ್ನು ತೆಗೆದು ಹಾಕಲಾಗಿದೆ ಎಂದರು.</p>.<p>ಕೆಲಸದ ದಿನಗಳನ್ನು 120ರಿಂದ 125ಕ್ಕೆ ಹೆಚ್ಚಿಸಲಾಗಿದೆ. ಗ್ರಾಮೀಣ ಜನರ ಬದುಕನ್ನು ಸುಧಾರಿಸಲು ಇದೊಂದು ಲಾಭದಾಯಕ ಕಾಯ್ದೆ. ಜನರು ಕಾಂಗ್ರೆಸ್ನ ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ಮನವಿ ಮಾಡಿದರು.</p>.<p>ಕಾಯ್ದೆಯಿಂದ ಮಹಾತ್ಮ ಗಾಂಧೀಜಿ ಅವರ ಹೆಸರನ್ನು ತೆಗೆದು ಹಾಕಿರುವ ಕುರಿತು ಪ್ರತಿಕ್ರಿಯಿಸಿದ ಅವರು, ‘ನಮಗೆ ಗಾಂಧೀಜಿ ಅವರೇ ಆದರ್ಶ. ಅವರ ತತ್ವ, ಸಿದ್ಧಾಂತಗಳನ್ವಯವೇ ಈ ಕಾಯ್ದೆಯನ್ನು ರೂಪಿಸಲಾಗಿದೆ. ಮಾತ್ರವಲ್ಲ, ಆಡಳಿತವನ್ನೂ ನಡೆಸುತ್ತಿದ್ದೇವೆ. ಕಾಂಗ್ರೆಸ್ನವರಿಗೆ ಹೆಸರು ಮಾತ್ರ ಮುಖ್ಯವೇ ಹೊರತು ಗಾಂಧೀಜಿ ಅವರ ತತ್ವವಲ್ಲ’ ಎಂದು ತಿರುಗೇಟು ನೀಡಿದರು.</p>.<p>ರಾಜ್ಯದ ಪಾಲನ್ನು ಹೆಚ್ಚಿಸುವಾಗ ರಾಜ್ಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಏಕಪಕ್ಷೀಯವಾದ ಸರ್ವಾಧಿಕಾರಿ ಧೋರಣೆ ತಳೆಯಲಾಗಿದೆ ಎಂಬ ಆರೋಪ ಕುರಿತು ಪ್ರತಿಕ್ರಿಯಿಸಿದ ಅವರು, ‘ಇದು ಸಹ ಸುಳ್ಳು ಆರೋಪ. ಈ ಕಾಯ್ದೆ ರೂಪಿಸುವುದಕ್ಕೂ ಮುನ್ನ ಎಲ್ಲ ರಾಜ್ಯದವರೊಂದಿಗೂ ಆಡಳಿತಾತ್ಮಕವಾಗಿ ಚರ್ಚೆ ನಡೆಸಲಾಗಿತ್ತು’ ಎಂದರು.</p>.<p>ವಿಮಾನ ದುರಂತ ಕುರಿತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಚುನಾವಣಾ ದೃಷ್ಟಿಯಿಂದ ಹೇಳಿಕೆ ನೀಡಿದ್ದಾರೆ. ಯಾವುದೇ ದುರಂತ ನಡೆದರೂ ತನಿಖೆ ನಡೆಸಲಾಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p>ಬಿಜೆಪಿ ಮುಖಂಡರಾದ ಮಹೇಶ್ ಜೈನಿ, ಅರುಣ್ಕುಮಾರ್, ಉಮೇಶ್ ಸುಬ್ರಮಣಿ ಭಾಗವಹಿಸಿದ್ದರು.</p>. <p> <strong>‘ಹಳ್ಳಿಗಳಲ್ಲಿ ಜಾಗೃತಿ ಕಾರ್ಯಕ್ರಮ’</strong> </p><p>ಬಿಜೆಪಿ ಕೃಷಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಡಾ.ಬಿ.ಸಿ.ನವೀನ್ಕುಮಾರ್ ಮಾತನಾಡಿ ‘ವಿಕಸಿತ ಭಾರತ – ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ ಗ್ರಾಮೀಣ’ (ವಿಬಿ– ಜಿ ರಾಮ್ ಜಿ) ಕಾಯ್ದೆಯ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿದೆ. ಇದಕ್ಕೆ ಪ್ರತಿಯಾಗಿ ಕಾಯ್ದೆಯಲ್ಲಿರುವ ಅಂಶಗಳನ್ನು ಕುರಿತು ಜನರಿಗೆ ಮನವರಿಕೆ ಮಾಡಲು ಬಿಜೆಪಿ ನಿರ್ಧರಿಸಿದೆ. ರಾಜ್ಯದ 7 ಸಾವಿರ ಹಳ್ಳಿಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು’ ಎಂದರು.</p>.<p><strong>‘ಕಾಯ್ದೆ ಪರವಾಗಿ ಗ್ರಾಮಸಭೆಗಳಲ್ಲಿ ನಿರ್ಣಯ’</strong> </p><p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರವಿ ಕಾಳಪ್ಪ ಮಾತನಾಡಿ ‘ಕೊಡಗಿನ ಬಹುತೇಕ ಗ್ರಾಮ ಪಂಚಾಯಿತಿಗಳ ಗ್ರಾಮಸಭೆಗಳಲ್ಲಿ ‘ವಿಕಸಿತ ಭಾರತ – ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ ಗ್ರಾಮೀಣ’ (ವಿಬಿ– ಜಿ ರಾಮ್ ಜಿ) ಕಾಯ್ದೆಯ ಪರವಾಗಿ ನಿರ್ಣಯ ಕೈಗೊಳ್ಳಲಾಗಿದೆ’ ಎಂದು ಹೇಳಿದರು. ‘ನಾಪೋಕ್ಲುವಿನ ಶಾಲೆಗೆ ಸೇರಿದ ಜಾಗದಲ್ಲಿ ಶಾದಿಮಹಲ್ ನಿರ್ಮಿಸುತ್ತಿರುವುದರ ವಿರುದ್ಧ ಬಿಜೆಪಿ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿತ್ತು. ಆ ಬಳಿಕ ಕಾಮಗಾರಿ ಸ್ಥಗಿತಗೊಳಿಸಿ ಸರ್ವೆ ಮಾಡಲು ಹೇಳಲಾಗಿದೆ. ಸರ್ವೆ ನಡೆಸಿ ಆ ಜಾಗ ಶಾಲೆಗೆ ಸಂಬಂಧಿಸಿಲ್ಲ ಎಂದು ದೃಢವಾದರೆ ಶಾದಿಮಹಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಒಂದು ವೇಳೆ ಆ ಜಾಗ ಶಾಲೆಗೆ ಸೇರಿದ್ದಾದರೇ ಅದನ್ನು ಶೈಕ್ಷಣಿಕ ಉದ್ದೇಶಕ್ಕೆ ಮಾತ್ರವೇ ಬಳಕೆ ಮಾಡಿಕೊಳ್ಳಬೇಕು’ ಎಂದರು.</p>.<p>‘<strong>ರೈಲು ಯೋಜನೆ ಸ್ಥಗಿತವೆ ಹೊರತು ರದ್ದಾಗಿಲ್ಲ’</strong> </p><p>‘ಕುಶಾಲನಗರಕ್ಕೆ ರೈಲು ಸಂಪರ್ಕ ಒದಗಿಸುವ ಯೋಜನೆ ಸ್ಥಗಿತವಾಗಿದೆಯಷ್ಟೇ ಹೊರತು ರದ್ದಾಗಿಲ್ಲ’ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು. ಭೂಸ್ವಾಧೀನ ಸಾಧ್ಯವಿಲ್ಲ ಎಂದು ರಾಜ್ಯಸರ್ಕಾರ ಪತ್ರ ಬರೆದಿತ್ತು. ಅದರ ಆಧಾರದ ಮೇಲೆ ರೈಲ್ವೆ ಇಲಾಖೆ ಈ ಯೋಜನೆಯನ್ನು ಸ್ಥಗಿತಗೊಳಿಸಿದೆ. ತನ್ನ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಈಗಾಗಲೇ ಮನವಿ ಸಲ್ಲಿಸಲಾಗಿದೆ. ಒಂದು ವೇಳೆ ರಾಜ್ಯ ಸರ್ಕಾರ ಸಹಕಾರ ನೀಡಿದರೆ ನಿಶ್ಚಿತವಾಗಿಯೂ ಯೋಜನೆ ಕಾರ್ಯರೂಪಕ್ಕೆ ಬರಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>