<p><strong>ಮಡಿಕೇರಿ:</strong> ಮೈಸೂರಿನ ಕೆ.ಆರ್.ಎಸ್. ರಸ್ತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಡುವ ವಿಚಾರಕ್ಕೆ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಆಕ್ಷೇಪ ವ್ಯಕ್ತಪಡಿಸಿದ್ದು, ‘ಈ ವಿಷಯ ದುಃಖ ತರಿಸಿದೆ. ಹಿಂದಿನ ಅರಸರ ಕಾಲದಿಂದಲೂ ಇರುವ ಕೆ.ಆರ್.ಎಸ್. ರಸ್ತೆ ಎನ್ನುವುದನ್ನೇ ಮುಂದುವರಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಮೈಸೂರು ಅರಸರಿಂದಲೇ ಮೈಸೂರು ಸಂಸ್ಥಾನ ಅಭಿವೃದ್ಧಿ ಆಗಿದೆ. ಹಿಂದಿನ ಇತಿಹಾಸವನ್ನು ನಾವೆಲ್ಲಾ ಸ್ಮರಣೆ ಮಾಡಬೇಕಿದೆ. ಮೈಸೂರಿನಲ್ಲಿ ಬೇಕಾದಷ್ಟು ರಸ್ತೆಗಳಿವೆ. ಅವುಗಳಿಗೆ ಬೇಕಾದ ಹೆಸರು ಇಡಲಿ’ ಎಂದು ಇಲ್ಲಿ ಭಾನುವಾರ ಸುದ್ದಿಗಾರರ ಪ್ರಶ್ನಗಳಿಗೆ ಪ್ರತಿಕ್ರಿಯಿಸಿದರು.</p>.<p>ಮಾಜಿ ಸಂಸದ ಪ್ರತಾಪ ಸಿಂಹ ಸಹಮತ ವ್ಯಕ್ತಪಡಿಸಿರುವ ಕುರಿತ ಪ್ರಶ್ನೆಗೆ, ‘ವೈಯಕ್ತಿಕ ಅಭಿಪ್ರಾಯ ವ್ಯಕ್ತಪಡಿಸಲು ಎಲ್ಲರಿಗೂ ಹಕ್ಕಿದೆ. ಸಿದ್ದರಾಮಯ್ಯ ಅವರ ಕೆಲಸವನ್ನು ಪ್ರತಾಪ ಸಿಂಹ ಮೆಚ್ಚಿರಬಹುದು’ ಎಂದರು.</p>.<p>ಲಕ್ಷ್ಮೀ ಹೆಬ್ಬಾಳಕರ ಕುರಿತು ಸಿ.ಟಿ.ರವಿ ಮಾತನಾಡಿದ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ‘ಯಾರು ಏನು ಹೇಳಿದರು ಎಂಬುದನ್ನು ಸಭಾಪತಿ ತೀರ್ಮಾನಿಸಬೇಕು. ಆದರೆ ಆ ರೀತಿಯ ಪದಬಳಕೆ ಆಗಿಲ್ಲ ಎಂದು ಸಭಾಪತಿ ಹೇಳಿದ್ದಾರೆ. ಕಾನೂನು ಮೀರಿ ರವಿ ಅವರನ್ನು ಬಂಧಿಲಾಗಿತ್ತು. ಕಾನೂನು ಕೈಗೆತ್ತಿಕೊಂಡಿದ್ದನ್ನು ಖಂಡಿಸಲಾಗುತ್ತಿದೆ. ರಾಜ್ಯ ಸರ್ಕಾರದ ಪ್ರಭಾವ ಇಲ್ಲದ ಸಂಸ್ಥೆಯಿಂದ ತನಿಖೆ ಮಾಡಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಮೈಸೂರಿನ ಕೆ.ಆರ್.ಎಸ್. ರಸ್ತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಡುವ ವಿಚಾರಕ್ಕೆ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಆಕ್ಷೇಪ ವ್ಯಕ್ತಪಡಿಸಿದ್ದು, ‘ಈ ವಿಷಯ ದುಃಖ ತರಿಸಿದೆ. ಹಿಂದಿನ ಅರಸರ ಕಾಲದಿಂದಲೂ ಇರುವ ಕೆ.ಆರ್.ಎಸ್. ರಸ್ತೆ ಎನ್ನುವುದನ್ನೇ ಮುಂದುವರಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಮೈಸೂರು ಅರಸರಿಂದಲೇ ಮೈಸೂರು ಸಂಸ್ಥಾನ ಅಭಿವೃದ್ಧಿ ಆಗಿದೆ. ಹಿಂದಿನ ಇತಿಹಾಸವನ್ನು ನಾವೆಲ್ಲಾ ಸ್ಮರಣೆ ಮಾಡಬೇಕಿದೆ. ಮೈಸೂರಿನಲ್ಲಿ ಬೇಕಾದಷ್ಟು ರಸ್ತೆಗಳಿವೆ. ಅವುಗಳಿಗೆ ಬೇಕಾದ ಹೆಸರು ಇಡಲಿ’ ಎಂದು ಇಲ್ಲಿ ಭಾನುವಾರ ಸುದ್ದಿಗಾರರ ಪ್ರಶ್ನಗಳಿಗೆ ಪ್ರತಿಕ್ರಿಯಿಸಿದರು.</p>.<p>ಮಾಜಿ ಸಂಸದ ಪ್ರತಾಪ ಸಿಂಹ ಸಹಮತ ವ್ಯಕ್ತಪಡಿಸಿರುವ ಕುರಿತ ಪ್ರಶ್ನೆಗೆ, ‘ವೈಯಕ್ತಿಕ ಅಭಿಪ್ರಾಯ ವ್ಯಕ್ತಪಡಿಸಲು ಎಲ್ಲರಿಗೂ ಹಕ್ಕಿದೆ. ಸಿದ್ದರಾಮಯ್ಯ ಅವರ ಕೆಲಸವನ್ನು ಪ್ರತಾಪ ಸಿಂಹ ಮೆಚ್ಚಿರಬಹುದು’ ಎಂದರು.</p>.<p>ಲಕ್ಷ್ಮೀ ಹೆಬ್ಬಾಳಕರ ಕುರಿತು ಸಿ.ಟಿ.ರವಿ ಮಾತನಾಡಿದ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ‘ಯಾರು ಏನು ಹೇಳಿದರು ಎಂಬುದನ್ನು ಸಭಾಪತಿ ತೀರ್ಮಾನಿಸಬೇಕು. ಆದರೆ ಆ ರೀತಿಯ ಪದಬಳಕೆ ಆಗಿಲ್ಲ ಎಂದು ಸಭಾಪತಿ ಹೇಳಿದ್ದಾರೆ. ಕಾನೂನು ಮೀರಿ ರವಿ ಅವರನ್ನು ಬಂಧಿಲಾಗಿತ್ತು. ಕಾನೂನು ಕೈಗೆತ್ತಿಕೊಂಡಿದ್ದನ್ನು ಖಂಡಿಸಲಾಗುತ್ತಿದೆ. ರಾಜ್ಯ ಸರ್ಕಾರದ ಪ್ರಭಾವ ಇಲ್ಲದ ಸಂಸ್ಥೆಯಿಂದ ತನಿಖೆ ಮಾಡಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>