ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಮಾಣವಚನ ಕಾರ್ಯಕ್ರಮಕ್ಕೆ ಗೈರು: ಅಸಮಾಧಾ‌ನ ಇಲ್ಲ ಎಂದ ಶ್ರೀರಾಮುಲು

Last Updated 6 ಫೆಬ್ರುವರಿ 2020, 7:26 IST
ಅಕ್ಷರ ಗಾತ್ರ

ಮಡಿಕೇರಿ: ಸಂಪುಟ ವಿಸ್ತರಣೆ ಕಾರ್ಯಕ್ರಮಕ್ಕೆ ಗೈರಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಡಿಕೇರಿಯಲ್ಲಿ ಹೇಳಿಕೆ ನೀಡಿರುವ ಸಚಿವ ಶ್ರೀರಾಮುಲು ಅವರು, ‘ನನ್ನ ಮನೆಯಲ್ಲಿ ಮಗಳ ಮದುವೆ ಕಾರ್ಯಕ್ರಮವಿದೆ. ಅದರ ತಯಾರಿಯಲ್ಲಿ ನಾನು ಇದ್ದೇನೆ. ಹೀಗಾಗಿ ನಾನು ಬೆಂಗಳೂರಿಗೆ ಹೋಗಲು ಸಾಧ್ಯವಾಗಿಲ್ಲ’ಎಂದು ಸ್ಪಷ್ಟನೆ ನೀಡಿದರು.

‘ಸಂಪುಟ ವಿಸ್ತರಣೆಯನ್ನು ನಮ್ಮ ನಾಯಕರು ಸಮರ್ಥವಾಗಿ ನಿಭಾಯಿಸಲಿದ್ದಾರೆ. ನನಗೆ ಯಾವುದೇ ಅಸಮಾಧಾನವಿಲ್ಲ. ಮೂಲ ಬಿಜೆಪಿಗರು ಹಾಗೂ ವಲಸಿಗರು ಅನ್ನುವ ವ್ಯತ್ಯಾಸ ಇಲ್ಲ’ ಎಂದ ಅವರುಉಪಮುಖ್ಯಮಂತ್ರಿ ಸ್ಥಾನ ಸಿಗದ ವಿಚಾರಕ್ಕೆ ಸಂಬಂಧಿಸಿದ ಪ್ರಶ್ನೆಗೆ, ‘ಪಕ್ಷವು ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ’ ಎಂದು ಹೇಳಿದರು.

‘ಕೊರೊನಾ ವೈರಸ್ ದೇಶದಲ್ಲಿ ಆತಂಕ ಮೂಡಿಸುತ್ತಿದೆ. ವಿಮಾನ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ರಾಜ್ಯದ 74 ಜನರ ರಕ್ತ ಮಾದರಿ ಸಂಗ್ರಹಿಸಿ ಪರೀಕ್ಷಿಸಲಾಗಿದೆ. ಎಲ್ಲವೂ ನೆಗೆಟಿವ್ ಆಗಿ ಬಂದಿದೆ. ಆದ್ದರಿಂದ ಆತಂಕ ಬೇಡ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT