ಸುಂಟಿಕೊಪ್ಪ: ಕೊರೊನಾ ಲಾಕ್ಡೌನ್ ನಿಂದಾಗಿ ಹೋಬಳಿ ವ್ಯಾಪ್ತಿಯ ಹೋಟೆಲ್, ಕ್ಯಾಂಟೀನ್ಗಳು ಮುಚ್ಚಿರುವುದರಿಂದ ವಾಹನ ಚಾಲಕರು, ನಿರ್ಗತಿಕರು, ಆಸ್ಪತ್ರೆ ಸಿಬ್ಬಂದಿ ಹಾಗೂ ರೋಗಿಗಳು ಊಟವಿಲ್ಲದೇ ಪರದಾಡುವ ಸ್ಥಿತಿ ಎದುರಾಗಿದೆ. ಇಂಥ ಕಷ್ಟದಲ್ಲಿರುವವರಿಗೆ ನೆರವಾಗಲೆಂದೇ ಏಳನೇ ಹೊಸಕೋಟೆಯ ಆರು ಮಂದಿ ‘ಹಸಿದವರ ಹಸಿವು ನೀಗಿಸುವ ತಂಡ’ ಕಟ್ಟಿಕೊಂಡು ನಿತ್ಯ ಊಟದ ವ್ಯವಸ್ಥೆ ಮಾಡುತ್ತಿದ್ದಾರೆ.