<p><strong>ಮಡಿಕೇರಿ:</strong> ಹೈಕೋರ್ಟ್ನ ತೀರ್ಪಿನ ವಿರುದ್ಧವಾಗಿ ವೀರಾಜಪೇಟೆಯ ಗುಹ್ಯ ಅಗಸ್ತ್ಯೇಶ್ವರ ದೇವಸ್ಥಾನದ ಸುತ್ತಮುತ್ತ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದೆ ಎಂದು ಆರೋಪಿಸಿರುವ ಕಾವೇರಿ ಸೇನೆಯ ಸಂಚಾಲಕ ರವಿಚೆಂಗಪ್ಪ, ಈ ಘಟನೆಯ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿ ಹೇಳಿದ್ದಾರೆ.<br /> <br /> ನಗರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಸ್ಥಾನದಿಂದ ಸುಮಾರು 1 ಕಿ.ಮೀ ಸುತ್ತಳತೆಯಲ್ಲಿ ಮರಳು ಗಣಿಗಾರಿಕೆ ಮಾಡಬಾರದು ಎಂದು ಹೈಕೋರ್ಟ್ 2009ರ ಮಾರ್ಚ್ನಲ್ಲಿ ತೀರ್ಪು ನೀಡಿದೆ. ಆದಾಗ್ಯೂ, ಈಗಲೂ ಅಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದೆ ಎಂದು ಅವರು ಆರೋಪಿಸಿದರು. <br /> <br /> ಇತ್ತೀಚೆಗೆ ಅಕ್ರಮ ಮರಳು ಗಣಿಗಾರಿಕೆ ಘಟಕಗಳ ಮೇಲೆ ದಾಳಿ ಮಾಡಿರುವ ಉಪವಿಭಾಗಾಧಿಕಾರಿಗಳು ಇಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನೂ ತಡೆಯಲಿ ಎಂದು ಅವರು ಒತ್ತಾಯಿಸಿದರು. <br /> <br /> ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶವಲ್ಲದೇ, ಕೂಟಿಯಾಲ ಸೇತುವೆ ಬಳಿ ಹಾಗೂ ಇತರ ಪ್ರದೇಶಗಳಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆಯನ್ನು ಒಂದು ವಾರದೊಳಗೆ ತಡೆಯದಿದ್ದರೆ ಉಪವಿಭಾಗಾಧಿಕಾರಿಗಳ ಕಚೇರಿಗೆ ಘೇರಾವ್ ಹಾಕಲಾಗುವುದು ಎಂದು ಹೇಳಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಹೈಕೋರ್ಟ್ನ ತೀರ್ಪಿನ ವಿರುದ್ಧವಾಗಿ ವೀರಾಜಪೇಟೆಯ ಗುಹ್ಯ ಅಗಸ್ತ್ಯೇಶ್ವರ ದೇವಸ್ಥಾನದ ಸುತ್ತಮುತ್ತ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದೆ ಎಂದು ಆರೋಪಿಸಿರುವ ಕಾವೇರಿ ಸೇನೆಯ ಸಂಚಾಲಕ ರವಿಚೆಂಗಪ್ಪ, ಈ ಘಟನೆಯ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿ ಹೇಳಿದ್ದಾರೆ.<br /> <br /> ನಗರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಸ್ಥಾನದಿಂದ ಸುಮಾರು 1 ಕಿ.ಮೀ ಸುತ್ತಳತೆಯಲ್ಲಿ ಮರಳು ಗಣಿಗಾರಿಕೆ ಮಾಡಬಾರದು ಎಂದು ಹೈಕೋರ್ಟ್ 2009ರ ಮಾರ್ಚ್ನಲ್ಲಿ ತೀರ್ಪು ನೀಡಿದೆ. ಆದಾಗ್ಯೂ, ಈಗಲೂ ಅಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದೆ ಎಂದು ಅವರು ಆರೋಪಿಸಿದರು. <br /> <br /> ಇತ್ತೀಚೆಗೆ ಅಕ್ರಮ ಮರಳು ಗಣಿಗಾರಿಕೆ ಘಟಕಗಳ ಮೇಲೆ ದಾಳಿ ಮಾಡಿರುವ ಉಪವಿಭಾಗಾಧಿಕಾರಿಗಳು ಇಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನೂ ತಡೆಯಲಿ ಎಂದು ಅವರು ಒತ್ತಾಯಿಸಿದರು. <br /> <br /> ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶವಲ್ಲದೇ, ಕೂಟಿಯಾಲ ಸೇತುವೆ ಬಳಿ ಹಾಗೂ ಇತರ ಪ್ರದೇಶಗಳಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆಯನ್ನು ಒಂದು ವಾರದೊಳಗೆ ತಡೆಯದಿದ್ದರೆ ಉಪವಿಭಾಗಾಧಿಕಾರಿಗಳ ಕಚೇರಿಗೆ ಘೇರಾವ್ ಹಾಕಲಾಗುವುದು ಎಂದು ಹೇಳಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>