ಹಾಲುಗುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಂಡಂಗೇರಿಯಲ್ಲಿ ಕಾರ್ಯಕ್ರಮವೊಂದಕ್ಕೆ ಶುಭ ಹಾರೈಸಿ ಅಳವಡಿಸಲಾಗಿದ್ದ ಫ್ಲೆಕ್ಸ್ ಹಾಗೂ ಬ್ಯಾನರ್ಗಳನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದೀಪಾ ಸೂಚನೆ ಮೇರೆಗೆ ತೆರವು ಮಾಡಲಾಗುತ್ತಿತ್ತು. ಆಗ ಸ್ಥಳೀಯರು ಬ್ಯಾನರ್ ತೆರವುಗೊಳಿಸದಂತೆ ಪಿಡಿಒ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಆಗ ಪರಸ್ಪರ ತಳ್ಳಾಟ ನಡೆದಾಗ ಮಂಜುನಾಥ್ ಗಾಯಗೊಂಡಿದ್ದಾರೆ ಎನ್ನಲಾಗಿದೆ.