<p>ಮಡಿಕೇರಿ: ಕಾಫಿ ಬೆಳೆಗೆ ಸಹಾಯಧನ ನೀಡುವ ನಿಟ್ಟಿನಲ್ಲಿ ಸರ್ಕಾರ ಶೀಘ್ರವೇ ಕ್ರಮ ಕೈಗೊಳ್ಳಲಿದೆ ಎಂದು ವಿಧಾನ ಸಭಾಧ್ಯಕ್ಷ ಕೆ.ಜಿ.ಬೋಪಯ್ಯ ತಿಳಿಸಿದರು.<br /> <br /> ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘದ ವತಿಯಿಂದ ಹುಣಸೂರಿನ ಬಿ.ಎಂ.ರಸ್ತೆಯಲ್ಲಿ ವಾಣಿಜ್ಯ ಸಂಕೀರ್ಣ ಮಳಿಗೆಗಳನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಕೊಡಗು ಕಾಫಿ ಬೆಳೆಗಾರರ ಸಂಘವು ಸಂಪನ್ಮೂಲಗಳ ಆದಾಯವನ್ನು ಸಮರ್ಪಕವಾಗಿ ಬಳಸಿಕೊಂಡು ಕಾಫಿ ಬೆಳೆಗಾರರ ಸಹಕಾರ ಸಂಘ ಚೇತರಿಸಿ ಕೊಳ್ಳುವಂತೆ ಮಾಡಬೇಕು ಎಂದರು.<br /> <br /> ವೈದ್ಯನಾಥನ್ ವರದಿ ಆಧಾರದ ಮೇಲೆ ರಾಜ್ಯಕ್ಕೆ 700 ಕೋಟಿ ರೂಪಾಯಿ ಬಿಡುಗಡೆಯಾಗಿದ್ದು, ಕೊಡಗು ಜಿಲ್ಲೆಗೆ 5.34 ಕೋಟಿ ರೂಪಾಯಿ ಮಾತ್ರ ಸಿಕ್ಕಿದೆ ಎಂದರು.<br /> <br /> ಹುಣಸೂರು ಶಾಸಕ ಎಚ್.ಪಿ.ಮಂಜುನಾಥ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸಹಕಾರ ಸಂಘಗಳು ನಾನಾ ಸಮಸ್ಯೆಗಳನ್ನು ಎದುರಿಸುತ್ತಿವೆ. ಸಹಕಾರ ಸಂಘವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಗಮನ ನೀಡಬೇಕು ಎಂದು ಅವರು ಹೇಳಿದರು.<br /> <br /> ಹುಣಸೂರು ಪುರಸಭಾ ಅಧ್ಯಕ್ಷೆ ಮಂಜುಳಾ ಚೆನ್ನಬಸಪ್ಪ ಅವರು ಮಾತನಾಡಿ, ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘವು ಇಲ್ಲಿನ ಸ್ಥಳೀಯ ಜನರಿಗೆ ಉದ್ಯೋಗ ನೀಡಿ ಆರ್ಥಿಕ ಸಬಲೀಕರಣಕ್ಕೆ ಸಹಕಾರಿ ಯಾಗಿದೆ. ಈ ಸಹಕಾರ ಇನ್ನೂ ಎತ್ತರಕ್ಕೆ ಬೆಳೆಯಲಿ ಎಂದು ಆಶಿಸಿದರು.<br /> <br /> ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘದ ಅಧ್ಯಕ್ಷ ಎಂ.ಬಿ.ದೇವಯ್ಯ ಮಾತನಾಡಿ, ಸಂಘವು ಸುಮಾರು 14 ಕೋಟಿ ರೂಪಾಯಿ ನಷ್ಟದಲ್ಲಿದ್ದು, ಜನಪ್ರತಿನಿಧಿಗಳ ಸಹಕಾರದಿಂದ ಸಂಘವನ್ನು ಬಲಪಡಿಸುವ ನಿಟ್ಟಿನಲ್ಲಿ ಶ್ರಮಿಸಲಾಗುತ್ತಿದೆ ಎಂದರು. <br /> <br /> ಮೈಸೂರು ಪ್ರಾಂತದ ಸಹಕಾರ ಸಂಘಗಳ ಜಂಟಿ ನಿಬಂಧಕ ಡಾ.ಎಚ್.ಆರ್.ಕೃಷ್ಣಯ್ಯ ಗೌಡ, ಸಹಕಾರ ಸಂಘಗಳ ಉಪನಿಬಂಧಕ ಎಂ.ವೆಂಕಟ ಸ್ವಾಮಿ, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಉಪನಿರ್ದೇಶಕ ಎಸ್.ಷಣ್ಮುಖಸ್ವಾಮಿ, ತಹಶೀಲ್ದಾರ್ ಲೋಕನಾಥ್, ಕೊಡಗು ಕಾಫಿ ಬೆಳೆಗಾರರ ಸಂಘದ ನಿರ್ದೇಶಕರಾದ ನಾಯಕಂಡ ಕೆ.ಅಯ್ಯಣ್ಣ ಹಾಜರಿದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ಕಾಫಿ ಬೆಳೆಗೆ ಸಹಾಯಧನ ನೀಡುವ ನಿಟ್ಟಿನಲ್ಲಿ ಸರ್ಕಾರ ಶೀಘ್ರವೇ ಕ್ರಮ ಕೈಗೊಳ್ಳಲಿದೆ ಎಂದು ವಿಧಾನ ಸಭಾಧ್ಯಕ್ಷ ಕೆ.ಜಿ.ಬೋಪಯ್ಯ ತಿಳಿಸಿದರು.<br /> <br /> ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘದ ವತಿಯಿಂದ ಹುಣಸೂರಿನ ಬಿ.ಎಂ.ರಸ್ತೆಯಲ್ಲಿ ವಾಣಿಜ್ಯ ಸಂಕೀರ್ಣ ಮಳಿಗೆಗಳನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಕೊಡಗು ಕಾಫಿ ಬೆಳೆಗಾರರ ಸಂಘವು ಸಂಪನ್ಮೂಲಗಳ ಆದಾಯವನ್ನು ಸಮರ್ಪಕವಾಗಿ ಬಳಸಿಕೊಂಡು ಕಾಫಿ ಬೆಳೆಗಾರರ ಸಹಕಾರ ಸಂಘ ಚೇತರಿಸಿ ಕೊಳ್ಳುವಂತೆ ಮಾಡಬೇಕು ಎಂದರು.<br /> <br /> ವೈದ್ಯನಾಥನ್ ವರದಿ ಆಧಾರದ ಮೇಲೆ ರಾಜ್ಯಕ್ಕೆ 700 ಕೋಟಿ ರೂಪಾಯಿ ಬಿಡುಗಡೆಯಾಗಿದ್ದು, ಕೊಡಗು ಜಿಲ್ಲೆಗೆ 5.34 ಕೋಟಿ ರೂಪಾಯಿ ಮಾತ್ರ ಸಿಕ್ಕಿದೆ ಎಂದರು.<br /> <br /> ಹುಣಸೂರು ಶಾಸಕ ಎಚ್.ಪಿ.ಮಂಜುನಾಥ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸಹಕಾರ ಸಂಘಗಳು ನಾನಾ ಸಮಸ್ಯೆಗಳನ್ನು ಎದುರಿಸುತ್ತಿವೆ. ಸಹಕಾರ ಸಂಘವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಗಮನ ನೀಡಬೇಕು ಎಂದು ಅವರು ಹೇಳಿದರು.<br /> <br /> ಹುಣಸೂರು ಪುರಸಭಾ ಅಧ್ಯಕ್ಷೆ ಮಂಜುಳಾ ಚೆನ್ನಬಸಪ್ಪ ಅವರು ಮಾತನಾಡಿ, ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘವು ಇಲ್ಲಿನ ಸ್ಥಳೀಯ ಜನರಿಗೆ ಉದ್ಯೋಗ ನೀಡಿ ಆರ್ಥಿಕ ಸಬಲೀಕರಣಕ್ಕೆ ಸಹಕಾರಿ ಯಾಗಿದೆ. ಈ ಸಹಕಾರ ಇನ್ನೂ ಎತ್ತರಕ್ಕೆ ಬೆಳೆಯಲಿ ಎಂದು ಆಶಿಸಿದರು.<br /> <br /> ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘದ ಅಧ್ಯಕ್ಷ ಎಂ.ಬಿ.ದೇವಯ್ಯ ಮಾತನಾಡಿ, ಸಂಘವು ಸುಮಾರು 14 ಕೋಟಿ ರೂಪಾಯಿ ನಷ್ಟದಲ್ಲಿದ್ದು, ಜನಪ್ರತಿನಿಧಿಗಳ ಸಹಕಾರದಿಂದ ಸಂಘವನ್ನು ಬಲಪಡಿಸುವ ನಿಟ್ಟಿನಲ್ಲಿ ಶ್ರಮಿಸಲಾಗುತ್ತಿದೆ ಎಂದರು. <br /> <br /> ಮೈಸೂರು ಪ್ರಾಂತದ ಸಹಕಾರ ಸಂಘಗಳ ಜಂಟಿ ನಿಬಂಧಕ ಡಾ.ಎಚ್.ಆರ್.ಕೃಷ್ಣಯ್ಯ ಗೌಡ, ಸಹಕಾರ ಸಂಘಗಳ ಉಪನಿಬಂಧಕ ಎಂ.ವೆಂಕಟ ಸ್ವಾಮಿ, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಉಪನಿರ್ದೇಶಕ ಎಸ್.ಷಣ್ಮುಖಸ್ವಾಮಿ, ತಹಶೀಲ್ದಾರ್ ಲೋಕನಾಥ್, ಕೊಡಗು ಕಾಫಿ ಬೆಳೆಗಾರರ ಸಂಘದ ನಿರ್ದೇಶಕರಾದ ನಾಯಕಂಡ ಕೆ.ಅಯ್ಯಣ್ಣ ಹಾಜರಿದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>