<p>ಮಡಿಕೇರಿ: ಕೊಡಗಿನ ಜನರನ್ನು ಹಲವಾರು ವರ್ಷಗಳಿಂದ ಕಾಡುತ್ತಿರುವ ಜಮ್ಮಾ ಬಾಣೆ ಸಮಸ್ಯೆಯನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ನಡೆದಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಬಗೆಹರಿಯುವ ವಿಶ್ವಾಸ ತಮಗಿದೆ ಎಂದು ವಿಧಾನಸಭಾಧ್ಯಕ್ಷ ಕೆ.ಜಿ. ಬೋಪಯ್ಯ ಹೇಳಿದರು. <br /> <br /> ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜಮ್ಮಾ ಬಾಣೆ ವಿಷಯವು ಕಳೆದ ಬಾರಿಯ ಸಚಿವ ಸಂಪುಟದಲ್ಲಿಯೇ ಚರ್ಚೆಗೆ ಬಂದಿತ್ತು. ಆದರೆ, ದಕ್ಷಿಣ ಕನ್ನಡ ಜಿಲ್ಲೆಯ ಕುಮ್ಕಿ, ಇತರ ಜಮೀನುಗಳನ್ನು ಇದರಲ್ಲಿ ಸೇರ್ಪಡಿಸಲು ಪ್ರಯತ್ನಿಸಿದ್ದರಿಂದ ಪರಿಹಾರವಾಗದೇ ಕಗ್ಗಂಟಾಗಿಯೇ ಉಳಿಯಿತು ಎಂದರು.<br /> <br /> ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರಿಗೆ ಕೊಡಗಿನ ಜಮ್ಮಾ ಬಾಣೆ ಸಮಸ್ಯೆಯ ನಿಜಸ್ಥಿತಿ ಗೊತ್ತಿದೆ. ಹೀಗಾಗಿ ಈ ಬಾರಿಯ ಸಭೆಯಲ್ಲಿ ಬಗೆಹರಿಯುವ ಸಾಧ್ಯತೆ ಇದೆ ಎಂದರು.<br /> <br /> ಸಚಿವ ಸಂಪುಟದ ಉಪಸಮಿತಿಗೆ ಜಮ್ಮಾ ಬಾಣೆ ವಿಷಯವನ್ನು ವಹಿಸುವ ಸಾಧ್ಯತೆ ಇಲ್ಲ. ನೇರವಾಗಿ ಸಚಿವ ಸಂಪುಟವೇ ಇದರ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ಕೊಡಗಿನ ಜನರನ್ನು ಹಲವಾರು ವರ್ಷಗಳಿಂದ ಕಾಡುತ್ತಿರುವ ಜಮ್ಮಾ ಬಾಣೆ ಸಮಸ್ಯೆಯನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ನಡೆದಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಬಗೆಹರಿಯುವ ವಿಶ್ವಾಸ ತಮಗಿದೆ ಎಂದು ವಿಧಾನಸಭಾಧ್ಯಕ್ಷ ಕೆ.ಜಿ. ಬೋಪಯ್ಯ ಹೇಳಿದರು. <br /> <br /> ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜಮ್ಮಾ ಬಾಣೆ ವಿಷಯವು ಕಳೆದ ಬಾರಿಯ ಸಚಿವ ಸಂಪುಟದಲ್ಲಿಯೇ ಚರ್ಚೆಗೆ ಬಂದಿತ್ತು. ಆದರೆ, ದಕ್ಷಿಣ ಕನ್ನಡ ಜಿಲ್ಲೆಯ ಕುಮ್ಕಿ, ಇತರ ಜಮೀನುಗಳನ್ನು ಇದರಲ್ಲಿ ಸೇರ್ಪಡಿಸಲು ಪ್ರಯತ್ನಿಸಿದ್ದರಿಂದ ಪರಿಹಾರವಾಗದೇ ಕಗ್ಗಂಟಾಗಿಯೇ ಉಳಿಯಿತು ಎಂದರು.<br /> <br /> ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರಿಗೆ ಕೊಡಗಿನ ಜಮ್ಮಾ ಬಾಣೆ ಸಮಸ್ಯೆಯ ನಿಜಸ್ಥಿತಿ ಗೊತ್ತಿದೆ. ಹೀಗಾಗಿ ಈ ಬಾರಿಯ ಸಭೆಯಲ್ಲಿ ಬಗೆಹರಿಯುವ ಸಾಧ್ಯತೆ ಇದೆ ಎಂದರು.<br /> <br /> ಸಚಿವ ಸಂಪುಟದ ಉಪಸಮಿತಿಗೆ ಜಮ್ಮಾ ಬಾಣೆ ವಿಷಯವನ್ನು ವಹಿಸುವ ಸಾಧ್ಯತೆ ಇಲ್ಲ. ನೇರವಾಗಿ ಸಚಿವ ಸಂಪುಟವೇ ಇದರ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>