<p>ಗೋಣಿಕೊಪ್ಪಲು: ಇಲ್ಲಿನ ಕಾವೇರಿ ದಸರಾ ಜನೋತ್ಸವದ 5ನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೆಂಗಳೂರಿನ ಪ್ರಭಾತ್ ಕಲಾವಿದರ `ಧರ್ಮ ಭೂಮಿ~ ಮತ್ತು `ಮಹಿಷಾಸುರ ಮರ್ಧಿನಿ~ ನೃತ್ಯ ರೂಪಕ ಪ್ರೇಕ್ಷಕರಿಗೆ ಮುದ ನೀಡಿತು.<br /> <br /> ತಂಡದ ಕಲಾವಿದರು ಭರತ ಖಂಡದ ಚರಿತ್ರೆಯನ್ನು ಮನೋಜ್ಞವಾಗಿ ನೃತ್ಯ ರೂಪಕದಲ್ಲಿ ಅಭಿವ್ಯಕ್ತಿಗೊಳಿಸಿದರು. ನಟನಾ ಕೌಶಲ ಹಾಗೂ ನೃತ್ಯ ರೂಪಕ ಜನತೆಯನ್ನು ರಂಜಿಸಿತು. <br /> <br /> ಮಹಿಷಾಸುರ ಮರ್ಧಿನಿ ರೂಪಕ ಪ್ಷೇಕ್ಷಕರಿಗೆ ಮತ್ತಷ್ಟು ಮುದ ನೀಡಿತು. ಮಹಿಷಾಸುರನನ್ನು ಚಾಮುಂಡಿ ಸಂಹರಿಸಿದ ಕಥೆ ಉತ್ತಮವಾಗಿ ಮೂಡಿ ಬಂತು. ಇದಕ್ಕೂ ಮೊದಲು ನಡೆದ ಕಾರ್ಯಕ್ರಮದಲ್ಲಿ ಕಾವೇರಿ ದಸರಾ ಸಮಿತಿಯ ಮಾಜಿ ಕಾರ್ಯಾಧ್ಯಕ್ಷ ಬಿ.ಎನ್. ಪ್ರಕಾಶ್ ಮಾತನಾಡಿ, ಕಳೆದ 2 ವರ್ಷಗಳಿಂದ ಸರ್ಕಾರ ಗೋಣಿಕೊಪ್ಪಲು ದಸರಾಗೆ ಅನುದಾನ ನೀಡುತ್ತಿದೆ. ಹಿಂದೆ ಜನತೆಯ ಸಹಕಾರದಿಂದ ಉತ್ಸವ ನಡೆಸಲಾಗುತ್ತಿತ್ತು ಎಂದು ನೆನಪಿಸಿಕೊಂಡರು. <br /> <br /> ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಎಂ.ಎಂ. ರವೀಂದ್ರ ಮಾತನಾಡಿ, ಸಾಂಸ್ಕೃತಿಕ ಉತ್ಸವ ಜನತೆಗೆ ಮನರಂಜನೆ ನೀಡುವುದರ ಜತೆಗೆ ಸಮಾಜದ ಸೌಹಾರ್ದತೆಗೂ ಸಹಕಾರಿ. ಇಂತಹ ಉತ್ಸವಗಳು ಆಯಾ ಸಂದರ್ಭಕ್ಕೆ ತಕ್ಕಂತೆ ನಡೆಯುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು. <br /> <br /> ಉದ್ಯಮಿ ಅಜಿತ್ ಅಯ್ಯಪ್ಪ, ಕಬ್ಬಚ್ಚೀರ ಪ್ರಭು ಸುಬ್ರಮಣಿ, ದಸರಾ ಸಮಿತಿ ಕಾರ್ಯಾಧ್ಯಕ್ಷ ಗಿರೀಶ್ ಗಣಪತಿ, ಗ್ರಾಪಂ. ಸದಸ್ಯ ರಾಜಶೇಖರ್, ಸಬ್ ಇನ್ಸ್ಪೆಕ್ಟರ್ ಸುರೇಶ್ಕುಮಾರ್, ಪೊನ್ನಿಮಾಡ ಬೋಜಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗೋಣಿಕೊಪ್ಪಲು: ಇಲ್ಲಿನ ಕಾವೇರಿ ದಸರಾ ಜನೋತ್ಸವದ 5ನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೆಂಗಳೂರಿನ ಪ್ರಭಾತ್ ಕಲಾವಿದರ `ಧರ್ಮ ಭೂಮಿ~ ಮತ್ತು `ಮಹಿಷಾಸುರ ಮರ್ಧಿನಿ~ ನೃತ್ಯ ರೂಪಕ ಪ್ರೇಕ್ಷಕರಿಗೆ ಮುದ ನೀಡಿತು.<br /> <br /> ತಂಡದ ಕಲಾವಿದರು ಭರತ ಖಂಡದ ಚರಿತ್ರೆಯನ್ನು ಮನೋಜ್ಞವಾಗಿ ನೃತ್ಯ ರೂಪಕದಲ್ಲಿ ಅಭಿವ್ಯಕ್ತಿಗೊಳಿಸಿದರು. ನಟನಾ ಕೌಶಲ ಹಾಗೂ ನೃತ್ಯ ರೂಪಕ ಜನತೆಯನ್ನು ರಂಜಿಸಿತು. <br /> <br /> ಮಹಿಷಾಸುರ ಮರ್ಧಿನಿ ರೂಪಕ ಪ್ಷೇಕ್ಷಕರಿಗೆ ಮತ್ತಷ್ಟು ಮುದ ನೀಡಿತು. ಮಹಿಷಾಸುರನನ್ನು ಚಾಮುಂಡಿ ಸಂಹರಿಸಿದ ಕಥೆ ಉತ್ತಮವಾಗಿ ಮೂಡಿ ಬಂತು. ಇದಕ್ಕೂ ಮೊದಲು ನಡೆದ ಕಾರ್ಯಕ್ರಮದಲ್ಲಿ ಕಾವೇರಿ ದಸರಾ ಸಮಿತಿಯ ಮಾಜಿ ಕಾರ್ಯಾಧ್ಯಕ್ಷ ಬಿ.ಎನ್. ಪ್ರಕಾಶ್ ಮಾತನಾಡಿ, ಕಳೆದ 2 ವರ್ಷಗಳಿಂದ ಸರ್ಕಾರ ಗೋಣಿಕೊಪ್ಪಲು ದಸರಾಗೆ ಅನುದಾನ ನೀಡುತ್ತಿದೆ. ಹಿಂದೆ ಜನತೆಯ ಸಹಕಾರದಿಂದ ಉತ್ಸವ ನಡೆಸಲಾಗುತ್ತಿತ್ತು ಎಂದು ನೆನಪಿಸಿಕೊಂಡರು. <br /> <br /> ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಎಂ.ಎಂ. ರವೀಂದ್ರ ಮಾತನಾಡಿ, ಸಾಂಸ್ಕೃತಿಕ ಉತ್ಸವ ಜನತೆಗೆ ಮನರಂಜನೆ ನೀಡುವುದರ ಜತೆಗೆ ಸಮಾಜದ ಸೌಹಾರ್ದತೆಗೂ ಸಹಕಾರಿ. ಇಂತಹ ಉತ್ಸವಗಳು ಆಯಾ ಸಂದರ್ಭಕ್ಕೆ ತಕ್ಕಂತೆ ನಡೆಯುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು. <br /> <br /> ಉದ್ಯಮಿ ಅಜಿತ್ ಅಯ್ಯಪ್ಪ, ಕಬ್ಬಚ್ಚೀರ ಪ್ರಭು ಸುಬ್ರಮಣಿ, ದಸರಾ ಸಮಿತಿ ಕಾರ್ಯಾಧ್ಯಕ್ಷ ಗಿರೀಶ್ ಗಣಪತಿ, ಗ್ರಾಪಂ. ಸದಸ್ಯ ರಾಜಶೇಖರ್, ಸಬ್ ಇನ್ಸ್ಪೆಕ್ಟರ್ ಸುರೇಶ್ಕುಮಾರ್, ಪೊನ್ನಿಮಾಡ ಬೋಜಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>