<p>ಸೋಮವಾರಪೇಟೆ: ತಾಕೇರಿ ಗ್ರಾಮದಲ್ಲಿ ನೂರಾರು ವರ್ಷಗಳ ಇತಿಹಾಸವಿದೆ ಎಂದು ಹೇಳಲಾದ ಉಮಾಮಹೇಶ್ವರ ದೇವಾಲಯದ ಜೀರ್ಣೋದ್ಧಾರ ಕಾರ್ಯ ಭರದಿಂದ ಸಾಗಿದ್ದು, ಲೋಕಾರ್ಪಣೆಗೆ ಸಿದ್ಧವಾಗುತ್ತಿದೆ.<br /> <br /> ಕೇರಳ ಹಾಗೂ ಮಂಗಳೂರು ದೇವಾಲಯಗಳ ಶೈಲಿಯಲ್ಲಿ ನಿರ್ಮಾಣವಾಗುತ್ತಿರುವ ದೇವಸ್ಥಾನ ಸೋಮವಾರಪೇಟೆಯಿಂದ 9 ಕಿ.ಮೀ ದೂರದಲ್ಲಿರುವ ತಾಕೇರಿ ಗ್ರಾಮದ ಹೃದಯಭಾಗದಲ್ಲಿದೆ. ಎರಡು ವರ್ಷಗಳಿಂದ ದೇವಾಲಯದ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಮಾರ್ಚ್ 28ರಂದು ದೇವಾಲಯ ಲೋಕಾರ್ಪಣೆಯಾಗಲಿದೆ ಎಂದು ದೇವಸ್ಥಾನ ಸಮಿತಿ ತಿಳಿಸಿದೆ.<br /> <br /> ಗ್ರಾಮದ 1.86 ಎಕರೆ ಪ್ರದೇಶದ ವಿಶಾಲ ಜಾಗದಲ್ಲಿ ದೇವಾಲಯ ನಿರ್ಮಾಣವಾಗುತ್ತಿದ್ದು, ಗರ್ಭಗುಡಿಯ ಕಲ್ಲುಗಳನ್ನು ಕಾರ್ಕಳದಿಂದ ತರಿಸಲಾಗಿದೆ. ಕಾರ್ಕಳದ ಶಿಲ್ಪಿ ಸದಾಶಿವ ಗುಡಿಗಾರ್ ಅವರು ದೇವರ ಮೂರ್ತಿಯನ್ನು ನಿರ್ಮಿಸಿದ್ದು, ಗರ್ಭಗುಡಿ, ಮುಖಮಂಟಪಗಳನ್ನು ಮಂಗಳೂರು ಹಾಗೂ ಕೇರಳ ರಾಜ್ಯದ ದೇವಾಲಯಗಳ ಮಾದರಿಯಲ್ಲಿ ನಿರ್ಮಿಸಲಾಗಿದೆ.<br /> <br /> ಗ್ರಾಮಸ್ಥರು ಹಾಗೂ ದಾನಿಗಳ ಧನಸಹಾಯದಿಂದ ₨ 1.50 ಕೋಟಿ ವೆಚ್ಚದಲ್ಲಿ ದೇವಾಲಯ ನಿರ್ಮಾಣಗೊಳ್ಳುತ್ತಿದೆ. ಆ ಸ್ಥಳದಲ್ಲಿ ಈ ಹಿಂದೆ ಸಣ್ಣ ಗುಡಿಯೊಂದನ್ನು ನಿರ್ಮಿಸಿ ಪೂಜೆ ಸಲ್ಲಿಸಲಾಗುತ್ತಿತ್ತು.<br /> <br /> ಮಳೆ,ಗಾಳಿಗೆ ದೇವಾಲಯ ಶಿಥಿಲಾವಸ್ಥೆಗೆ ತಲುಪಿದ್ದರಿಂದ ನೂತನವಾಗಿ ದೇವಾಲಯ ನಿರ್ಮಿಸಲು ಗ್ರಾಮಸ್ಥರು ಮುಂದಾದರು. ಅದರಂತೆ ನೆಲ್ಯಾಡಿಯ ಶ್ರೀಧರ್ ಘೋರೆ ಅವರ ಮೂಲಕ ಅಷ್ಟಮಂಗಲ ಪ್ರಶ್ನೆ ನೋಡಿದಾಗ, ಇದುವರೆಗೂ ಈಶ್ವರ ದೇವಾಲಯ ಎಂದೇ ನಂಬಲಾಗಿದ್ದ ಈ ಸ್ಥಳ, ಅಷ್ಟಮಂಗಲ ಪ್ರಶ್ನೆಯಲ್ಲಿ ಉಮಾಮಹೇಶ್ವರ ದೇವರ ಸನ್ನಿಧಿ ಎಂಬದು ತಿಳಿದುಬಂದಿತು. <br /> <br /> ದೇವಾಲಯದ ನಿರ್ಮಾಣಕ್ಕೆ ಧನಸಹಾಯ ಮಾಡಲು ಇಚ್ಛಿಸುವವರು ಸೋಮವಾರಪೇಟೆಯ ಕೆನರಾ ಬ್ಯಾಂಕ್ ಖಾತೆ ಸಂಖ್ಯೆ 0563101014642ಗೆ ಸಂದಾಯ ಮಾಡಬಹುದು ಎಂದು ದೇವಾಲಯ ಸಮಿತಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸೋಮವಾರಪೇಟೆ: ತಾಕೇರಿ ಗ್ರಾಮದಲ್ಲಿ ನೂರಾರು ವರ್ಷಗಳ ಇತಿಹಾಸವಿದೆ ಎಂದು ಹೇಳಲಾದ ಉಮಾಮಹೇಶ್ವರ ದೇವಾಲಯದ ಜೀರ್ಣೋದ್ಧಾರ ಕಾರ್ಯ ಭರದಿಂದ ಸಾಗಿದ್ದು, ಲೋಕಾರ್ಪಣೆಗೆ ಸಿದ್ಧವಾಗುತ್ತಿದೆ.<br /> <br /> ಕೇರಳ ಹಾಗೂ ಮಂಗಳೂರು ದೇವಾಲಯಗಳ ಶೈಲಿಯಲ್ಲಿ ನಿರ್ಮಾಣವಾಗುತ್ತಿರುವ ದೇವಸ್ಥಾನ ಸೋಮವಾರಪೇಟೆಯಿಂದ 9 ಕಿ.ಮೀ ದೂರದಲ್ಲಿರುವ ತಾಕೇರಿ ಗ್ರಾಮದ ಹೃದಯಭಾಗದಲ್ಲಿದೆ. ಎರಡು ವರ್ಷಗಳಿಂದ ದೇವಾಲಯದ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಮಾರ್ಚ್ 28ರಂದು ದೇವಾಲಯ ಲೋಕಾರ್ಪಣೆಯಾಗಲಿದೆ ಎಂದು ದೇವಸ್ಥಾನ ಸಮಿತಿ ತಿಳಿಸಿದೆ.<br /> <br /> ಗ್ರಾಮದ 1.86 ಎಕರೆ ಪ್ರದೇಶದ ವಿಶಾಲ ಜಾಗದಲ್ಲಿ ದೇವಾಲಯ ನಿರ್ಮಾಣವಾಗುತ್ತಿದ್ದು, ಗರ್ಭಗುಡಿಯ ಕಲ್ಲುಗಳನ್ನು ಕಾರ್ಕಳದಿಂದ ತರಿಸಲಾಗಿದೆ. ಕಾರ್ಕಳದ ಶಿಲ್ಪಿ ಸದಾಶಿವ ಗುಡಿಗಾರ್ ಅವರು ದೇವರ ಮೂರ್ತಿಯನ್ನು ನಿರ್ಮಿಸಿದ್ದು, ಗರ್ಭಗುಡಿ, ಮುಖಮಂಟಪಗಳನ್ನು ಮಂಗಳೂರು ಹಾಗೂ ಕೇರಳ ರಾಜ್ಯದ ದೇವಾಲಯಗಳ ಮಾದರಿಯಲ್ಲಿ ನಿರ್ಮಿಸಲಾಗಿದೆ.<br /> <br /> ಗ್ರಾಮಸ್ಥರು ಹಾಗೂ ದಾನಿಗಳ ಧನಸಹಾಯದಿಂದ ₨ 1.50 ಕೋಟಿ ವೆಚ್ಚದಲ್ಲಿ ದೇವಾಲಯ ನಿರ್ಮಾಣಗೊಳ್ಳುತ್ತಿದೆ. ಆ ಸ್ಥಳದಲ್ಲಿ ಈ ಹಿಂದೆ ಸಣ್ಣ ಗುಡಿಯೊಂದನ್ನು ನಿರ್ಮಿಸಿ ಪೂಜೆ ಸಲ್ಲಿಸಲಾಗುತ್ತಿತ್ತು.<br /> <br /> ಮಳೆ,ಗಾಳಿಗೆ ದೇವಾಲಯ ಶಿಥಿಲಾವಸ್ಥೆಗೆ ತಲುಪಿದ್ದರಿಂದ ನೂತನವಾಗಿ ದೇವಾಲಯ ನಿರ್ಮಿಸಲು ಗ್ರಾಮಸ್ಥರು ಮುಂದಾದರು. ಅದರಂತೆ ನೆಲ್ಯಾಡಿಯ ಶ್ರೀಧರ್ ಘೋರೆ ಅವರ ಮೂಲಕ ಅಷ್ಟಮಂಗಲ ಪ್ರಶ್ನೆ ನೋಡಿದಾಗ, ಇದುವರೆಗೂ ಈಶ್ವರ ದೇವಾಲಯ ಎಂದೇ ನಂಬಲಾಗಿದ್ದ ಈ ಸ್ಥಳ, ಅಷ್ಟಮಂಗಲ ಪ್ರಶ್ನೆಯಲ್ಲಿ ಉಮಾಮಹೇಶ್ವರ ದೇವರ ಸನ್ನಿಧಿ ಎಂಬದು ತಿಳಿದುಬಂದಿತು. <br /> <br /> ದೇವಾಲಯದ ನಿರ್ಮಾಣಕ್ಕೆ ಧನಸಹಾಯ ಮಾಡಲು ಇಚ್ಛಿಸುವವರು ಸೋಮವಾರಪೇಟೆಯ ಕೆನರಾ ಬ್ಯಾಂಕ್ ಖಾತೆ ಸಂಖ್ಯೆ 0563101014642ಗೆ ಸಂದಾಯ ಮಾಡಬಹುದು ಎಂದು ದೇವಾಲಯ ಸಮಿತಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>