ಕೆ.ಎಂ. ಜೋಸೆಫ್ ಮತ್ತು ಇಂದೂ ಮಲ್ಹೋತ್ರಾರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಿಸುವಂತೆ ಜ.10ರಂದು ಕೇಂದ್ರಕ್ಕೆ ಕೊಲಿಜಿಯಂ ಶಿಫಾರಸು ಮಾಡಿತ್ತು. ಆದರೆ,ಇಂದೂ ಹೆಸರಿಗೆ ಒಪ್ಪಿಗೆ ಸೂಚಿಸಿದ್ದ ಕೇಂದ್ರ, ಜೋಸೆಫ್ ಹೆಸರನ್ನು ಮರು ಪರಿಶೀಲಿಸಲು ಸೂಚಿಸಿತ್ತು. 2016ರಲ್ಲಿ, ಕಾಂಗ್ರೆಸ್ ಆಳ್ವಿಕೆ ಇದ್ದ ಉತ್ತರಾಖಂಡದ ಮೇಲೆ ರಾಷ್ಟ್ರಪತಿ ಆಳ್ವಿಕೆ ಹೇರುವ ಕೇಂದ್ರದ ನಿರ್ಧಾರವನ್ನು ಉತ್ತರಾಖಂಡ ಹೈಕೋರ್ಟ್ ಪೀಠ ವಜಾ ಮಾಡಿತ್ತು.