<p>ಸೋಮವಾರಪೇಟೆ: ಜಿಲ್ಲೆಯಲ್ಲಿ ರೇಷ್ಮೆ ಬೆಳೆಗೆ ನೀಡಲಾಗುತ್ತಿರುವ ಪ್ರೋತ್ಸಾಹ ಹಣ ದುರ್ಬಳಕೆ ಆಗುತ್ತಿರುವ ಶಂಕೆ ಇದ್ದು, ಇಲಾಖೆಯಿಂದ ಅನುಷ್ಠಾನಗೊಂಡಿರುವ ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ನೀಡಬೇಕೆಂದು ರೇಷ್ಮೆ ಇಲಾಖೆ ಅಧಿಕಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಅಪ್ಪಚ್ಚು ರಂಜನ್ ಸೂಚಿಸಿದರು.<br /> <br /> <br /> ಗುರುವಾರ ಸಚಿವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಪಂಚಾಯಿತಿಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ರೇಷ್ಮೆ ಇಲಾಖೆಯ ಕಟ್ಟಡ ಪಾಳು ಬಿದ್ದಿದೆ. ಆದರೆ ಸರ್ಕಾರದಿಂದ ಪ್ರೋತ್ಸಾಹ ಧನ ಬಿಡುಗಡೆಯಾಗಿದೆ. ಫಲಾನುಭವಿಗಳ ಪಟ್ಟಿ ತರಿಸಿಕೊಂಡು ತನಿಖೆ ಮಾಡುವಂತೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದರು.<br /> <br /> ಇಲಾಖೆ ಕೆಲಸಗಳಿಗೆ ಸಂಬಂಧಿಸಿದಂತೆ ತಾಲ್ಲೂಕು ಉಪ ಖಜಾನಾಧಿಕಾರಿ ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಮುಂದೆ ಹೀಗಾಗದಂತೆ ಎಚ್ಚರಿಕೆ ವಹಿಸಬೇಕೆಂದು ಉಪ ಖಜಾನಾಧಿಕಾರಿ ಸುಭದ್ರ ಅವರಿಗೆ ಸಚಿವರು ಸೂಚಿಸಿದರು. <br /> <br /> ಕಾಡು ಪ್ರಾಣಿಗಳ ಉಪಟಳ ಹೆಚ್ಚಾಗಿದ್ದು ಅವುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿದರೆ ನಾಡಿನ ಕಡೆ ಬರುವುದು ಕಡಿಮೆಯಾಗುತ್ತದೆ. <br /> <br /> ಜಿಲ್ಲೆಯಾದ್ಯಂತ ಅರಣ್ಯ ಪ್ರದೇಶಗಳಲ್ಲಿ ಜಲಮೂಲಗಳನ್ನು ಕಂಡು ಹಿಡಿದು ಅಲ್ಲಿ ಕೆರೆಗಳನ್ನು ನಿರ್ಮಿಸಲು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪತ್ರ ಬರೆಯುವಂತೆ ಅರಣ್ಯ ಇಲಾಖಾಧಿಕಾರಿಗಳಿಗೆ ಸೂಚಿಸಿದರು.<br /> ರಸ್ತೆ ವಿಸ್ತರಣೆ ಮಾಡಬೇಕಾಗಿರುವುದರಿಂದ ರಸ್ತೆ ಬದಿಯಲ್ಲಿರುವ ಮರಗಳನ್ನು ತೆರವು ಮಾಡಿಸುವಂತೆ ಅರಣ್ಯಾಧಿಕಾರಿಗಳಿಗೆ ಆದೇಶಿಸಿದರು. <br /> <br /> ಕೊಡಗು ಪ್ಯಾಕೇಜಿನಡಿಯಲ್ಲಿ ಬಿಡುಗಡೆಯಾಗಿರುವ ಹಣದಲ್ಲಿ ತೋಳೂರುಶೆಟ್ಟಳ್ಳಿ, ಕೂತಿ ರಸ್ತೆ ಮತ್ತು ಬೀಟಿಕಟ್ಟೆ, ಚಿಕ್ಕತೋಳೂರು ರಸ್ತೆಯನ್ನು ಶೀಘ್ರ ಪೂರ್ಣಗೊಳಿಸುವಂತೆ ಲೋಕೋಪಯೋಗಿ ಇಲಾಖೆಗೆ ಸಚಿವರು ಸೂಚಿಸಿದರು.<br /> <br /> ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಶಿಕ್ಷಕಿಯರು ಮತ್ತು ಸಹಾಯಕಿಯರು ಕಡ್ಡಾಯವಾಗಿ ಸಂಜೆ 4 ಗಂಟೆ ವರೆಗೆ ಕರ್ತವ್ಯ ನಿರ್ವಹಿಸಬೇಕು ಹಾಗೂ ವಿದ್ಯಾರ್ಥಿಗಳ ಹಾಜರಾತಿಯನ್ನು ಸಮರ್ಪಕವಾಗಿ ನೀಡಬೇಕೆಂದು ಆದೇಶಿಸಿದರು. <br /> <br /> ಬಿಇಒ ಕಚೇರಿಗೆ ತೆರಳುವ ರಸ್ತೆಯು ಹಾಳಾಗಿದ್ದು ತಕ್ಷಣವೇ ಚೌಡ್ಲು ಪಂಚಾಯಿತಿಯ ಗಮನಕ್ಕೆ ತಂದು ಲೋಕೋಪಯೋಗಿ ಇಲಾಖೆ ಮೂಲಕ ದುರಸ್ಥಿಗೊಳಿಸಲು ಹೇಳಿದರು.<br /> <br /> ತಾಲ್ಲೂಕಿನಾದ್ಯಂತ ಹಲವು ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಜಾಗವು ಒತ್ತುವರಿಯಾಗಿದ್ದು ಕೆಲವು ಶಾಲೆಯ ಜಾಗಗಳಿಗೆ ಸೂಕ್ತ ದಾಖಲಾತಿ ಇರುವುದಿಲ್ಲ ಎಂದು ಬಿಇಓ ರಾಮಚಂದ್ರರಾಜೇ ಅರಸ್ ಸಭೆಯ ಗಮನಕ್ಕೆ ತಂದರು. <br /> <br /> ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ತಹಶೀಲ್ದಾರ್ ಗಮನಕ್ಕೆ ತಂದು ಕಂದಾಯ ಇಲಾಖೆಯ ಮೂಲಕ ಸಮಸ್ಯೆಯನ್ನು ಇತ್ಯರ್ಥಪಡಿಸಲಾಗುವುದು ಎಂದರು. <br /> <br /> ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದ್ದು ಈ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದರೂ ಕಾರ್ಯಾಚರಣೆ ನಡೆಸುತ್ತಿಲ್ಲ ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಅಬಕಾರಿ ಉಪನಿರೀಕ್ಷಕರವರನ್ನು ಸಚಿವ ರಂಜನ್ ತೀವ್ರ ತರಾಟೆಗೆ ತೆಗೆದುಕೊಂಡರು. <br /> <br /> ಕೆಲವು ಸಿಬ್ಬಂದಿಗಳೇ ಕಾರ್ಯಾಚರಣೆಯ ಮಾಹಿತಿಯನ್ನು ಅಕ್ರಮ ಮಾರಾಟಗಾರರಿಗೆ ನೀಡುತ್ತಿದ್ದಾರೆ. ಅಂತಹವರನ್ನು ಪಟ್ಟಿಮಾಡಿ ನೀಡಿದಲ್ಲಿ ತಕ್ಷಣ ವರ್ಗಾವಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸೋಮವಾರಪೇಟೆ: ಜಿಲ್ಲೆಯಲ್ಲಿ ರೇಷ್ಮೆ ಬೆಳೆಗೆ ನೀಡಲಾಗುತ್ತಿರುವ ಪ್ರೋತ್ಸಾಹ ಹಣ ದುರ್ಬಳಕೆ ಆಗುತ್ತಿರುವ ಶಂಕೆ ಇದ್ದು, ಇಲಾಖೆಯಿಂದ ಅನುಷ್ಠಾನಗೊಂಡಿರುವ ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ನೀಡಬೇಕೆಂದು ರೇಷ್ಮೆ ಇಲಾಖೆ ಅಧಿಕಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಅಪ್ಪಚ್ಚು ರಂಜನ್ ಸೂಚಿಸಿದರು.<br /> <br /> <br /> ಗುರುವಾರ ಸಚಿವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಪಂಚಾಯಿತಿಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ರೇಷ್ಮೆ ಇಲಾಖೆಯ ಕಟ್ಟಡ ಪಾಳು ಬಿದ್ದಿದೆ. ಆದರೆ ಸರ್ಕಾರದಿಂದ ಪ್ರೋತ್ಸಾಹ ಧನ ಬಿಡುಗಡೆಯಾಗಿದೆ. ಫಲಾನುಭವಿಗಳ ಪಟ್ಟಿ ತರಿಸಿಕೊಂಡು ತನಿಖೆ ಮಾಡುವಂತೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದರು.<br /> <br /> ಇಲಾಖೆ ಕೆಲಸಗಳಿಗೆ ಸಂಬಂಧಿಸಿದಂತೆ ತಾಲ್ಲೂಕು ಉಪ ಖಜಾನಾಧಿಕಾರಿ ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಮುಂದೆ ಹೀಗಾಗದಂತೆ ಎಚ್ಚರಿಕೆ ವಹಿಸಬೇಕೆಂದು ಉಪ ಖಜಾನಾಧಿಕಾರಿ ಸುಭದ್ರ ಅವರಿಗೆ ಸಚಿವರು ಸೂಚಿಸಿದರು. <br /> <br /> ಕಾಡು ಪ್ರಾಣಿಗಳ ಉಪಟಳ ಹೆಚ್ಚಾಗಿದ್ದು ಅವುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿದರೆ ನಾಡಿನ ಕಡೆ ಬರುವುದು ಕಡಿಮೆಯಾಗುತ್ತದೆ. <br /> <br /> ಜಿಲ್ಲೆಯಾದ್ಯಂತ ಅರಣ್ಯ ಪ್ರದೇಶಗಳಲ್ಲಿ ಜಲಮೂಲಗಳನ್ನು ಕಂಡು ಹಿಡಿದು ಅಲ್ಲಿ ಕೆರೆಗಳನ್ನು ನಿರ್ಮಿಸಲು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪತ್ರ ಬರೆಯುವಂತೆ ಅರಣ್ಯ ಇಲಾಖಾಧಿಕಾರಿಗಳಿಗೆ ಸೂಚಿಸಿದರು.<br /> ರಸ್ತೆ ವಿಸ್ತರಣೆ ಮಾಡಬೇಕಾಗಿರುವುದರಿಂದ ರಸ್ತೆ ಬದಿಯಲ್ಲಿರುವ ಮರಗಳನ್ನು ತೆರವು ಮಾಡಿಸುವಂತೆ ಅರಣ್ಯಾಧಿಕಾರಿಗಳಿಗೆ ಆದೇಶಿಸಿದರು. <br /> <br /> ಕೊಡಗು ಪ್ಯಾಕೇಜಿನಡಿಯಲ್ಲಿ ಬಿಡುಗಡೆಯಾಗಿರುವ ಹಣದಲ್ಲಿ ತೋಳೂರುಶೆಟ್ಟಳ್ಳಿ, ಕೂತಿ ರಸ್ತೆ ಮತ್ತು ಬೀಟಿಕಟ್ಟೆ, ಚಿಕ್ಕತೋಳೂರು ರಸ್ತೆಯನ್ನು ಶೀಘ್ರ ಪೂರ್ಣಗೊಳಿಸುವಂತೆ ಲೋಕೋಪಯೋಗಿ ಇಲಾಖೆಗೆ ಸಚಿವರು ಸೂಚಿಸಿದರು.<br /> <br /> ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಶಿಕ್ಷಕಿಯರು ಮತ್ತು ಸಹಾಯಕಿಯರು ಕಡ್ಡಾಯವಾಗಿ ಸಂಜೆ 4 ಗಂಟೆ ವರೆಗೆ ಕರ್ತವ್ಯ ನಿರ್ವಹಿಸಬೇಕು ಹಾಗೂ ವಿದ್ಯಾರ್ಥಿಗಳ ಹಾಜರಾತಿಯನ್ನು ಸಮರ್ಪಕವಾಗಿ ನೀಡಬೇಕೆಂದು ಆದೇಶಿಸಿದರು. <br /> <br /> ಬಿಇಒ ಕಚೇರಿಗೆ ತೆರಳುವ ರಸ್ತೆಯು ಹಾಳಾಗಿದ್ದು ತಕ್ಷಣವೇ ಚೌಡ್ಲು ಪಂಚಾಯಿತಿಯ ಗಮನಕ್ಕೆ ತಂದು ಲೋಕೋಪಯೋಗಿ ಇಲಾಖೆ ಮೂಲಕ ದುರಸ್ಥಿಗೊಳಿಸಲು ಹೇಳಿದರು.<br /> <br /> ತಾಲ್ಲೂಕಿನಾದ್ಯಂತ ಹಲವು ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಜಾಗವು ಒತ್ತುವರಿಯಾಗಿದ್ದು ಕೆಲವು ಶಾಲೆಯ ಜಾಗಗಳಿಗೆ ಸೂಕ್ತ ದಾಖಲಾತಿ ಇರುವುದಿಲ್ಲ ಎಂದು ಬಿಇಓ ರಾಮಚಂದ್ರರಾಜೇ ಅರಸ್ ಸಭೆಯ ಗಮನಕ್ಕೆ ತಂದರು. <br /> <br /> ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ತಹಶೀಲ್ದಾರ್ ಗಮನಕ್ಕೆ ತಂದು ಕಂದಾಯ ಇಲಾಖೆಯ ಮೂಲಕ ಸಮಸ್ಯೆಯನ್ನು ಇತ್ಯರ್ಥಪಡಿಸಲಾಗುವುದು ಎಂದರು. <br /> <br /> ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದ್ದು ಈ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದರೂ ಕಾರ್ಯಾಚರಣೆ ನಡೆಸುತ್ತಿಲ್ಲ ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಅಬಕಾರಿ ಉಪನಿರೀಕ್ಷಕರವರನ್ನು ಸಚಿವ ರಂಜನ್ ತೀವ್ರ ತರಾಟೆಗೆ ತೆಗೆದುಕೊಂಡರು. <br /> <br /> ಕೆಲವು ಸಿಬ್ಬಂದಿಗಳೇ ಕಾರ್ಯಾಚರಣೆಯ ಮಾಹಿತಿಯನ್ನು ಅಕ್ರಮ ಮಾರಾಟಗಾರರಿಗೆ ನೀಡುತ್ತಿದ್ದಾರೆ. ಅಂತಹವರನ್ನು ಪಟ್ಟಿಮಾಡಿ ನೀಡಿದಲ್ಲಿ ತಕ್ಷಣ ವರ್ಗಾವಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>