<p><strong>ಕುಶಾಲನಗರ: </strong>ಬೆಂಗಳೂರಿನ ವಿಶ್ವ ವೀರಶೈವ ಸಂಸ್ಕೃತಿ ಪ್ರತಿಷ್ಠಾನ ವತಿಯಿಂದ ನೀಡುವ 2013ನೇ ಸಾಲಿನ `ಜಗಜ್ಯೋತಿ ಬಸವೇಶ್ವರ ಕಾಯಕ ಶ್ರೀ ಪ್ರಶಸ್ತಿ'ಗೆ ಕುಶಾಲನಗರದ ಸಂಗೀತಾ ಕಲಾಕೇಂದ್ರದ ನೃತ್ಯ ಗುರುಗಳಾದ ವಿದ್ವಾನ್ ಬಿ.ಸಿ. ಶಂಕರಯ್ಯ ಅವರು ಭಾಜನರಾಗಿದ್ದಾರೆ.<br /> <br /> ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆದ ಬಸವ ಜಯಂತಿ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಶಂಕರಯ್ಯ ಅವರಿಗೆ ಮಾಜಿ ಸಚಿವೆ ರಾಣಿ ಸತೀಶ್ ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.<br /> <br /> 35 ವರ್ಷಗಳಿಂದಲೂ ಶಿಕ್ಷಕರಾಗಿ ಸೇವೆ ಸಲ್ಲಿಸುವ ಜತೆಗೆ ಸಂಗೀತಾ ಕಲಾಕೇಂದ್ರವನ್ನು ಸ್ಥಾಪಿಸಿ ಸಾವಿರಾರೂ ವಿದ್ಯಾರ್ಥಿಗಳಿಗೆ ಭರತನಾಟ್ಯ, ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ ಕಲಿಸುತ್ತಿದ್ದಾರೆ. ಇವರ ಸಮಾಜ ಸೇವೆ ಗುರುತಿಸಿ ಪ್ರಶಸ್ತಿ ನೀಡಲಾಗಿದೆ. ಈ ಸಂದರ್ಭ ಖ್ಯಾತ ನಿರ್ದೇಶಕ ಎಸ್.ಕೆ.ಭಗವಾನ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ: </strong>ಬೆಂಗಳೂರಿನ ವಿಶ್ವ ವೀರಶೈವ ಸಂಸ್ಕೃತಿ ಪ್ರತಿಷ್ಠಾನ ವತಿಯಿಂದ ನೀಡುವ 2013ನೇ ಸಾಲಿನ `ಜಗಜ್ಯೋತಿ ಬಸವೇಶ್ವರ ಕಾಯಕ ಶ್ರೀ ಪ್ರಶಸ್ತಿ'ಗೆ ಕುಶಾಲನಗರದ ಸಂಗೀತಾ ಕಲಾಕೇಂದ್ರದ ನೃತ್ಯ ಗುರುಗಳಾದ ವಿದ್ವಾನ್ ಬಿ.ಸಿ. ಶಂಕರಯ್ಯ ಅವರು ಭಾಜನರಾಗಿದ್ದಾರೆ.<br /> <br /> ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆದ ಬಸವ ಜಯಂತಿ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಶಂಕರಯ್ಯ ಅವರಿಗೆ ಮಾಜಿ ಸಚಿವೆ ರಾಣಿ ಸತೀಶ್ ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.<br /> <br /> 35 ವರ್ಷಗಳಿಂದಲೂ ಶಿಕ್ಷಕರಾಗಿ ಸೇವೆ ಸಲ್ಲಿಸುವ ಜತೆಗೆ ಸಂಗೀತಾ ಕಲಾಕೇಂದ್ರವನ್ನು ಸ್ಥಾಪಿಸಿ ಸಾವಿರಾರೂ ವಿದ್ಯಾರ್ಥಿಗಳಿಗೆ ಭರತನಾಟ್ಯ, ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ ಕಲಿಸುತ್ತಿದ್ದಾರೆ. ಇವರ ಸಮಾಜ ಸೇವೆ ಗುರುತಿಸಿ ಪ್ರಶಸ್ತಿ ನೀಡಲಾಗಿದೆ. ಈ ಸಂದರ್ಭ ಖ್ಯಾತ ನಿರ್ದೇಶಕ ಎಸ್.ಕೆ.ಭಗವಾನ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>