ಕುಶಾಲನಗರ: ಸಮೀಪದ ಬೈಲುಕುಪ್ಪೆ ಟಿಬೆಟಿಯನ್ನರ ನಿರಾಶ್ರಿತರ ಶಿಬಿರಕ್ಕೆ ಮಂಗಳವಾರ ಬೌದ್ಧಧರ್ಮ ಗುರು ದಲೈಲಾಮಾ ಭೇಟಿ ನೀಡಿದರು. ದಲೈಲಾಮಾ ಅವರಿಗೆ ಸಾಂಪ್ರದಾಯಿಕ ರೀತಿಯಲ್ಲಿ ಸ್ವಾಗತ ಕೋರಲಾಯಿತು. ಟಿಬೆಟಿಯನ್ನರ ಶಿಬಿರದಲ್ಲಿ ಸಂಭ್ರಮ ಮನೆ ಮಾಡಿತ್ತು.
ಬಂದೋಬಸ್ತ್: ದಲೈಲಾಮ ಆಗಮನದ ಹಿನ್ನೆಲೆಯಲ್ಲಿ ಬೈಲುಕುಪ್ಪೆ ನಿರಾಶ್ರಿತರ ಶಿಬಿರಕ್ಕೆ ಬಿಗಿ ಪೊಲೀಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಚೇತ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.