ಗಾಂಧೀಜಿ ಅವರ ಹುಟ್ಟು, ಬೆಳವಣಿಗೆ, ವಿದ್ಯಾಭ್ಯಾಸ, ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ವಾಪಸಾದ ಸಂದರ್ಭದಲ್ಲಿ ದೇಶದಲ್ಲಿನ ಪರಿಸ್ಥಿತಿ, ಕ್ವಿಟ್ ಇಂಡಿಯಾ ಚಳವಳಿ, ಸ್ವಾತಂತ್ರ್ಯಕ್ಕಾಗಿ ಅಹಿಂಸಾ ಹೋರಾಟ, ಹಲವು ಸಂದರ್ಭಗಳಲ್ಲಿ ಉಪವಾಸ ಸತ್ಯಾಗ್ರಹ... ಹೀಗೆ ಮಹಾತ್ಮ ಗಾಂಧೀಜಿ ಅವರ ಬದುಕು ಸಾಧನೆಗಳನ್ನು ಒಳಗೊಂಡ ಧ್ವನಿ-ಬೆಳಕಿನ ಚಿತ್ತಾರ ನೋಡುಗರ ಮನಸ್ಸು ತಣಿಸಲು ಯಶಸ್ವಿ ಆಯಿತು.