<p>ಮಡಿಕೇರಿ: ಮಾಜಿ ಯೋಧರು, ಯೋಧರ ವಿಧವಾ ಪತ್ನಿಯರು ಮತ್ತು ಅವರ ಸಂಬಂಧಿಕರಿಗೆ ಸರ್ಕಾರಿ ಜಮೀನು ನೀಡಬೇಕೆಂದು ಒತ್ತಾಯಿಸಿದ ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್ಸಿ) ಪದಾಧಿಕಾರಿಗಳು ಹಾಗೂ ಮಾಜಿ ಸೈನಿಕರು ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಮಾನವ ಸರಪಳಿ ಮಾಡಿ ಪ್ರತಿಭಟನೆ ನಡೆಸಿದರು. <br /> <br /> ಪ್ರತಿಭಟನೆಯ ನಂತರ ಸುದ್ದಿಗೋಷ್ಠಿ ನಡೆಸಿದ ಸಿಎನ್ಸಿ ಅಧ್ಯಕ್ಷ ಎನ್.ಯು. ನಾಚಪ್ಪ ಮಾತನಾಡಿ, ಕೊಡಗಿನಲ್ಲಿ ಮಾಜಿ ಯೋಧರಿಗೆ ಭೂ ಮಂಜೂರಾತಿಯಲ್ಲಿ ಪ್ರಥಮ ಆದ್ಯತೆ ಎಂಬ ಘೋಷಣೆ ಜಾರಿಗೆ ತರಬೇಕು. ಈ ಬಗ್ಗೆ ಗ್ರಾ.ಪಂ., ತಾ.ಪಂ. ಹಾಗೂ ಜಿ.ಪಂ. ನಿರ್ಣಯಕೈಗೊಳ್ಳಬೇಕು ಎಂದು ಒತ್ತಾಯಿಸಿದರು.<br /> <br /> ಸರ್ಕಾರದ ಯಾವುದೇ ವಸತಿ ಯೋಜನೆಯಾಗಿರಲಿ ಅದರಲ್ಲಿ ಮಾಜಿ ಸೈನಿಕರಿಗೆ ಮೊದಲ ಆದ್ಯತೆ ನೀಡಬೇಕು. ತಳ ಮಟ್ಟದ ಕಂದಾಯ ಅಧಿಕಾರಿಗಳು ಹೊರ ರಾಜ್ಯದ ವ್ಯಾಪಾರಿಗಳಿಂದ ಹಣ ಪಡೆದು ಅಕ್ರಮವಾಗಿ ಭೂಮಿಯನ್ನು ಮಾರಾಟ ಮಾಡುತ್ತಿರುವುದಾಗಿ ಅವರು ಆರೋಪಿಸಿದರು. <br /> <br /> ಪಂಜಾಬಿನ ಸಿಖ್ ಜನಾಂಗದ ಸೈನಿಕರನ್ನು ಪಂಜಾಬ್, ಜಮ್ಮು ಕಾಶ್ಮೀರಗಳಲ್ಲಿ ಪೂಜ್ಯಭಾವದಿಂದ ನೆನೆಯುತ್ತಾರೆ. ಆದರೆ ಕೊಡಗಿನಲ್ಲಿ ಸೈನಿಕರನ್ನು ಕಡೆಗಣಿಸಲಾಗಿದೆ. ಫೀ.ಮಾ.ಕೆ.ಎಂ. ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಇವರುಗಳನ್ನು ಅವರ ಜನ್ಮ ದಿನ ಹಾಗೂ ಪುಣ್ಯತಿಥಿಯಂದು ಮಾತ್ರ ಸ್ಮರಿಸುವಂತಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ಮಾಜಿ ಯೋಧರು, ಯೋಧರ ವಿಧವಾ ಪತ್ನಿಯರು ಮತ್ತು ಅವರ ಸಂಬಂಧಿಕರಿಗೆ ಸರ್ಕಾರಿ ಜಮೀನು ನೀಡಬೇಕೆಂದು ಒತ್ತಾಯಿಸಿದ ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್ಸಿ) ಪದಾಧಿಕಾರಿಗಳು ಹಾಗೂ ಮಾಜಿ ಸೈನಿಕರು ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಮಾನವ ಸರಪಳಿ ಮಾಡಿ ಪ್ರತಿಭಟನೆ ನಡೆಸಿದರು. <br /> <br /> ಪ್ರತಿಭಟನೆಯ ನಂತರ ಸುದ್ದಿಗೋಷ್ಠಿ ನಡೆಸಿದ ಸಿಎನ್ಸಿ ಅಧ್ಯಕ್ಷ ಎನ್.ಯು. ನಾಚಪ್ಪ ಮಾತನಾಡಿ, ಕೊಡಗಿನಲ್ಲಿ ಮಾಜಿ ಯೋಧರಿಗೆ ಭೂ ಮಂಜೂರಾತಿಯಲ್ಲಿ ಪ್ರಥಮ ಆದ್ಯತೆ ಎಂಬ ಘೋಷಣೆ ಜಾರಿಗೆ ತರಬೇಕು. ಈ ಬಗ್ಗೆ ಗ್ರಾ.ಪಂ., ತಾ.ಪಂ. ಹಾಗೂ ಜಿ.ಪಂ. ನಿರ್ಣಯಕೈಗೊಳ್ಳಬೇಕು ಎಂದು ಒತ್ತಾಯಿಸಿದರು.<br /> <br /> ಸರ್ಕಾರದ ಯಾವುದೇ ವಸತಿ ಯೋಜನೆಯಾಗಿರಲಿ ಅದರಲ್ಲಿ ಮಾಜಿ ಸೈನಿಕರಿಗೆ ಮೊದಲ ಆದ್ಯತೆ ನೀಡಬೇಕು. ತಳ ಮಟ್ಟದ ಕಂದಾಯ ಅಧಿಕಾರಿಗಳು ಹೊರ ರಾಜ್ಯದ ವ್ಯಾಪಾರಿಗಳಿಂದ ಹಣ ಪಡೆದು ಅಕ್ರಮವಾಗಿ ಭೂಮಿಯನ್ನು ಮಾರಾಟ ಮಾಡುತ್ತಿರುವುದಾಗಿ ಅವರು ಆರೋಪಿಸಿದರು. <br /> <br /> ಪಂಜಾಬಿನ ಸಿಖ್ ಜನಾಂಗದ ಸೈನಿಕರನ್ನು ಪಂಜಾಬ್, ಜಮ್ಮು ಕಾಶ್ಮೀರಗಳಲ್ಲಿ ಪೂಜ್ಯಭಾವದಿಂದ ನೆನೆಯುತ್ತಾರೆ. ಆದರೆ ಕೊಡಗಿನಲ್ಲಿ ಸೈನಿಕರನ್ನು ಕಡೆಗಣಿಸಲಾಗಿದೆ. ಫೀ.ಮಾ.ಕೆ.ಎಂ. ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಇವರುಗಳನ್ನು ಅವರ ಜನ್ಮ ದಿನ ಹಾಗೂ ಪುಣ್ಯತಿಥಿಯಂದು ಮಾತ್ರ ಸ್ಮರಿಸುವಂತಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>