<p>ಮಡಿಕೇರಿ: ವಿಶಿಷ್ಟ ಸಂಸ್ಕೃತಿ, ಕ್ರೀಡೆಗೆ ಹೆಸರಾದ ಜಿಲ್ಲೆಯಲ್ಲಿ 32 ವರ್ಷಗಳ ಬಳಿಕ ನಡೆಯುತ್ತಿರುವ ಅಖಿಲ ಭಾರತ 80ನೇ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಎಲ್ಲರೂ ಕೈಜೋಡಿಸುವಂತೆ ಸಂಸದ ಎಚ್.ವಿಶ್ವನಾಥ್ ಕೋರಿದರು.<br /> <br /> ನಗರದ ಡಿ.ದೇವರಾಜ ಅರಸು ಭವನದಲ್ಲಿ ಸೋಮವಾರ ಅಖಿಲ ಭಾರತ 80ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಬಂಧಿಸಿದಂತೆ ಉಪ ಸಮಿತಿಗಳ ಪ್ರಮುಖರೊಂದಿಗೆ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು.<br /> <br /> ಸಮ್ಮೇಳನಕ್ಕೆ ಸರ್ಕಾರ ಬಜೆಟಿನಲ್ಲಿ ಒಂದು ಕೋಟಿ ರೂಪಾಯಿ ಮೀಸಲಿಟ್ಟಿದೆ. ಮುಖ್ಯಮಂತ್ರಿ ಅವರು ಹೆಚ್ಚುವರಿಯಾಗಿ ಒಂದು ಕೋಟಿ ರೂಪಾಯಿ ನೀಡಲು ಭರವಸೆ ನೀಡಿದ್ದಾರೆ. ಇನ್ನೂ ರೂ.1.75 ಕೋಟಿ ಹಣದ ಬೇಡಿಕೆಯಿದ್ದು, ಸಂಪನ್ಮೂಲ ಕ್ರೋಡೀಕರಿಸಲು ಮುಂದಾಗುವಂತೆ ಅವರು ಸಲಹೆ ಮಾಡಿದರು. <br /> <br /> ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಪಿ. ರಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ವಿವಿಧ ಉಪಸಮಿತಿಗಳು ಇದುವರೆಗೆ ಕೈಗೊಂಡಿರುವ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ಒದಗಿಸುವಂತೆ ಕೋರಿದರು.<br /> <br /> ವಸತಿ ಸಮಿತಿ ಅಧ್ಯಕ್ಷರಾದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಅನುಚೇತ್ ಮಾತನಾಡಿ, 7,500 ಮಂದಿಗೆ ವಸತಿ ಕಲ್ಪಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ವಸತಿ ಸೌಲಭ್ಯಕ್ಕಾಗಿ ರೂ.72 ಲಕ್ಷ ಬೇಕಿದೆ ಎಂದು ಅವರು ತಿಳಿಸಿದರು.<br /> <br /> ಆಹಾರ ಸಮಿತಿ ಪ್ರಧಾನ ಕಾರ್ಯದರ್ಶಿ ಕೇಶವ ಕಾಮತ್ ಮಾತನಾಡಿ, ಅತಿಥಿಗಳಿಗೆ ಪೊಲೀಸ್ ಕವಾಯತು ಮೈದಾನದಲ್ಲಿ ಊಟದ ವ್ಯವಸ್ಥೆಗಾಗಿ ತಯಾರಿ ಮಾಡಿಕೊಳ್ಳಲಾಗಿದೆ. ಊಟೋಪಚಾರಕ್ಕಾಗಿ ಸುಮಾರು ₨80ರಿಂದ 90 ಲಕ್ಷ ವೆಚ್ಚವಾಗಲಿದೆ ಎಂದು ಮಾಹಿತಿ ನೀಡಿದರು.<br /> <br /> ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಜಿ. ಚಿದ್ವಿಲಾಸ್ ಮಾತನಾಡಿ, 20 ರಿಂದ 30 ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.<br /> <br /> ಸಾರಿಗೆ ಸಮಿತಿ ಪ್ರಧಾನ ಕಾರ್ಯದರ್ಶಿ ಹೊಸೂರು ರಮೇಶ್ ಜೋಯಪ್ಪ ಮಾತನಾಡಿ, ಸಮ್ಮೇಳನದ ಚಟುವಟಿಕೆಗಳಿಗಾಗಿ ಶಾಲಾ ವಾಹನ ಸೇರಿದಂತೆ ಇತರೆ ವಾಹನಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.<br /> <br /> ಸ್ಮರಣ ಸಂಚಿಕೆ ಸಮಿತಿ ಅಧ್ಯಕ್ಷ ಜಿ.ರಾಜೇಂದ್ರ ಮಾತನಾಡಿ, ಸ್ಮರಣ ಸಂಚಿಕೆ ಹೊರತರಲು ಎಲ್ಲಾ ರೀತಿಯ ಸಿದ್ಧತೆಗಳು ನಡೆದಿವೆ. ಉತ್ತಮ ಮಾಹಿತಿಯನ್ನು ಒಳಗೊಂಡ ಅಂಕಣಗಳು ಪ್ರಕಟಿಸಲಾಗುತ್ತದೆ ಎಮದು ತಿಳಿಸಿದರು.<br /> ಕೈಪಿಡಿ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ. ಅವರು 20 ಪುಟದ ಬಣ್ಣದ ಕೈಪಿಡಿಯನ್ನು ಹೊರ ತರಲಾಗುತ್ತಿದೆ.<br /> <br /> ನೋಂದಾಯಿತ ಪ್ರತಿನಿಧಿಗಳಿಗೆ 10 ದಿನದ ಮೊದಲೇ ಕೈಪಿಡಿಯನ್ನು ತಲುಪಿಸಲು ಪ್ರಯತ್ನಿಸಲಾಗುವುದು ಎಂದರು.<br /> ಮಾಧ್ಯಮ ಸಮಿತಿ ಅಧ್ಯಕ್ಷ ಚಿನ್ನಸ್ವಾಮಿ ಮಾತನಾಡಿ, ರಾಜ್ಯದ ನಾನಾ ಜಿಲ್ಲೆಗಳಿಂದ ಆಗಮಿಸುವ ಸುಮಾರು 400 ಪತ್ರಕರ್ತರಿಗೆ ವಸತಿ ವ್ಯವಸ್ಥೆ ಕಲ್ಪಿಸಬೇಕು. ಒಟ್ಟಾರೆ 500 ಮಂದಿ ಪತ್ರಕರ್ತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ ಕಲ್ಪಿಸಬೇಕಿದೆ ಎಂದರು.<br /> <br /> ಪುಸ್ತಕ ಬಿಡುಗಡೆ ಸಮಿತಿ ಅಧ್ಯಕ್ಷ<br /> ಬಿ.ಎ. ಷಂಶುದ್ದೀನ್ ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ 25 ಪುಸ್ತಕಗಳನ್ನು ಹೊರತರಲಾಗುತ್ತಿದ್ದು, ಇದಕ್ಕಾಗಿ ₨ 18 ಲಕ್ಷ ವೆಚ್ಚವಾಗಲಿದೆ ಎಂದರು. <br /> <br /> ವಿವಿಧ ಉಪ ಸಮಿತಿಗಳ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಧನಂಜಯ ಪ್ರಾರ್ಥಿಸಿದರು. ಬಿ.ಎ. ಷಂಶುದ್ದೀನ್ ಸ್ವಾಗತಿಸಿದರು. ಮುನೀರ್ ಅಹಮ್ಮದ್ ಅವರು ನಿರೂಪಿಸಿ, ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ವಿಶಿಷ್ಟ ಸಂಸ್ಕೃತಿ, ಕ್ರೀಡೆಗೆ ಹೆಸರಾದ ಜಿಲ್ಲೆಯಲ್ಲಿ 32 ವರ್ಷಗಳ ಬಳಿಕ ನಡೆಯುತ್ತಿರುವ ಅಖಿಲ ಭಾರತ 80ನೇ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಎಲ್ಲರೂ ಕೈಜೋಡಿಸುವಂತೆ ಸಂಸದ ಎಚ್.ವಿಶ್ವನಾಥ್ ಕೋರಿದರು.<br /> <br /> ನಗರದ ಡಿ.ದೇವರಾಜ ಅರಸು ಭವನದಲ್ಲಿ ಸೋಮವಾರ ಅಖಿಲ ಭಾರತ 80ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಬಂಧಿಸಿದಂತೆ ಉಪ ಸಮಿತಿಗಳ ಪ್ರಮುಖರೊಂದಿಗೆ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು.<br /> <br /> ಸಮ್ಮೇಳನಕ್ಕೆ ಸರ್ಕಾರ ಬಜೆಟಿನಲ್ಲಿ ಒಂದು ಕೋಟಿ ರೂಪಾಯಿ ಮೀಸಲಿಟ್ಟಿದೆ. ಮುಖ್ಯಮಂತ್ರಿ ಅವರು ಹೆಚ್ಚುವರಿಯಾಗಿ ಒಂದು ಕೋಟಿ ರೂಪಾಯಿ ನೀಡಲು ಭರವಸೆ ನೀಡಿದ್ದಾರೆ. ಇನ್ನೂ ರೂ.1.75 ಕೋಟಿ ಹಣದ ಬೇಡಿಕೆಯಿದ್ದು, ಸಂಪನ್ಮೂಲ ಕ್ರೋಡೀಕರಿಸಲು ಮುಂದಾಗುವಂತೆ ಅವರು ಸಲಹೆ ಮಾಡಿದರು. <br /> <br /> ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಪಿ. ರಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ವಿವಿಧ ಉಪಸಮಿತಿಗಳು ಇದುವರೆಗೆ ಕೈಗೊಂಡಿರುವ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ಒದಗಿಸುವಂತೆ ಕೋರಿದರು.<br /> <br /> ವಸತಿ ಸಮಿತಿ ಅಧ್ಯಕ್ಷರಾದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಅನುಚೇತ್ ಮಾತನಾಡಿ, 7,500 ಮಂದಿಗೆ ವಸತಿ ಕಲ್ಪಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ವಸತಿ ಸೌಲಭ್ಯಕ್ಕಾಗಿ ರೂ.72 ಲಕ್ಷ ಬೇಕಿದೆ ಎಂದು ಅವರು ತಿಳಿಸಿದರು.<br /> <br /> ಆಹಾರ ಸಮಿತಿ ಪ್ರಧಾನ ಕಾರ್ಯದರ್ಶಿ ಕೇಶವ ಕಾಮತ್ ಮಾತನಾಡಿ, ಅತಿಥಿಗಳಿಗೆ ಪೊಲೀಸ್ ಕವಾಯತು ಮೈದಾನದಲ್ಲಿ ಊಟದ ವ್ಯವಸ್ಥೆಗಾಗಿ ತಯಾರಿ ಮಾಡಿಕೊಳ್ಳಲಾಗಿದೆ. ಊಟೋಪಚಾರಕ್ಕಾಗಿ ಸುಮಾರು ₨80ರಿಂದ 90 ಲಕ್ಷ ವೆಚ್ಚವಾಗಲಿದೆ ಎಂದು ಮಾಹಿತಿ ನೀಡಿದರು.<br /> <br /> ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಜಿ. ಚಿದ್ವಿಲಾಸ್ ಮಾತನಾಡಿ, 20 ರಿಂದ 30 ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.<br /> <br /> ಸಾರಿಗೆ ಸಮಿತಿ ಪ್ರಧಾನ ಕಾರ್ಯದರ್ಶಿ ಹೊಸೂರು ರಮೇಶ್ ಜೋಯಪ್ಪ ಮಾತನಾಡಿ, ಸಮ್ಮೇಳನದ ಚಟುವಟಿಕೆಗಳಿಗಾಗಿ ಶಾಲಾ ವಾಹನ ಸೇರಿದಂತೆ ಇತರೆ ವಾಹನಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.<br /> <br /> ಸ್ಮರಣ ಸಂಚಿಕೆ ಸಮಿತಿ ಅಧ್ಯಕ್ಷ ಜಿ.ರಾಜೇಂದ್ರ ಮಾತನಾಡಿ, ಸ್ಮರಣ ಸಂಚಿಕೆ ಹೊರತರಲು ಎಲ್ಲಾ ರೀತಿಯ ಸಿದ್ಧತೆಗಳು ನಡೆದಿವೆ. ಉತ್ತಮ ಮಾಹಿತಿಯನ್ನು ಒಳಗೊಂಡ ಅಂಕಣಗಳು ಪ್ರಕಟಿಸಲಾಗುತ್ತದೆ ಎಮದು ತಿಳಿಸಿದರು.<br /> ಕೈಪಿಡಿ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ. ಅವರು 20 ಪುಟದ ಬಣ್ಣದ ಕೈಪಿಡಿಯನ್ನು ಹೊರ ತರಲಾಗುತ್ತಿದೆ.<br /> <br /> ನೋಂದಾಯಿತ ಪ್ರತಿನಿಧಿಗಳಿಗೆ 10 ದಿನದ ಮೊದಲೇ ಕೈಪಿಡಿಯನ್ನು ತಲುಪಿಸಲು ಪ್ರಯತ್ನಿಸಲಾಗುವುದು ಎಂದರು.<br /> ಮಾಧ್ಯಮ ಸಮಿತಿ ಅಧ್ಯಕ್ಷ ಚಿನ್ನಸ್ವಾಮಿ ಮಾತನಾಡಿ, ರಾಜ್ಯದ ನಾನಾ ಜಿಲ್ಲೆಗಳಿಂದ ಆಗಮಿಸುವ ಸುಮಾರು 400 ಪತ್ರಕರ್ತರಿಗೆ ವಸತಿ ವ್ಯವಸ್ಥೆ ಕಲ್ಪಿಸಬೇಕು. ಒಟ್ಟಾರೆ 500 ಮಂದಿ ಪತ್ರಕರ್ತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ ಕಲ್ಪಿಸಬೇಕಿದೆ ಎಂದರು.<br /> <br /> ಪುಸ್ತಕ ಬಿಡುಗಡೆ ಸಮಿತಿ ಅಧ್ಯಕ್ಷ<br /> ಬಿ.ಎ. ಷಂಶುದ್ದೀನ್ ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ 25 ಪುಸ್ತಕಗಳನ್ನು ಹೊರತರಲಾಗುತ್ತಿದ್ದು, ಇದಕ್ಕಾಗಿ ₨ 18 ಲಕ್ಷ ವೆಚ್ಚವಾಗಲಿದೆ ಎಂದರು. <br /> <br /> ವಿವಿಧ ಉಪ ಸಮಿತಿಗಳ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಧನಂಜಯ ಪ್ರಾರ್ಥಿಸಿದರು. ಬಿ.ಎ. ಷಂಶುದ್ದೀನ್ ಸ್ವಾಗತಿಸಿದರು. ಮುನೀರ್ ಅಹಮ್ಮದ್ ಅವರು ನಿರೂಪಿಸಿ, ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>