ಸಮಿತಿಯಿಂದ ನೆರೆದಿದ್ದ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ದೇವಸ್ಥಾನ ಸಮಿತಿ ಅಧ್ಯಕ್ಷ ಪುಂಡರೀಕಾಕ್ಷ, ಕಾರ್ಯದರ್ಶಿ ರಾಜೀವ್, ರಾಮಾಂಜನೇಯ ಯುವಕ ಸಂಘದ ಅಧ್ಯಕ್ಷ ಜಗದೀಶ್, ಮುಖಂಡರಾದ ವಿ.ಎಚ್.ಪ್ರಸನ್ನ, ಕೆ.ಸಿ.ನಂಜುಂಡಸ್ವಾಮಿ, ಎಚ್.ಎಚ್.ರಾಮಚಂದ್ರ, ರಘು, ಸತೀಶ್, ಮುರಳೀಧರ್ ಇದ್ದರು. ಇದೇ ಸಂದರ್ಭದಲ್ಲಿ ವರ್ತಕರು ಪಾನಕ ವಿತರಿಸಿದರು. ರಾತ್ರಿ ಸಮಿತಿಯಿಂದ ಹನುಮಜಂಯತಿ ಅಂಗವಾಗಿ ಆಂಜನೇಯ ವಿಗ್ರಹವನ್ನು ವಿದ್ಯುತ್ ಅಲಂಕೃತ ಮಂಟಪದಲ್ಲಿ ಪ್ರತಿಷ್ಠಾಪಿಸಿ ಪಟ್ಟಣದಲ್ಲಿ ವಾದ್ಯಗೋಷ್ಠಿಗಳೊಂದಿಗೆ ಮೆರವಣಿಗೆ ನಡೆಸಲಾಯಿತು.