ಸಿದ್ದಾಪುರ (ಕೊಡಗು): ಮಂಗಳೂರಿನಲ್ಲಿ ಪ್ರತಿಭಟನಕಾರರ ಮೇಲೆ ಪೊಲೀಸ್ ಗುಂಡಿನ ದಾಳಿ ನಡೆಸಿರುವುದನ್ನು ಖಂಡಿಸಿ, ಸಿದ್ದಾಪುರ ಹಾಗೂ ನೆಲ್ಯಹುದಿಕೇರಿ ಪಟ್ಟಣದ ವರ್ತಕರು ಶುಕ್ರವಾರ ಸ್ವಯಂಪ್ರೇರಿತ ಬಂದ್ ಆಚರಿಸಿದರು.
ಬೆಳಗ್ಗಿನಿಂದಲೂ ಎರಡು ಪಟ್ಟಣದ ಬಹುತೇಕ ಅಂಗಡಿಗಳು ಸ್ವಯಂ ಪ್ರೇರಿತವಾಗಿ ಮುಚ್ಚಿದ್ದವು. ಕೆಲವು ಅಂಗಡಿಗಳು ಎಂದಿನಂತೆ ಕಾರ್ಯ ನಿರ್ವಹಿಸಿದ್ದವು. ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.