ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಎಪಿಸಿಎಂಎಸ್‌ಗೆ ₹ 10 ಲಕ್ಷ ಲಾಭ

Last Updated 19 ನವೆಂಬರ್ 2020, 1:24 IST
ಅಕ್ಷರ ಗಾತ್ರ

ಮುಳಬಾಗಿಲು: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘವೂ ಈ ಸಾಲಿನಲ್ಲಿ ₹ 10 ಲಕ್ಷ ಲಾಭಗಳಿಸಿದ್ದು ಆರ್ಥಿಕವಾಗಿ ಸದೃಢವಾಗಿದೆ ಎಂದು ಸಂಘದ ಅಧ್ಯಕ್ಷ ಆಲಂಗೂರು ಶಿವಣ್ಣ ತಿಳಿಸಿದರು.

ನಗರದ ಟಿಎಪಿಸಿಎಂಎಸ್ ಕಚೇರಿಯಲ್ಲಿ 2019-20ನೇ ಸಾಲಿನಲ್ಲಿ ನಡೆಯಲಿರುವ ಸರ್ವಸದಸ್ಯರ ಸಭೆಯ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಕಳೆದ ಮೂವತೈದು ವರ್ಷಗಳಿಂದ ನಗರಸಭೆಗೆ ಪಾವತಿಸಲಾಗದೆ ಬಾಕಿ ಇದ್ದ ಸುಮಾರು ₹ 30 ಲಕ್ಷ ತೆರಿಗೆ ಪಾವತಿಸಲಾಗಿದೆ. ಅಕ್ರಮಕ್ಕೆ ಗುರಿಯಾಗಿದ್ದ ಕೋಟ್ಯಂತರ ರೂಪಾಯಿ ಮೊತ್ತದ ಜಮೀನಿಗೆ ಹದ್ದುಬಸ್ತು ಮಾಡಿ ಕಾಂಪೌಂಡ್ ಹಾಕಲಾಗಿದೆ ಎಂದರು.

ಸಂಘದಲ್ಲಿ 1,470 ಸದಸ್ಯರಿದ್ದಾರೆ. ಸರ್ವಸದಸ್ಯರ ಸಭೆಯನ್ನು ಸಂಘದ ರೈತ ಸಮುದಾಯ ಭವನದಲ್ಲಿ ಡಿ. 6ಕ್ಕೆ ನಿಗದಿಪಡಿಸಲಾಗಿದೆ. ಅಬಕಾರಿ ಸಚಿವ ಎಚ್. ನಾಗೇಶ್‌ ಅವರನ್ನು ಆಹ್ವಾನಿಸಲಾಗಿದೆ ಎಂದರು.

ರೈತರಿಗೆ ಹಾಗೂ ಸದಸ್ಯರಿಗೆ ಅನುಕೂಲವಾಗುವಂತಹ ಎಲ್ಲಾ ತರಹದ ರಸಗೊಬ್ಬರ, ಪಶು ಆಹಾರ, ಗಾಣದ ಹಿಂಡಿ, ಬೂಸಾ, ಹೊಂಗೆ ಹಿಂಡಿ, ಬೇವಿನ ಹಿಂಡಿ ಹಾಗೂ ಹನಿ ನೀರಾವರಿ ಸಲಕರಣೆಗಳನ್ನು ಒದಗಿಸಲಾಗುತ್ತಿದೆ ಎಂದರು.

ಸಂಘದ ಮಾಜಿ ಅಧ್ಯಕ್ಷ ಎಂ.ಎಸ್. ಗೋವಿಂದರಾಮ್, ನಿರ್ದೇ‌ಶಕ ಕೆ.ಎನ್. ಕೃಷ್ಣಪ್ಪ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಎ. ರಾಮಕೃಷ್ಣ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT